<p><strong>ಚಿಕ್ಕನಾಯಕನಹಳ್ಳಿ</strong>: 76ನೇ ವರ್ಷದ ಸ್ವಾತಂತ್ರ್ಯೋತ್ಸವ ಅಂಗವಾಗಿ ಪಟ್ಟಣದ ರೋಟರಿ, ಇನ್ನರ್ವ್ಹೀಲ್ ಕ್ಲಬ್ನಿಂದ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಭಾನುವಾರ 60 ವರ್ಷ ದಾಟಿದ ಹಿರಿಯ ನಾಗರಿಕರಿಗೆ ಕ್ರೀಡಾಕೂಟ ಆಯೋಜಿಸಲಾಗಿತ್ತು.</p>.<p>50 ಮೀಟರ್ ನಡಿಗೆ, ನಾಣ್ಯ ಚಿಮ್ಮುವುದು, ನೋಟುಗಳ ಕಟ್ಟಿನ ಮೌಲ್ಯ ಅಂದಾಜು ಮಾಡುವುದು, ಪುರುಷರಿಗೆ ಗುಂಡು ಎಸೆತ, ಮಹಿಳೆಯರಿಗೆ ಬಕೆಟ್ಗೆ ರಿಂಗ್ ಹಾಕುವುದು ಹಾಗೂ ಮಡಿಕೆ ಒಡೆಯುವ ಸ್ಪರ್ಧೆ ನಡೆಸಲಾಯಿತು.</p>.<p>ಹಿರಿಯ ವಕೀಲ ದಿ. ಸೀತಾರಾಮಯ್ಯ ಜ್ಞಾಪಕಾರ್ಥ ಹಿರಿಯ ಆದರ್ಶ ದಂಪತಿ ಸ್ಪರ್ಧೆ ನಡೆದು ವಿಜೇತರಿಗೆ ಪ್ರಶಸ್ತಿ ನೀಡಲಾಯಿತು.</p>.<p>ರೋಟರಿಕ್ಲಬ್ ಹಾಗೂ ಪೊಲೀಸ್ ಠಾಣೆ ಸಹಯೋಗದಲ್ಲಿ ನಿಧಾನಗತಿ ಸೈಕಲ್ ಮತ್ತು ಮೋಟಾರ್ ಬೈಕ್ ಸ್ಪರ್ಧೆಯನ್ನು ಸಾರ್ವಜನಿಕರಿಗಾಗಿ ನಡೆಸಲಾಯಿತು.</p>.<p>ರೋಟರಿ ಕ್ಲಬ್ ಅಧ್ಯಕ್ಷ ಎಂ.ದೇವರಾಜ್, ಕಾರ್ಯದರ್ಶಿ ಸಿ.ಡಿ.ಸುರೇಶ್, ಇನ್ನರ್ವ್ಹೀಲ್ ಕ್ಲಬ್ ಅಧ್ಯಕ್ಷೆ ಭವಾನಿ ಜಯರಾಂ, ಹಿರಿಯ ಸಾಹಿತಿ ಡಾ.ಎಂ.ವಿ. ನಾಗರಾಜರಾವ್, ಇಸ್ರೊ ಅಧಿಕಾರಿ ಸಿ.ಎಸ್. ಮಧುಸೂಧನ್ ವಿಜೇತರಿಗೆ ಬಹುಮಾನ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕನಾಯಕನಹಳ್ಳಿ</strong>: 76ನೇ ವರ್ಷದ ಸ್ವಾತಂತ್ರ್ಯೋತ್ಸವ ಅಂಗವಾಗಿ ಪಟ್ಟಣದ ರೋಟರಿ, ಇನ್ನರ್ವ್ಹೀಲ್ ಕ್ಲಬ್ನಿಂದ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಭಾನುವಾರ 60 ವರ್ಷ ದಾಟಿದ ಹಿರಿಯ ನಾಗರಿಕರಿಗೆ ಕ್ರೀಡಾಕೂಟ ಆಯೋಜಿಸಲಾಗಿತ್ತು.</p>.<p>50 ಮೀಟರ್ ನಡಿಗೆ, ನಾಣ್ಯ ಚಿಮ್ಮುವುದು, ನೋಟುಗಳ ಕಟ್ಟಿನ ಮೌಲ್ಯ ಅಂದಾಜು ಮಾಡುವುದು, ಪುರುಷರಿಗೆ ಗುಂಡು ಎಸೆತ, ಮಹಿಳೆಯರಿಗೆ ಬಕೆಟ್ಗೆ ರಿಂಗ್ ಹಾಕುವುದು ಹಾಗೂ ಮಡಿಕೆ ಒಡೆಯುವ ಸ್ಪರ್ಧೆ ನಡೆಸಲಾಯಿತು.</p>.<p>ಹಿರಿಯ ವಕೀಲ ದಿ. ಸೀತಾರಾಮಯ್ಯ ಜ್ಞಾಪಕಾರ್ಥ ಹಿರಿಯ ಆದರ್ಶ ದಂಪತಿ ಸ್ಪರ್ಧೆ ನಡೆದು ವಿಜೇತರಿಗೆ ಪ್ರಶಸ್ತಿ ನೀಡಲಾಯಿತು.</p>.<p>ರೋಟರಿಕ್ಲಬ್ ಹಾಗೂ ಪೊಲೀಸ್ ಠಾಣೆ ಸಹಯೋಗದಲ್ಲಿ ನಿಧಾನಗತಿ ಸೈಕಲ್ ಮತ್ತು ಮೋಟಾರ್ ಬೈಕ್ ಸ್ಪರ್ಧೆಯನ್ನು ಸಾರ್ವಜನಿಕರಿಗಾಗಿ ನಡೆಸಲಾಯಿತು.</p>.<p>ರೋಟರಿ ಕ್ಲಬ್ ಅಧ್ಯಕ್ಷ ಎಂ.ದೇವರಾಜ್, ಕಾರ್ಯದರ್ಶಿ ಸಿ.ಡಿ.ಸುರೇಶ್, ಇನ್ನರ್ವ್ಹೀಲ್ ಕ್ಲಬ್ ಅಧ್ಯಕ್ಷೆ ಭವಾನಿ ಜಯರಾಂ, ಹಿರಿಯ ಸಾಹಿತಿ ಡಾ.ಎಂ.ವಿ. ನಾಗರಾಜರಾವ್, ಇಸ್ರೊ ಅಧಿಕಾರಿ ಸಿ.ಎಸ್. ಮಧುಸೂಧನ್ ವಿಜೇತರಿಗೆ ಬಹುಮಾನ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>