<p><strong>ತುಮಕೂರು</strong>: ಯುವ ಕಾಂಗ್ರೆಸ್ ಚುನಾವಣೆಯು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ನಡುವೆ ವೈಮನಸ್ಸು ಮೂಡಲು ಕಾರಣವಾಗುತ್ತಿದೆ. ಚುನಾವಣೆ ಬದಲು ಅವಿರೋಧ ಆಯ್ಕೆ ಮಾಡಬೇಕು ಎಂದು ಯುವಕಾಂಗ್ರೆಸ್ ಮುಖಂಡ ಆರ್.ರಾಜೇಂದ್ರ ಆಗ್ರಹಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಯುವಕಾಂಗ್ರೆಸ್ ಚುನಾವಣೆಗೆ ಜಿಲ್ಲೆಯಲ್ಲಿಯೇ 18ರಿಂದ 20 ಸಾವಿರ ಮತಗಳು ಇದ್ದವು. 8ರಿಂದ 10 ಸಾವಿರ ಮತಗಳು ತಿರಸ್ಕೃತವಾದವು. ರಾಜ್ಯ, ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಯುವಕಾಂಗ್ರೆಸ್ ಚುನಾವಣೆ ಬಗ್ಗೆ ಗೊಂದಲವಿದೆ’ ಎಂದು ಹೇಳಿದರು.</p>.<p>‘ರಾಜ್ಯಮಟ್ಟದಲ್ಲಿ ಮಹಮ್ಮದ್ ನಲಪಾಡ್ ಮತ್ತು ರಕ್ಷಾ ರಾಮಯ್ಯ ಆಯ್ಕೆಗೆ ಸಂಬಂಧಿಸಿದಂತೆ ಗೊಂದಲ ಮುಂದುವರಿದಿದೆ. ಯಾರಾದರೂ ಒಬ್ಬರ ಪರವಾಗಿ ಕೆಲಸ ಮಾಡಿದರೆ ಮತ್ತೊಂದು ಬಣ ಅವರನ್ನು ವಿರೋಧಿ<br />ಗಳು ಎನ್ನುವ ರೀತಿಯಲ್ಲಿ ನೋಡುತ್ತದೆ. ಯುವ ಕಾಂಗ್ರೆಸ್ ಕಾರ್ಯಕರ್ತರು ಎದುರಾಳಿ ಪಕ್ಷಗಳ ವಿರುದ್ಧ ಹೋರಾಡ<br />ಬೇಕು. ಆದರೆ ಈ ಚುನಾವಣೆಗಳು ನಮ್ಮ ನಮ್ಮ ನಡುವೆಯೇ ಮನಸ್ತಾಪ, ಒಡಕಿಗೆ ಕಾರಣವಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಕಾರ್ಯಕರ್ತರ ನಡುವೆ ಒಡಕಿಗೆ ಯುವ ಕಾಂಗ್ರೆಸ್ ಚುನಾವಣೆಕಾರಣವಾಗುತ್ತಿದೆ. ಇದರಿಂದ ಪಕ್ಷದ ಕಾರ್ಯಕರ್ತರು ಅನ್ಯ ಪಕ್ಷಗಳನ್ನು ಸೇರುತ್ತಿದ್ದಾರೆ. ಈ ವಿಚಾರವನ್ನು ಯುವಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಗಮನಕ್ಕೂ ತರಲಾಗಿದೆ. ಅವಿರೋಧ ಆಯ್ಕೆ ನಡೆಸಿ ಎಂದು ನಾನು ಕೋರಿದ್ದೇನೆ’ ಎಂದರು.</p>.<p>ಒಬ್ಬೊಬ್ಬ ಮುಖಂಡರು ಒಬ್ಬೊಬ್ಬ ಅಭ್ಯರ್ಥಿಗೆ ಸಹಕಾರ ನೀಡುತ್ತಾರೆ. ಈ ಕಾರಣದಿಂದ ಕಾರ್ಯಕರ್ತರು, ಮುಖಂಡರ ನಡುವೆ ಬೇಗುದಿ ಹೆಚ್ಚಿಸುತ್ತಿದೆ.ಫೆಬ್ರುವರಿ ಅಂತ್ಯ ಅಥವಾ ಮಾರ್ಚ್ನಲ್ಲಿ ಯುವ ಕಾಂಗ್ರೆಸ್ನಿಂದ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.</p>.