<p><strong>ತುಮಕೂರು:</strong> ‘ಪತ್ರಿಕೆ ಓದುಗರ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಭಾವನೆ ಇದೆ. ಆದರೆ ನಾನು ನಿತ್ಯ ಒಂದು ತಾಸಿಗೂ ಹೆಚ್ಚು ಸಮಯ ಪತ್ರಿಕೆಗಳನ್ನು ಓದುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶನಿವಾರ ನಗರದಲ್ಲಿ ಹಮ್ಮಿಕೊಂಡಿದ್ದ 39ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬಹಳ ಅಪಾಯಕಾರಿ. ಪತ್ರಕರ್ತರು ಸತ್ಯ, ನೈಜ ವರದಿಗೆ ಆದ್ಯತೆ ನೀಡಬೇಕು. ಆದರೆ, ಈಚೆಗೆ ಪತ್ರಿಕೋದ್ಯಮದ ಆದ್ಯತೆಗಳು ಸಹ ಬದಲಾಗಿವೆ ಎಂದು ಕಳವಳ ವ್ಯಕ್ತಪಡಿಸಿದರು. </p>.<p>ಸರ್ಕಾರದ ಆಡಳಿತ ವೈಖರಿ ಟೀಕೆ ಮಾಡಿದರೆ ತಕಾರರು ಇಲ್ಲ. ಟೀಕೆ ಆರೋಗ್ಯಕರವಾಗಿ, ಸಮಾಜಮುಖಿಯಾಗಿ, ಜನಪರವಾಗಿರಬೇಕು. ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.</p>.<p>ವಿಜ್ಞಾನ, ತಂತ್ರಜ್ಞಾನ ಕ್ಷೇತ್ರ ಬೆಳೆಯುತ್ತಿರುವ ವೇಗದಲ್ಲೇ ಪತ್ರಿಕೋದ್ಯಮ ಕೂಡ ಬೆಳೆಯುತ್ತಿದೆ. ಇದರಿಂದ ಮಾಧ್ಯಮ ಕ್ಷೇತ್ರದಲ್ಲೂ ಬದಲಾವಣೆಗಳಾಗಿವೆ. ಇದು ಅವಕಾಶ, ಸವಾಲೂ ಎರಡೂ ಆಗಿದೆ ಎಂದರು.</p>.<p>ಗೃಹ ಸಚಿವ ಜಿ.ಪರಮೇಶ್ವರ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕೆ.ಎನ್. ರಾಜಣ್ಣ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ‘ಪತ್ರಿಕೆ ಓದುಗರ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಭಾವನೆ ಇದೆ. ಆದರೆ ನಾನು ನಿತ್ಯ ಒಂದು ತಾಸಿಗೂ ಹೆಚ್ಚು ಸಮಯ ಪತ್ರಿಕೆಗಳನ್ನು ಓದುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶನಿವಾರ ನಗರದಲ್ಲಿ ಹಮ್ಮಿಕೊಂಡಿದ್ದ 39ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬಹಳ ಅಪಾಯಕಾರಿ. ಪತ್ರಕರ್ತರು ಸತ್ಯ, ನೈಜ ವರದಿಗೆ ಆದ್ಯತೆ ನೀಡಬೇಕು. ಆದರೆ, ಈಚೆಗೆ ಪತ್ರಿಕೋದ್ಯಮದ ಆದ್ಯತೆಗಳು ಸಹ ಬದಲಾಗಿವೆ ಎಂದು ಕಳವಳ ವ್ಯಕ್ತಪಡಿಸಿದರು. </p>.<p>ಸರ್ಕಾರದ ಆಡಳಿತ ವೈಖರಿ ಟೀಕೆ ಮಾಡಿದರೆ ತಕಾರರು ಇಲ್ಲ. ಟೀಕೆ ಆರೋಗ್ಯಕರವಾಗಿ, ಸಮಾಜಮುಖಿಯಾಗಿ, ಜನಪರವಾಗಿರಬೇಕು. ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.</p>.<p>ವಿಜ್ಞಾನ, ತಂತ್ರಜ್ಞಾನ ಕ್ಷೇತ್ರ ಬೆಳೆಯುತ್ತಿರುವ ವೇಗದಲ್ಲೇ ಪತ್ರಿಕೋದ್ಯಮ ಕೂಡ ಬೆಳೆಯುತ್ತಿದೆ. ಇದರಿಂದ ಮಾಧ್ಯಮ ಕ್ಷೇತ್ರದಲ್ಲೂ ಬದಲಾವಣೆಗಳಾಗಿವೆ. ಇದು ಅವಕಾಶ, ಸವಾಲೂ ಎರಡೂ ಆಗಿದೆ ಎಂದರು.</p>.<p>ಗೃಹ ಸಚಿವ ಜಿ.ಪರಮೇಶ್ವರ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕೆ.ಎನ್. ರಾಜಣ್ಣ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>