ಅಧಿಕಾರ, ಕಾರ್ಯಗಳನ್ನು ಸೂಕ್ತ ರೀತಿಯಲ್ಲಿ ನಿರ್ದೇಶಿಸಬೇಕು. ಸಾಮಾನ್ಯರ ಮೇಲೆ ಪ್ರಯೋಗಿಸಬಾರದು. ಸ್ಥಾನ ಬದಲಾದಂತೆ ಪ್ರಬುದ್ಧರಾಗಿ, ಸಮಾಜದ ರಕ್ಷಣೆಗಾಗಿ ದುಡಿಯಬೇಕು, ರಾಷ್ಟ್ರ ನಿರ್ಮಾಣದಲ್ಲಿ ಕೈ ಜೋಡಿಸಬೇಕು. ಈಗಿನ ಮಕ್ಕಳಲ್ಲಿ ಸಾಮಾನ್ಯ ಜ್ಞಾನ, ಪ್ರಜ್ಞೆ ಇಲ್ಲದೆ ಅಪ್ರಬುದ್ಧರಾಗಿದ್ದಾರೆ. ನನ್ನ ಮನೆಯಷ್ಟೇ ಉದ್ಧಾರ ಆಗಬೇಕು ಎಂಬ ಪೋಷಕರ ಮನಸ್ಥಿತಿಯಿಂದ ದೇಶದ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದರು.