<p><strong>ತುಮಕೂರು:</strong> ನಗರದ ಅಂತರಸನಹಳ್ಳಿ ಹಾಗೂ ಎಪಿಎಂಸಿ ಮಾರುಕಟ್ಟೆಗೆ ಸಹಕಾರ ಹಾಗೂ ಕೃಷಿ ಮಾರುಕಟ್ಟೆ ಸಚಿವ ಎಸ್.ಟಿ.ಸೋಮಶೇಖರ್ ಸೋಮವಾರ ಬೆಳಿಗ್ಗೆ ಭೇಟಿ ನೀಡಿದರು.</p>.<p>ಅಂತರಸನಹಳ್ಳಿಯಲ್ಲಿ ರೈತರು ಮಾರಾಟಕ್ಕೆ ತಂದಿದ್ದ ತರಕಾರಿ, ಹಣ್ಣುಗಳ ಬೆಲೆಗಳ ಬಗ್ಗೆ ಮಾಹಿತಿ ಪಡೆದರು. ಖರೀದಿಗೆ ಬರುವ ಗ್ರಾಹಕರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಿಳಿಹೇಳಿ ಎಂದು ವ್ಯಾಪಾರಿಗಳಿಗೆ ಕಿವಿ ಮಾತು ಹೇಳಿದರು.</p>.<p>ಸರಕುಗಳನ್ನು ಮಾರುಕಟ್ಟೆಗೆ ತರಲು ಯಾವುದೇ ರೀತಿಯಲ್ಲಿ ಅಡ್ಡಿಯಾದರೆ ಸಂಬಂಧಿಸಿದ ಅಧಿಕಾರಿಗಳು ಇಲ್ಲವೇ ತೋಟಗಾರಿಕೆ ಇಲಾಖೆ ನೋಡಲ್ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದರು.</p>.<p>ಹುಣಸೆ ಹಣ್ಣಿನ ಬೆಲೆ ಕುಸಿದಿರುವ ಬಗ್ಗೆ ಎಪಿಎಂಸಿಯಲ್ಲಿ ವ್ಯಾಪಾರಿಗಳು ಗಮನ ಸೆಳೆದರು.</p>.<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನೆನ್ನೆ ಪ್ರಜಾವಾಣಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಹಲವು ರೈತರು ಸಮಸ್ಯೆಗಳ ಪರಿಹಾರದ ವಿಚಾರವಾಗಿ ಗಮನ ಸೆಳೆದಿದ್ದಾರೆ. ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುವುದು ಎಂದರು.</p>.<p>ಮಾರುಕಟ್ಟೆಗಳಲ್ಲಿ ರೈತರಿಗೆ ತೊಂದರೆ ಆಗುತ್ತಿದೆಯೇ, ಮತ್ತೆ ಏನು ಸೌಲಭ್ಯ ಕಲ್ಪಿಸಬೇಕು ಎನ್ನುವ ಕಾರಣದಿಂದ ವಿವಿಧ ಮಾರುಕಟ್ಟೆಗಳಿಗೆ ಭೇಟಿ ನೀಡುತ್ತಿದ್ದೇನೆ. ಬಹುತೇಕ ಎಪಿಎಂಸಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ.</p>.<p>ಚೆಕ್ ಪೋಸ್ಟ್ಗಳಲ್ಲಿ ರೈತರು ಸರಕುಗಳನ್ನು ಕೊಂಡೊಯ್ಯಲು ಅಡ್ಡಿ ಮಾಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇವೆ.</p>.<p>ನೆನ್ನೆ ಬೆಂಗಳೂರಿನಲ್ಲಿ ಕೆ.ಜಿ. ಟೊಮೆಟೊ ₹ 2 ಇತ್ತು. ತುಮಕೂರು ಮಾರುಕಟ್ಟೆಯಲ್ಲಿ ₹ 8ರಿಂದ 10 ಇದೆ. ಪಾವಗಡದಿಂದ ತುಮಕೂರಿಗೆ ರೈತರು ತರಕಾರಿ ತರುವಾಗ ಆಂಧ್ರಪ್ರದೇಶದ ಮಡಕಶಿರಾ ಪೊಲೀಸರು ತಡೆಯುತ್ತಿಲ್ಲ.</p>.<p>ರೈತರ ಉತ್ಪನ್ನ ಸಾಕಾಣಿಕೆ ವಿಚಾರದಲ್ಲಿ ಯಾವುದೇ ರೀತಿಯ ದೂರುಗಳು ಬಂದ ತಕ್ಷಣ ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇವೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ನಗರದ ಅಂತರಸನಹಳ್ಳಿ ಹಾಗೂ ಎಪಿಎಂಸಿ ಮಾರುಕಟ್ಟೆಗೆ ಸಹಕಾರ ಹಾಗೂ ಕೃಷಿ ಮಾರುಕಟ್ಟೆ ಸಚಿವ ಎಸ್.