<p><strong>ಕೊರಟಗೆರೆ: </strong>ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಗುರುವಾರ ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ಜರುಗಿದವು. ಕೋವಿಡ್ನಿಂದ ಕಳೆಗುಂದಿದ್ದ ರಾಮ ನವಮಿ ಆಚರಣೆಯು ಈ ವರ್ಷ ಕಳೆಗಟ್ಟಿತ್ತು.</p>.<p>ಪಟ್ಟಣದ ವಿವಿಧ ದೇವಾಲಯಗಳಲ್ಲಿ ಹಬ್ಬದ ಅಂಗವಾಗಿ ವಿಶೇಷ ಪೂಜೆ, ಹೋಮ, ಹವನ ಇತರೆ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳ<br />ಲಾಗಿತ್ತು.</p>.<p>ಪಟ್ಟಣದ ಗಂಗಾಧರೇಶ್ವರ ದೇವಸ್ಥಾನ, ಕಣ್ಣಪ್ಪ ದೇವಸ್ಥಾನ, ಶನೈಶ್ವರ ದೇವಾಲಯ, ಬೈಲಾಂಜನೇಸ್ವಾಮಿ ದೇಗುಲ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆ<br />ಹಮ್ಮಿಕೊಳ್ಳಲಾಗಿತ್ತು.</p>.<p>ಭಕ್ತರಿಗೆ ಪಾನಕ, ಮಜ್ಜಿಗೆ, ಹೆಸರು ಬೇಳೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಎಲ್ಲಾ ದೇವಾಲಯಗಳಲ್ಲಿ ಭಕ್ತರು ಬೆಳಿಗ್ಗಿನಿಂದಲೇ ಸಾಲುಗಟ್ಟಿ ನಿಂತು ಪೂಜೆ ಸಲ್ಲಿಸಿದರು.</p>.<p>ತಾಲ್ಲೂಕಿನ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ಹಬ್ಬದ ಅಂಗವಾಗಿ ಭಕ್ತರ ಸಂಖ್ಯೆಯೂ ಹೆಚ್ಚಾಗಿತ್ತು. ಭಕ್ತರಿಗಾಗಿ ದೇವಾಲಯದಲ್ಲಿ ಪಾನಕ, ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ತಾಲ್ಲೂಕಿನ ಬಹುತೇಕ ಗ್ರಾಮದ ದೇವಾಲಯಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.</p>.<p>ಕೆಲವು ದೇವಾಲಯಗಳಲ್ಲಿ ಯುವಕರು ಸಮವಸ್ತ್ರ ಧರಿಸಿ ಪಾನಕ, ಮಜ್ಜಿಗೆ, ಪ್ರಸಾದ ಹಂಚುವಲ್ಲಿ ನಿರತರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊರಟಗೆರೆ: </strong>ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಗುರುವಾರ ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ಜರುಗಿದವು. ಕೋವಿಡ್ನಿಂದ ಕಳೆಗುಂದಿದ್ದ ರಾಮ ನವಮಿ ಆಚರಣೆಯು ಈ ವರ್ಷ ಕಳೆಗಟ್ಟಿತ್ತು.</p>.<p>ಪಟ್ಟಣದ ವಿವಿಧ ದೇವಾಲಯಗಳಲ್ಲಿ ಹಬ್ಬದ ಅಂಗವಾಗಿ ವಿಶೇಷ ಪೂಜೆ, ಹೋಮ, ಹವನ ಇತರೆ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳ<br />ಲಾಗಿತ್ತು.</p>.<p>ಪಟ್ಟಣದ ಗಂಗಾಧರೇಶ್ವರ ದೇವಸ್ಥಾನ, ಕಣ್ಣಪ್ಪ ದೇವಸ್ಥಾನ, ಶನೈಶ್ವರ ದೇವಾಲಯ, ಬೈಲಾಂಜನೇಸ್ವಾಮಿ ದೇಗುಲ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆ<br />ಹಮ್ಮಿಕೊಳ್ಳಲಾಗಿತ್ತು.</p>.<p>ಭಕ್ತರಿಗೆ ಪಾನಕ, ಮಜ್ಜಿಗೆ, ಹೆಸರು ಬೇಳೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಎಲ್ಲಾ ದೇವಾಲಯಗಳಲ್ಲಿ ಭಕ್ತರು ಬೆಳಿಗ್ಗಿನಿಂದಲೇ ಸಾಲುಗಟ್ಟಿ ನಿಂತು ಪೂಜೆ ಸಲ್ಲಿಸಿದರು.</p>.<p>ತಾಲ್ಲೂಕಿನ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ಹಬ್ಬದ ಅಂಗವಾಗಿ ಭಕ್ತರ ಸಂಖ್ಯೆಯೂ ಹೆಚ್ಚಾಗಿತ್ತು. ಭಕ್ತರಿಗಾಗಿ ದೇವಾಲಯದಲ್ಲಿ ಪಾನಕ, ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ತಾಲ್ಲೂಕಿನ ಬಹುತೇಕ ಗ್ರಾಮದ ದೇವಾಲಯಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.</p>.<p>ಕೆಲವು ದೇವಾಲಯಗಳಲ್ಲಿ ಯುವಕರು ಸಮವಸ್ತ್ರ ಧರಿಸಿ ಪಾನಕ, ಮಜ್ಜಿಗೆ, ಪ್ರಸಾದ ಹಂಚುವಲ್ಲಿ ನಿರತರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>