<p><strong>ಕೋರ (ತುಮಕೂರು):</strong> ಹೋಬಳಿಯ ಬತ್ಸಂದ್ರ ಗ್ರಾಮದಲ್ಲಿ ಸರ್ಕಾರಕ್ಕೆ ಸೇರಿದ ಗೋಮಾಳದಿಂದ ಅಕ್ರಮವಾಗಿ ಮಣ್ಣು ತೆಗೆದು ಸಾಗಣೆ ಮಾಡುತ್ತಿದ್ದು, ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>ಗೋಮಾಳದಲ್ಲಿ ಅಕ್ರಮವಾಗಿ ಜೆಸಿಬಿ ಯಂತ್ರ ಬಳಸಿ ಟಿಪ್ಪರ್, ಟ್ರ್ಯಾಕ್ಟರ್ಗಳ ಮೂಲಕ ರಾತ್ರೋರಾತ್ರಿ ಸಾವಿರಾರು ಟನ್ಗಳಷ್ಟು ಮಣ್ಣು ತೆಗೆದು ಬೇರೆಡೆ ದಾಸ್ತಾನು ಮಾಡಲಾಗುತ್ತಿದೆ. ನಂತರ ರಾಜಾರೋಷವಾಗಿ ಮಾರಾಟ ಮಾಡಲಾಗುತ್ತಿದೆ. ಸರ್ಕಾರಕ್ಕೆ ಸಂದಾಯವಾಗಬೇಕಿದ್ದ ತೆರಿಗೆ ಕಟ್ಟದೆ ವಂಚಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.</p>.<p>ಈ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಗಣಿ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಶಾಮೀಲಾಗಿ ಅಕ್ರಮವಾಗಿ ಮಣ್ಣು ತೆಗೆದು ಮಾರಾಟ ಮಾಡಲು ನೆರವಾಗುತ್ತಿದ್ದಾರೆ. ಜಿಲ್ಲಾ ಆಡಳಿತ ಕಣ್ಣುಮುಚ್ಚಿ ಕುಳಿತಿದೆ ಎಂದು ದೂರಿದ್ದಾರೆ.</p>.<p>ರೈತರೊಬ್ಬರು ತಮ್ಮ ಜಮೀನಿಗೆ ಮಣ್ಣು ಸಾಗಣೆ ಮಾಡಿದರೆ ಪ್ರಕರಣ ದಾಖಲಿಸಲಾಗುತ್ತಿದೆ. ಆದರೆ ದಂಧೆ ನಡೆಸುವವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಭೂ ಮಾಫಿಯಾಗೆ ಜಿಲ್ಲಾ ಆಡಳಿತ ಮಣಿದಿದೆ. ಮಣ್ಣು ಸಾಗಣೆ ತಡೆಯದಿದ್ದರೆ ಹೋರಾಟ ನಡೆಸಲಾಗುವುದು ಎಚ್ಚರಿಸಿದ್ದಾರೆ.</p>.<p>ಮಣ್ಣು ಮಾರಾಟ ಮಾಡಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಮಣ್ಣು ತೆಗೆಯದಂತೆ, ಸಂಗ್ರಹಿಸಿ ಮಾರಾಟ ಮಾಡದಂತೆ ಕ್ರಮ ವಹಿಸಬೇಕು. ಈಗಾಗಲೇ ಮಾರಾಟ ಮಾಡಿರುವ ಸಾವಿರಾರು ಟನ್ ಮಣ್ಣಿಗೆ ರಾಜಧನ ವಸೂಲಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋರ (ತುಮಕೂರು):</strong> ಹೋಬಳಿಯ ಬತ್ಸಂದ್ರ ಗ್ರಾಮದಲ್ಲಿ ಸರ್ಕಾರಕ್ಕೆ ಸೇರಿದ ಗೋಮಾಳದಿಂದ ಅಕ್ರಮವಾಗಿ ಮಣ್ಣು ತೆಗೆದು ಸಾಗಣೆ ಮಾಡುತ್ತಿದ್ದು, ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>ಗೋಮಾಳದಲ್ಲಿ ಅಕ್ರಮವಾಗಿ ಜೆಸಿಬಿ ಯಂತ್ರ ಬಳಸಿ ಟಿಪ್ಪರ್, ಟ್ರ್ಯಾಕ್ಟರ್ಗಳ ಮೂಲಕ ರಾತ್ರೋರಾತ್ರಿ ಸಾವಿರಾರು ಟನ್ಗಳಷ್ಟು ಮಣ್ಣು ತೆಗೆದು ಬೇರೆಡೆ ದಾಸ್ತಾನು ಮಾಡಲಾಗುತ್ತಿದೆ. ನಂತರ ರಾಜಾರೋಷವಾಗಿ ಮಾರಾಟ ಮಾಡಲಾಗುತ್ತಿದೆ. ಸರ್ಕಾರಕ್ಕೆ ಸಂದಾಯವಾಗಬೇಕಿದ್ದ ತೆರಿಗೆ ಕಟ್ಟದೆ ವಂಚಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.</p>.<p>ಈ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಗಣಿ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಶಾಮೀಲಾಗಿ ಅಕ್ರಮವಾಗಿ ಮಣ್ಣು ತೆಗೆದು ಮಾರಾಟ ಮಾಡಲು ನೆರವಾಗುತ್ತಿದ್ದಾರೆ. ಜಿಲ್ಲಾ ಆಡಳಿತ ಕಣ್ಣುಮುಚ್ಚಿ ಕುಳಿತಿದೆ ಎಂದು ದೂರಿದ್ದಾರೆ.</p>.<p>ರೈತರೊಬ್ಬರು ತಮ್ಮ ಜಮೀನಿಗೆ ಮಣ್ಣು ಸಾಗಣೆ ಮಾಡಿದರೆ ಪ್ರಕರಣ ದಾಖಲಿಸಲಾಗುತ್ತಿದೆ. ಆದರೆ ದಂಧೆ ನಡೆಸುವವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಭೂ ಮಾಫಿಯಾಗೆ ಜಿಲ್ಲಾ ಆಡಳಿತ ಮಣಿದಿದೆ. ಮಣ್ಣು ಸಾಗಣೆ ತಡೆಯದಿದ್ದರೆ ಹೋರಾಟ ನಡೆಸಲಾಗುವುದು ಎಚ್ಚರಿಸಿದ್ದಾರೆ.</p>.<p>ಮಣ್ಣು ಮಾರಾಟ ಮಾಡಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಮಣ್ಣು ತೆಗೆಯದಂತೆ, ಸಂಗ್ರಹಿಸಿ ಮಾರಾಟ ಮಾಡದಂತೆ ಕ್ರಮ ವಹಿಸಬೇಕು. ಈಗಾಗಲೇ ಮಾರಾಟ ಮಾಡಿರುವ ಸಾವಿರಾರು ಟನ್ ಮಣ್ಣಿಗೆ ರಾಜಧನ ವಸೂಲಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>