ಟಿ.ಸೋಮಶೇಖರ್ ಸೋಮವಾರ ಬೆಳಿಗ್ಗೆ ಭೇಟಿ ನೀಡಿದರು.</p>.<p>ಅಂತರಸನಹಳ್ಳಿಯಲ್ಲಿ ರೈತರು ಮಾರಾಟಕ್ಕೆ ತಂದಿದ್ದ ತರಕಾರಿ, ಹಣ್ಣುಗಳ ಬೆಲೆಗಳ ಬಗ್ಗೆ ಮಾಹಿತಿ ಪಡೆದರು. ಖರೀದಿಗೆ ಬರುವ ಗ್ರಾಹಕರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಿಳಿಹೇಳಿ ಎಂದು ವ್ಯಾಪಾರಿಗಳಿಗೆ ಕಿವಿ ಮಾತು ಹೇಳಿದರು.</p>.<p>ಸರಕುಗಳನ್ನು ಮಾರುಕಟ್ಟೆಗೆ ತರಲು ಯಾವುದೇ ರೀತಿಯಲ್ಲಿ ಅಡ್ಡಿಯಾದರೆ ಸಂಬಂಧಿಸಿದ ಅಧಿಕಾರಿಗಳು ಇಲ್ಲವೇ ತೋಟಗಾರಿಕೆ ಇಲಾಖೆ ನೋಡಲ್ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದರು.</p>.<p>ಹುಣಸೆ ಹಣ್ಣಿನ ಬೆಲೆ ಕುಸಿದಿರುವ ಬಗ್ಗೆ ಎಪಿಎಂಸಿಯಲ್ಲಿ ವ್ಯಾಪಾರಿಗಳು ಗಮನ ಸೆಳೆದರು.</p>.<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನೆನ್ನೆ ಪ್ರಜಾವಾಣಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಹಲವು ರೈತರು ಸಮಸ್ಯೆಗಳ ಪರಿಹಾರದ ವಿಚಾರವಾಗಿ ಗಮನ ಸೆಳೆದಿದ್ದಾರೆ. ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುವುದು ಎಂದರು.</p>.<p>ಮಾರುಕಟ್ಟೆಗಳಲ್ಲಿ ರೈತರಿಗೆ ತೊಂದರೆ ಆಗುತ್ತಿದೆಯೇ, ಮತ್ತೆ ಏನು ಸೌಲಭ್ಯ ಕಲ್ಪಿಸಬೇಕು ಎನ್ನುವ ಕಾರಣದಿಂದ ವಿವಿಧ ಮಾರುಕಟ್ಟೆಗಳಿಗೆ ಭೇಟಿ ನೀಡುತ್ತಿದ್ದೇನೆ. ಬಹುತೇಕ ಎಪಿಎಂಸಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ.</p>.<p>ಚೆಕ್ ಪೋಸ್ಟ್ಗಳಲ್ಲಿ ರೈತರು ಸರಕುಗಳನ್ನು ಕೊಂಡೊಯ್ಯಲು ಅಡ್ಡಿ ಮಾಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇವೆ.</p>.<p>ನೆನ್ನೆ ಬೆಂಗಳೂರಿನಲ್ಲಿ ಕೆ.ಜಿ. ಟೊಮೆಟೊ ₹ 2 ಇತ್ತು. ತುಮಕೂರು ಮಾರುಕಟ್ಟೆಯಲ್ಲಿ ₹ 8ರಿಂದ 10 ಇದೆ. ಪಾವಗಡದಿಂದ ತುಮಕೂರಿಗೆ ರೈತರು ತರಕಾರಿ ತರುವಾಗ ಆಂಧ್ರಪ್ರದೇಶದ ಮಡಕಶಿರಾ ಪೊಲೀಸರು ತಡೆಯುತ್ತಿಲ್ಲ.</p>.<p>ರೈತರ ಉತ್ಪನ್ನ ಸಾಕಾಣಿಕೆ ವಿಚಾರದಲ್ಲಿ ಯಾವುದೇ ರೀತಿಯ ದೂರುಗಳು ಬಂದ ತಕ್ಷಣ ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇವೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>