ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆಯಲ್ಲಿ ಮಣ್ಣು ಸಾಗಾಣೆ: ಜೆಸಿಬಿ, ಟ್ರಾಕ್ಟರ್‌ ವಶ

Last Updated 2 ಆಗಸ್ಟ್ 2019, 19:55 IST
ಅಕ್ಷರ ಗಾತ್ರ

ಹುಳಿಯಾರು: ಪಟ್ಟಣ ಸಮೀಪದ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಣಿಕೆ ಮಾಡುತ್ತಿದ್ದ ಜೆಸಿಬಿ ಹಾಗೂ 4 ಟ್ರಾಕ್ಟರ್‌ ಗಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಶುಕ್ರವಾರ ವಶಪಡಿಸಿಕೊಂಡಿದ್ದಾರೆ.

ಪಟ್ಟಣದ ಅಮಾನಿ ಕೆರೆಯಲ್ಲಿ ಮಣ್ಣು ಅಕ್ರಮವಾಗಿ ಸಾಗಿಸುವುದು ಅವ್ಯಾಹಿತವಾಗಿ ನಡೆಯುತ್ತಿದೆ. ರೈತರ ತೋಟಗಳಿಗೆ ಸಾಗಿಸುವ ನೆಪವೊಡ್ಡಿ ಇಟ್ಟಿಗೆ ಕಾರ್ಖಾನೆಗಳಿಗೆ ಸಾಗಿಸುವುದು ನಡೆಯುತ್ತಿದೆ. ಈ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಶುಕ್ರವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು.

ಈ ವೇಳೆ ಮಣ್ಣು ತುಂಬುತ್ತಿದ್ದ ಜೆಸಿಬಿ ಮತ್ತು 4 ಟ್ರಾಕ್ಟರ್‌ ಗಳನ್ನು ವಶಪಡಿಸಿಕೊಂಡಿದ್ದಾರೆ. ಇಲಾಖೆಯ ಹಿರಿಯ ಅಧಿಕಾರಿ ದೀಪಾ ಸೇರಿದಂತೆ ಇತರ ಅಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದರು. ರೈತರಾದ ಎಂಜಿನಿಯರ್‌ ಲಿಂಗರಾಜು, ರೈತಸಂಘದ ಹೊಸಹಳ್ಳಿ ಚಂದ್ರಣ್ಣ, ದುರ್ಗರಾಜು, ನರಸಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT