ತುಮಕೂರು: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿ.ಸೋಮಣ್ಣ ಸೇರಿದಂತೆ ಇಬ್ಬರು ಸೋಮವಾರ ನಾಮಪತ್ರ ಸಲ್ಲಿಸಿದರು.
ಶಾಸಕರಾದ ಬಿ.ಸುರೇಶ್ಗೌಡ, ಸಿ.ಬಿ.ಸುರೇಶ್ಬಾಬು, ಮುಖಂಡರಾದ ಪಿ.ಆರ್.ಸುಧಾಕರ್ಲಾಲ್, ಅನಿಲ್ಕುಮಾರ್ ಅವರೊಂದಿಗೆ ಬಂದು ಸೋಮಣ್ಣ ನಾಮಪತ್ರ ಸಲ್ಲಿಸಿದರು. ಇಂದು ಒಂದು ಸೆಟ್ ನಾಮಪತ್ರ ಸಲ್ಲಿಸಿದ್ದು, ಬುಧವಾರ ಬೃಹತ್ ಮೆರವಣಿಗೆ ನಡೆಸಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ತುರುವೇಕೆರೆ ತಾಲ್ಲೂಕಿನ ಕಲ್ಕೆರೆ ಗ್ರಾಮದ ಕಪನಿಗೌಡ ನಾಮಪತ್ರ ಸಲ್ಲಿಸಿದರು.