<p><strong>ತಿಪಟೂರು</strong>: ಹಲವು ತಿಂಗಳಿನಿಂದ ಸ್ಥಿರವಾಗಿದ್ದ ಕೊಬ್ಬರಿ ಬೆಲೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕ್ವಿಂಟಲ್ ಕೊಬ್ಬರಿ ಬೆಲೆ ₹17 ಸಾವಿರದ ಗಡಿ ದಾಟಿದೆ.</p>.<p>ಕೆಲ ರವಾನೆದಾರರು ಪ್ರಕಾರ ಹೊರ ರಾಜ್ಯದಲ್ಲಿ ಕೊಬ್ಬರಿಗೆ ಬೇಡಿಕೆ ಬಂದಿರುವ ಕಾರಣ ಬೆಲೆಯಲ್ಲಿ ಕೊಂಚ ಬದಲಾವಣೆಯಾಗಿದೆ. ಅಗತ್ಯ ಪ್ರಮಾಣದಲ್ಲಿ ಪೂರೈಕೆ ಇಲ್ಲದಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ.</p>.<p>ರೈತರು ಬಹು ದಿನಗಳಿಂದ ಬೆಲೆ ಏರಿಕೆಗೆ ಕಾಯುತ್ತಿದ್ದರು. ಆದರೆ ಕೆಲ ತಿಂಗಳಿಂದ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿರಲಿಲ್ಲ. ಇದೀಗ ₹17 ಸಾವಿರಕ್ಕೆ ತಲುಪಿರುವುದು ಕೋವಿಡ್ನಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ಕೊಂಚ ನೆಮ್ಮದಿ ನೀಡಿದೆ.</p>.<p>ಹೊರ ರಾಜ್ಯಗಳಲ್ಲಿ ಕೊಬ್ಬರಿಗೆ ಬೇಡಿಕೆ ಹೆಚ್ಚಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣ. ಮತ್ತೆ ಕೋವಿಡ್ ಲಾಕ್ಡೌನ್ ಘೊಷಣೆಯಾಗುವ ಆತಂಕದಿಂದ ಅಗತ್ಯಕ್ಕಿಂತ ಹೆಚ್ಚಿನ ಕೊಬ್ಬರಿ ಅಮದು ಮಾಡಿಕೊಳ್ಳಲಾಗುತ್ತಿದೆ. ಎಣ್ಣೆ ಕಾಳುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿರುವುದರಿಂದ ಕೊಬ್ಬರಿ ಎಣ್ಣೆ ತಯಾರಿಕೆ, ಬಳಕೆ ಹೆಚ್ಚಿದೆ ಎನ್ನುತ್ತಾರೆ ರವಾನೆದಾರರು.</p>.<p>ಕೆಲ ತಿಂಗಳಿನಿಂದ ಎಪಿಎಂಸಿಗೆ ಉಂಡೆ ಕೊಬ್ಬರಿ ಬರುತ್ತಿರುವ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಫಸಲು ಕಡಿಮೆ ಆಗಿರುವ ಬಗ್ಗೆ ರೈತರು ಮಾಹಿತಿ ನೀಡುತ್ತಿದ್ದು, ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು</strong>: ಹಲವು ತಿಂಗಳಿನಿಂದ ಸ್ಥಿರವಾಗಿದ್ದ ಕೊಬ್ಬರಿ ಬೆಲೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕ್ವಿಂಟಲ್ ಕೊಬ್ಬರಿ ಬೆಲೆ ₹17 ಸಾವಿರದ ಗಡಿ ದಾಟಿದೆ.</p>.<p>ಕೆಲ ರವಾನೆದಾರರು ಪ್ರಕಾರ ಹೊರ ರಾಜ್ಯದಲ್ಲಿ ಕೊಬ್ಬರಿಗೆ ಬೇಡಿಕೆ ಬಂದಿರುವ ಕಾರಣ ಬೆಲೆಯಲ್ಲಿ ಕೊಂಚ ಬದಲಾವಣೆಯಾಗಿದೆ. ಅಗತ್ಯ ಪ್ರಮಾಣದಲ್ಲಿ ಪೂರೈಕೆ ಇಲ್ಲದಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ.</p>.<p>ರೈತರು ಬಹು ದಿನಗಳಿಂದ ಬೆಲೆ ಏರಿಕೆಗೆ ಕಾಯುತ್ತಿದ್ದರು. ಆದರೆ ಕೆಲ ತಿಂಗಳಿಂದ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿರಲಿಲ್ಲ. ಇದೀಗ ₹17 ಸಾವಿರಕ್ಕೆ ತಲುಪಿರುವುದು ಕೋವಿಡ್ನಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ಕೊಂಚ ನೆಮ್ಮದಿ ನೀಡಿದೆ.</p>.<p>ಹೊರ ರಾಜ್ಯಗಳಲ್ಲಿ ಕೊಬ್ಬರಿಗೆ ಬೇಡಿಕೆ ಹೆಚ್ಚಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣ. ಮತ್ತೆ ಕೋವಿಡ್ ಲಾಕ್ಡೌನ್ ಘೊಷಣೆಯಾಗುವ ಆತಂಕದಿಂದ ಅಗತ್ಯಕ್ಕಿಂತ ಹೆಚ್ಚಿನ ಕೊಬ್ಬರಿ ಅಮದು ಮಾಡಿಕೊಳ್ಳಲಾಗುತ್ತಿದೆ. ಎಣ್ಣೆ ಕಾಳುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿರುವುದರಿಂದ ಕೊಬ್ಬರಿ ಎಣ್ಣೆ ತಯಾರಿಕೆ, ಬಳಕೆ ಹೆಚ್ಚಿದೆ ಎನ್ನುತ್ತಾರೆ ರವಾನೆದಾರರು.</p>.<p>ಕೆಲ ತಿಂಗಳಿನಿಂದ ಎಪಿಎಂಸಿಗೆ ಉಂಡೆ ಕೊಬ್ಬರಿ ಬರುತ್ತಿರುವ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಫಸಲು ಕಡಿಮೆ ಆಗಿರುವ ಬಗ್ಗೆ ರೈತರು ಮಾಹಿತಿ ನೀಡುತ್ತಿದ್ದು, ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>