<p class="Subhead">ಜಿಲ್ಲಾಧ್ಯಕ್ಷರ ಬದಲಿಗೆ ಆಗ್ರಹ: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರು ಸುದ್ದಿಗೋಷ್ಠಿಯಲ್ಲಿ ಪಾಲ್ಗೊಳ್ಳದಿರುವುದು ಮತ್ತು ಪಕ್ಷದ ಕಚೇರಿಗೆ ಬೀಗ ಹಾಕಿದ್ದರ ಬಗ್ಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಸುದ್ದಿಗೋಷ್ಠಿ ಆರಂಭದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರು ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳನ್ನು ಬದಲಾವಣೆ ಮಾಡಬೇಕು. ಆಗ ಮಾತ್ರ ಪಕ್ಷ ಬೆಳೆಯುತ್ತದೆ ಎಂದು ರಾಜೇಂದ್ರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಆ ವೇಳೆಗೆ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ರಾಮಕೃಷ್ಣ ಬಂದರು.</p>.<p>ಆರ್.ರಾಮಕೃಷ್ಣ ಮಾತನಾಡಿ, ಯುವ ಕಾಂಗ್ರೆಸ್ ಪದಾಧಿಕಾರಿಗಳಿಂದ ಪಕ್ಷ ಸದೃಢವಾಗಿ ಬೆಳೆಯುತ್ತದೆ. ಇವರನ್ನು ಅಭಿನಂದಿಸುವೆ ಎಂದು ಹೇಳಿದರು.</p>.<p>ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಶಶಿ ಹುಲಿಕುಂಟೆಮಠ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಆಕಾಶ್, ಮೋಹನ್, ವೆಂಕಟೇಶ್, ಪ್ರತಾಪ್, ಮಂಜುನಾಥ್ ಸ್ವಾಮಿ ಮತ್ತಿತರರನ್ನು ಅಭಿನಂದಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಯುವ ಕಾಂಗ್ರೆಸ್ ಚುನಾವಣೆಯು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ನಡುವೆ ವೈಮನಸ್ಸು ಮೂಡಲು ಕಾರಣವಾಗುತ್ತಿದೆ. ಚುನಾವಣೆ ಬದಲು ಅವಿರೋಧ ಆಯ್ಕೆ ಮಾಡಬೇಕು ಎಂದು ಯುವಕಾಂಗ್ರೆಸ್ ಮುಖಂಡ ಆರ್.ರಾಜೇಂದ್ರ ಆಗ್ರಹಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಯುವಕಾಂಗ್ರೆಸ್ ಚುನಾವಣೆಗೆ ಜಿಲ್ಲೆಯಲ್ಲಿಯೇ 18ರಿಂದ 20 ಸಾವಿರ ಮತಗಳು ಇದ್ದವು. 8ರಿಂದ 10 ಸಾವಿರ ಮತಗಳು ತಿರಸ್ಕೃತವಾದವು. ರಾಜ್ಯ, ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಯುವಕಾಂಗ್ರೆಸ್ ಚುನಾವಣೆ ಬಗ್ಗೆ ಗೊಂದಲವಿದೆ’ ಎಂದು ಹೇಳಿದರು.</p>.<p>‘ರಾಜ್ಯಮಟ್ಟದಲ್ಲಿ ಮಹಮ್ಮದ್ ನಲಪಾಡ್ ಮತ್ತು ರಕ್ಷಾ ರಾಮಯ್ಯ ಆಯ್ಕೆಗೆ ಸಂಬಂಧಿಸಿದಂತೆ ಗೊಂದಲ ಮುಂದುವರಿದಿದೆ. ಯಾರಾದರೂ ಒಬ್ಬರ ಪರವಾಗಿ ಕೆಲಸ ಮಾಡಿದರೆ ಮತ್ತೊಂದು ಬಣ ಅವರನ್ನು ವಿರೋಧಿ<br />ಗಳು ಎನ್ನುವ ರೀತಿಯಲ್ಲಿ ನೋಡುತ್ತದೆ. ಯುವ ಕಾಂಗ್ರೆಸ್ ಕಾರ್ಯಕರ್ತರು ಎದುರಾಳಿ ಪಕ್ಷಗಳ ವಿರುದ್ಧ ಹೋರಾಡ<br />ಬೇಕು. ಆದರೆ ಈ ಚುನಾವಣೆಗಳು