<p><strong>ತುಮಕೂರು:</strong> ಅಂಬೇಡ್ಕರ್ ಬರಹ ಮತ್ತು ಭಾಷಣಗಳು ಸಮಾನತೆ ಸಾರುವವರಿಗೆ ಬೆಳಕಾಗಿ, ಅಸಮಾನತೆಯ ಕಿಡಿ ಹಚ್ಚುವ ಮೂಢರಿಗೆ ಬೆಂಕಿಯಾಗಿವೆ ಎಂದು ಬೆಂಗಳೂರು ಕ್ರೈಸ್ಟ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಆಯುಷ್ಮಾನ್ ಆರ್.ಮಹೇಶ್ ಹೇಳಿದರು.</p><p>ವಿ.ವಿಯಲ್ಲಿ ಶುಕ್ರವಾರ ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದಿಂದ ಆಯೋಜಿಸಿದ್ದ ಬಿ.ಆರ್.ಅಂಬೇಡ್ಕರ್ ಸಮಗ್ರ ಭಾಷಣ ಮತ್ತು ಬರಹಗಳು ಹಾಗೂ ಸಂವಿಧಾನ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p><p>ನಾಗರಿಕತೆ ಹೆಚ್ಚಾದಂತೆ ಅಸಮಾನತೆ, ಜಾತಿ ವ್ಯವಸ್ಥೆಯ ಬೇಲಿ ದಾಟಬೇಕಾದ ನಾವೆಲ್ಲರೂ, ಮತ್ತದೇ ಮೂಢತೆಯ ಕತ್ತಲಿನ ಕಡೆಗೆ ಹೋಗುತ್ತಿದ್ದೇವೆ. ಜಾತಿ, ಮತ, ಪಂಗಡಗಳಿಂದ ಮುಕ್ತವಾದ ಭವ್ಯ ಭಾರತವನ್ನು ನೋಡುವುದು ಅಂಬೇಡ್ಕರ್ ಕನಸಾಗಿತ್ತು. ಅದಕ್ಕಾಗಿ ಅವರು ಶ್ರಮಿಸಿದ್ದರು ಎಂದರು.</p><p>ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಂಯೋಜಕ ಚಿಕ್ಕಣ್ಣ, ‘ನಾವೆಲ್ಲರೂ ಅಂಬೇಡ್ಕರ್ ಅವರನ್ನು ಒಂದು ಜಾತಿ, ಮತ, ಸಮುದಾಯಕ್ಕೆ ಸೇರಿಸಿದರೆ, ನಮ್ಮ ಮನಸು ಸಂಕುಚಿತವಾದದ್ದು ಎಂದೇ ಹೇಳಬಹುದು’ ಎಂದು ಅಭಿಪ್ರಾಯಪಟ್ಟರು.</p><p>ವಿ.ವಿ ಕುಲಸಚಿವೆ ನಾಹಿದಾ ಜಮ್ ಜಮ್, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆ ಸಂಯೋಜಕ ಕೆ.ಮಹಾಲಿಂಗ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಅಂಬೇಡ್ಕರ್ ಬರಹ ಮತ್ತು ಭಾಷಣಗಳು ಸಮಾನತೆ ಸಾರುವವರಿಗೆ ಬೆಳಕಾಗಿ, ಅಸಮಾನತೆಯ ಕಿಡಿ ಹಚ್ಚುವ ಮೂಢರಿಗೆ ಬೆಂಕಿಯಾಗಿವೆ ಎಂದು ಬೆಂಗಳೂರು ಕ್ರೈಸ್ಟ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಆಯುಷ್ಮಾನ್ ಆರ್.ಮಹೇಶ್ ಹೇಳಿದರು.</p><p>ವಿ.ವಿಯಲ್ಲಿ ಶುಕ್ರವಾರ ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದಿಂದ ಆಯೋಜಿಸಿದ್ದ ಬಿ.ಆರ್.ಅಂಬೇಡ್ಕರ್ ಸಮಗ್ರ ಭಾಷಣ ಮತ್ತು ಬರಹಗಳು ಹಾಗೂ ಸಂವಿಧಾನ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p><p>ನಾಗರಿಕತೆ ಹೆಚ್ಚಾದಂತೆ ಅಸಮಾನತೆ, ಜಾತಿ ವ್ಯವಸ್ಥೆಯ ಬೇಲಿ ದಾಟಬೇಕಾದ ನಾವೆಲ್ಲರೂ, ಮತ್ತದೇ ಮೂಢತೆಯ ಕತ್ತಲಿನ ಕಡೆಗೆ ಹೋಗುತ್ತಿದ್ದೇವೆ. ಜಾತಿ, ಮತ, ಪಂಗಡಗಳಿಂದ ಮುಕ್ತವಾದ ಭವ್ಯ ಭಾರತವನ್ನು ನೋಡುವುದು ಅಂಬೇಡ್ಕರ್ ಕನಸಾಗಿತ್ತು. ಅದಕ್ಕಾಗಿ ಅವರು ಶ್ರಮಿಸಿದ್ದರು ಎಂದರು.</p><p>ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಂಯೋಜಕ ಚಿಕ್ಕಣ್ಣ, ‘ನಾವೆಲ್ಲರೂ ಅಂಬೇಡ್ಕರ್ ಅವರನ್ನು ಒಂದು ಜಾತಿ, ಮತ, ಸಮುದಾಯಕ್ಕೆ ಸೇರಿಸಿದರೆ, ನಮ್ಮ ಮನಸು ಸಂಕುಚಿತವಾದದ್ದು ಎಂದೇ ಹೇಳಬಹುದು’ ಎಂದು ಅಭಿಪ್ರಾಯಪಟ್ಟರು.</p><p>ವಿ.ವಿ ಕುಲಸಚಿವೆ ನಾಹಿದಾ ಜಮ್ ಜಮ್, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆ ಸಂಯೋಜಕ ಕೆ.ಮಹಾಲಿಂಗ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>