<p><strong>ತಿಪಟೂರು</strong>: ‘ಆರ್ಸಿಬಿ ವಿಜಯೋತ್ಸವ ಸಂದರ್ಭ ಕಾಲ್ತುಳಿತ ಸಂಭವಿಸಿ ಸಾವಿಗೆ ಕಾರಣವಾಗಿರುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹಸಚಿವ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿ ತಾಲ್ಲೂಕು ಬಿಜೆಪಿ ಘಟಕದಿಂದ ಸಿಂಗ್ರೀ ನಂಜಪ್ಪ ವೃತ್ತದ ಬಳಿ ಸೋಮವಾರ ಪ್ರತಿಭಟನೆ ನಡೆಯಿತು.</p>.<p>ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗರಾಜು ಮಾತನಾಡಿ, ರಾಜ್ಯ ಪೊಲೀಸ್ ಇಲಾಖೆ ತರಾತುರಿಯಲ್ಲಿ ವಿಜಯೋತ್ಸವ ಆಯೋಜನೆ ಬೇಡ ಎಂಬ ಮಾಹಿತಿ ನೀಡಿದರೂ ಸಹ ಸರ್ಕಾರ ಕಾರ್ಯಕ್ರಮ ಆಯೋಜಿಸಿ ಜನರ ಸಾವಿಗೆ ಕಾರಣವಾಗಿದೆ. ಕೆಎಸ್ಸಿಎ, ಆರ್ಸಿಬಿ, ಡಿಎನ್ಎ ಈ ಮೂರು ಸಂಸ್ಥೆಗಳು ಸಿಒಡಿ ಮುಂದೆ ಕಾಲ್ತುಳಿತಕ್ಕೆ ರಾಜ್ಯ ಸರ್ಕಾರವೇ ನೇರ ಕಾರಣವೆಂದು ಲಿಖಿತ ಹೇಳಿಕೆ ಕೊಟ್ಟಿರುವುದರಿಂದ ತಕ್ಷಣವೇ ರಾಜಿನಾಮೆ ನೀಡಬೇಕು. ತನಿಖೆ ಪಾರದರ್ಶಕವಾಗಿ ನಡೆಯಬೇಕಾಗಿದ್ದು ಸಿಬಿಐ ತನಿಖೆಗೆ ಆಗಬೇಕೆಂದು ಆಗ್ರಹಿಸಿದರು.</p>.<p>ಸುರೇಶ್ ಬಳ್ಳೇಕಟ್ಟೆ ಮಾತನಾಡಿ, ಗುಬ್ಬಿ ಕೆನಾಲ್ ನೀರಾವರಿ ವಿಚಾರದಲ್ಲಿ ಸ್ವಾಮೀಜಿಗಳ ಮೇಲೆ ಪ್ರಕರಣ ದಾಖಲು ಮಾಡಿದ್ದು, ಪ್ರಕರಣ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.</p>.<p>ಜಗದೀಶ್, ಸತೀಶ್, ಗುಲಾಬಿ ಸುರೇಶ್, ಗಂಗಾಧರ್ ಹರಿಸಮುದ್ರ, ಬಿಸಲೇಹಳ್ಳಿ ಜಗದೀಶ್, ವಿಶ್ವದೀಪು, ಕರಡಿ ದೇವರಾಜು, ಬಸವನಹಳ್ಳಿ ಬಸವರಾಜು, ಸಂದ್ಯಾಕಿರಣ್, ಜಯಲಕ್ಷ್ಮಿ, ಸಂಗಮೇಶ್, ಪ್ರಸನ್ನಕುಮಾರ್, ತರಕಾರಿ ಗಂಗಾಧರ್, ಬಸವರಾಜು, ಸೂಗೂರು ದೀಲೀಪ್, ದತ್ತಣ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು</strong>: ‘ಆರ್ಸಿಬಿ ವಿಜಯೋತ್ಸವ ಸಂದರ್ಭ ಕಾಲ್ತುಳಿತ ಸಂಭವಿಸಿ ಸಾವಿಗೆ ಕಾರಣವಾಗಿರುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹಸಚಿವ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿ ತಾಲ್ಲೂಕು ಬಿಜೆಪಿ ಘಟಕದಿಂದ ಸಿಂಗ್ರೀ ನಂಜಪ್ಪ ವೃತ್ತದ ಬಳಿ ಸೋಮವಾರ ಪ್ರತಿಭಟನೆ ನಡೆಯಿತು.</p>.<p>ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗರಾಜು ಮಾತನಾಡಿ, ರಾಜ್ಯ ಪೊಲೀಸ್ ಇಲಾಖೆ ತರಾತುರಿಯಲ್ಲಿ ವಿಜಯೋತ್ಸವ ಆಯೋಜನೆ ಬೇಡ ಎಂಬ ಮಾಹಿತಿ ನೀಡಿದರೂ ಸಹ ಸರ್ಕಾರ ಕಾರ್ಯಕ್ರಮ ಆಯೋಜಿಸಿ ಜನರ ಸಾವಿಗೆ ಕಾರಣವಾಗಿದೆ. ಕೆಎಸ್ಸಿಎ, ಆರ್ಸಿಬಿ, ಡಿಎನ್ಎ ಈ ಮೂರು ಸಂಸ್ಥೆಗಳು ಸಿಒಡಿ ಮುಂದೆ ಕಾಲ್ತುಳಿತಕ್ಕೆ ರಾಜ್ಯ ಸರ್ಕಾರವೇ ನೇರ ಕಾರಣವೆಂದು ಲಿಖಿತ ಹೇಳಿಕೆ ಕೊಟ್ಟಿರುವುದರಿಂದ ತಕ್ಷಣವೇ ರಾಜಿನಾಮೆ ನೀಡಬೇಕು. ತನಿಖೆ ಪಾರದರ್ಶಕವಾಗಿ ನಡೆಯಬೇಕಾಗಿದ್ದು ಸಿಬಿಐ ತನಿಖೆಗೆ ಆಗಬೇಕೆಂದು ಆಗ್ರಹಿಸಿದರು.</p>.<p>ಸುರೇಶ್ ಬಳ್ಳೇಕಟ್ಟೆ ಮಾತನಾಡಿ, ಗುಬ್ಬಿ ಕೆನಾಲ್ ನೀರಾವರಿ ವಿಚಾರದಲ್ಲಿ ಸ್ವಾಮೀಜಿಗಳ ಮೇಲೆ ಪ್ರಕರಣ ದಾಖಲು ಮಾಡಿದ್ದು, ಪ್ರಕರಣ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.</p>.<p>ಜಗದೀಶ್, ಸತೀಶ್, ಗುಲಾಬಿ ಸುರೇಶ್, ಗಂಗಾಧರ್ ಹರಿಸಮುದ್ರ, ಬಿಸಲೇಹಳ್ಳಿ ಜಗದೀಶ್, ವಿಶ್ವದೀಪು, ಕರಡಿ ದೇವರಾಜು, ಬಸವನಹಳ್ಳಿ ಬಸವರಾಜು, ಸಂದ್ಯಾಕಿರಣ್, ಜಯಲಕ್ಷ್ಮಿ, ಸಂಗಮೇಶ್, ಪ್ರಸನ್ನಕುಮಾರ್, ತರಕಾರಿ ಗಂಗಾಧರ್, ಬಸವರಾಜು, ಸೂಗೂರು ದೀಲೀಪ್, ದತ್ತಣ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>