ಈ ಕಾರ್ಯಕ್ರಮವನ್ನು ಶಾಸಕ ಡಾ.ಎಚ್.ಡಿ.ರಂಗನಾಥ್ ಉದ್ಘಾಟನೆ ಮಾಡುವರು. ತುಮಕೂರಿನ ರಾಮಕೃಷ್ಣ- ವಿವೇಕಾನಂದ ಆಶ್ರಮದ ಆಧ್ಯಕ್ಷ ಸ್ವಾಮಿ ವೀರೇಶಾನಂದ ಸರಸ್ವತಿ ಅವರು ಸಾನ್ನಿಧ್ಯ ವಹಿಸಲಿದ್ದಾರೆ. ಭಗವನ್ನಾಮ ಸಂಕೀರ್ತನೆ ಹಾಗೂ ವಿಶೇಷ ಪ್ರವಚನ ನೀಡುವರು. ಸ್ವಾಮಿ ಧೀರಾನಂದಜೀ ಮಹಾರಾಜ್ ಹಾಗೂ ಸ್ವಾಮಿ ಪರಮಾನಂದ ಓಂ ಅವರು ಪಾಲ್ಗೊಳ್ಳುವರು. ಡಿವೈಎಸ್ಪಿ ರಾಮಲಿಂಗೇಗೌಡ ಅತಿಥಿಯಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.