ನಮ್ಮ ನಮ್ಮ ನಡುವೆಯೇ ಮನಸ್ತಾಪ, ಒಡಕಿಗೆ ಕಾರಣವಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಕಾರ್ಯಕರ್ತರ ನಡುವೆ ಒಡಕಿಗೆ ಯುವ ಕಾಂಗ್ರೆಸ್ ಚುನಾವಣೆಕಾರಣವಾಗುತ್ತಿದೆ. ಇದರಿಂದ ಪಕ್ಷದ ಕಾರ್ಯಕರ್ತರು ಅನ್ಯ ಪಕ್ಷಗಳನ್ನು ಸೇರುತ್ತಿದ್ದಾರೆ. ಈ ವಿಚಾರವನ್ನು ಯುವಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಗಮನಕ್ಕೂ ತರಲಾಗಿದೆ. ಅವಿರೋಧ ಆಯ್ಕೆ ನಡೆಸಿ ಎಂದು ನಾನು ಕೋರಿದ್ದೇನೆ’ ಎಂದರು.</p>.<p>ಒಬ್ಬೊಬ್ಬ ಮುಖಂಡರು ಒಬ್ಬೊಬ್ಬ ಅಭ್ಯರ್ಥಿಗೆ ಸಹಕಾರ ನೀಡುತ್ತಾರೆ. ಈ ಕಾರಣದಿಂದ ಕಾರ್ಯಕರ್ತರು, ಮುಖಂಡರ ನಡುವೆ ಬೇಗುದಿ ಹೆಚ್ಚಿಸುತ್ತಿದೆ.ಫೆಬ್ರುವರಿ ಅಂತ್ಯ ಅಥವಾ ಮಾರ್ಚ್ನಲ್ಲಿ ಯುವ ಕಾಂಗ್ರೆಸ್ನಿಂದ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.</p>.<p class="Subhead">ಜಿಲ್ಲಾಧ್ಯಕ್ಷರ ಬದಲಿಗೆ ಆಗ್ರಹ: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರು ಸುದ್ದಿಗೋಷ್ಠಿಯಲ್ಲಿ ಪಾಲ್ಗೊಳ್ಳದಿರುವುದು ಮತ್ತು ಪಕ್ಷದ ಕಚೇರಿಗೆ ಬೀಗ ಹಾಕಿದ್ದರ ಬಗ್ಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಸುದ್ದಿಗೋಷ್ಠಿ ಆರಂಭದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರು ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳನ್ನು ಬದಲಾವಣೆ ಮಾಡಬೇಕು. ಆಗ ಮಾತ್ರ ಪಕ್ಷ ಬೆಳೆಯುತ್ತದೆ ಎಂದು ರಾಜೇಂದ್ರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಆ ವೇಳೆಗೆ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ರಾಮಕೃಷ್ಣ ಬಂದರು.</p>.<p>ಆರ್.ರಾಮಕೃಷ್ಣ ಮಾತನಾಡಿ, ಯುವ ಕಾಂಗ್ರೆಸ್ ಪದಾಧಿಕಾರಿಗಳಿಂದ ಪಕ್ಷ ಸದೃಢವಾಗಿ ಬೆಳೆಯುತ್ತದೆ. ಇವರನ್ನು ಅಭಿನಂದಿಸುವೆ ಎಂದು ಹೇಳಿದರು.</p>.<p>ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಶಶಿ ಹುಲಿಕುಂಟೆಮಠ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಆಕಾಶ್, ಮೋಹನ್, ವೆಂಕಟೇಶ್, ಪ್ರತಾಪ್, ಮಂಜುನಾಥ್ ಸ್ವಾಮಿ ಮತ್ತಿತರರನ್ನು ಅಭಿನಂದಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>