<p>ತುರುವೇಕೆರೆ: ಒಳ ಚರಂಡಿ ಕಾಮಗಾರಿ ಮುಗಿದು 13 ವರ್ಷಗಳೇ ಕಳೆದರೂ ಪಟ್ಟಣ ಪಂಚಾಯಿತಿ ಸುಪರ್ದಿಗೆ ನೀಡದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಶಾಸಕ ಮಸಾಲ ಜಯರಾಂ ಹೇಳಿದರು.</p>.<p>ಪಟ್ಟಣ ಪಂಚಾಯಿತಿ ಆವರಣದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಪಟ್ಟಣದಲ್ಲಿ ನಿರ್ಮಾಣವಾಗಿರುವ ಒಳ ಚರಂಡಿ ವ್ಯವಸ್ಥೆ ನಿರುಪಯುಕ್ತವಾಗಿದ್ದು, ಶ್ರೀಘ್ರ ಹೊಸ ಒಳ ಚರಂಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದರು. ಇದಕ್ಕೆ ಸದಸ್ಯ ಯಜಮಾನ್ ಮಹೇಶ್ ಧ್ವನಿಗೂಡಿಸಿದರು.</p>.<p>2020-21ನೇ ಸಾಲಿನ ಸಂತೆ ಶುಲ್ಕ ಸಂಗ್ರಹ ಸಂಬಂಧಿಸಿದಂತೆ ಸದಸ್ಯ ಎನ್.ಆರ್.ಸುರೇಶ್ ಮಾತನಾಡಿ, ‘ಈ ಹಿಂದೆ ಸುಂಕ ವಸೂಲಿ ಗುತ್ತಿಗೆ ಪಡೆದಿದ್ದ ಇಬ್ಬರು ₹ 4 ಲಕ್ಷವನ್ನು ಪಟ್ಟಣ ಪಂಚಾಯಿತಿಗೆ ನೀಡಬೇಕಿದೆ ಇವರಿಂದ ಹಣ ವಸೂಲಿ ಮಾಡಲು ಯಾವ<br />ಕ್ರಮ ಕೈಗೊಂಡಿದ್ದೀರಿ’ ಎಂದು ಪ್ರಶ್ನಿಸಿದರು.</p>.<p>ಮುಖ್ಯಾಧಿಕಾರಿ ಮಂಜುಳಾದೇವಿ ಪ್ರತಿಕ್ರಿಯಿಸಿ, ‘ಹಣ ವಸೂಲಿ ಮಾಡಲು ಈಗಾಗಲೇ ಅವರಿಗೆ ನೋಟಿಸ್ ನೀಡಲಾಗಿದೆ’ ಎಂದರು. </p>.<p>ಸದಸ್ಯ ನದಿಂ ಮಾತನಾಡಿ, ‘ಎನ್ಒಸಿ ಕೊಡಿ ಎಂದರೆ ₹500 ಕಟ್ಟಿ ರಶೀದಿ ತನ್ನಿ ಎಂದು ಹೇಳುವ ಅಧಿಕಾರಿಗಳು ಲಕ್ಷಾಂತರ ವ್ಯವಹಾರ ಮಾಡಲು ಯಾವ ಭದ್ರತೆ ನೀಡಿಲ್ಲ. ಕೂಡಲೇ ಕಾನೂನು ಕ್ರಮ ಕೈಗೊಂಡು ಹಣ ವಸೂಲಿ ಮಾಡಬೇಕು’ ಎಂದು ಸೂಚಿಸಿದರು.</p>.<p>ಕೋಳಿ ಕಸದ ಹಣ ಎಲ್ಲಿ: ಪಟ್ಟಣದಲ್ಲಿ 20ಕ್ಕೂ ಹೆಚ್ಚು ಅಂಗಡಿಗಳಿವೆ. ಕೋಳಿಯ ಕಸ ವಿಲೇವಾರಿಗೆ ಪಟ್ಟಣ ಪಂಚಾಯಿತಿ ವಾಹನ ತೆರಳುತ್ತಿದ್ದು ಪ್ರತಿ ಕೋಳಿ ಅಂಗಡಿಯಿಂದ ತಿಂಗಳಿಗೆ ಇಷ್ಟು ಹಣ ನೀಡಬೇಕು ಎಂದು ಅಕ್ರಮವಾಗಿ ನಿಗದಿ ಮಾಡಿದ್ದಾರೆ. ಪಟ್ಟಣ ಪಂಚಾಯಿತಿಗೆ ತಿಂಗಳಿಗೆ ₹ 30ರಿಂದ ₹40 ಸಾವಿರ ನಷ್ಟವಾಗುತ್ತಿದೆ. ಕಳೆದ 2 ವರ್ಷಗಳಿಂದ ಲಕ್ಷಾಂತರ ಆದಾಯ ಕೊರತೆ ಆಗಿದೆ. ಕೂಡಲೇ ಸರಿಪಡಿಸಿ ಪಂಚಾಯಿತಿಗೆ ಆದಾಯ ಬರುವಂತೆ ಕ್ರಮಕೈಗೊಳ್ಳಿ’ ಎಂದು ಶಾಸಕರು ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.</p>.<p>ಸದಸ್ಯರಾದ ಚಿದಾನಂದ, ರವಿ, ಆಶಾರಾಣಿ, ಮಧು, ಟಿ.ಕೆ.ಪ್ರಭಕರ್ ಸೌಭಾಗ್ಯ, ಶೀಲಾ, ಸ್ವಪ್ನ, ಮೇಘನಾ, ಜಯಮ್ಮ, ಎಂಜಿನಿಯರ್ ಸತ್ಯನಾರಾಯಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುರುವೇಕೆರೆ: ಒಳ ಚರಂಡಿ ಕಾಮಗಾರಿ ಮುಗಿದು 13 ವರ್ಷಗಳೇ ಕಳೆದರೂ ಪಟ್ಟಣ ಪಂಚಾಯಿತಿ ಸುಪರ್ದಿಗೆ ನೀಡದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಶಾಸಕ ಮಸಾಲ ಜಯರಾಂ ಹೇಳಿದರು.</p>.<p>ಪಟ್ಟಣ ಪಂಚಾಯಿತಿ ಆವರಣದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಪಟ್ಟಣದಲ್ಲಿ ನಿರ್ಮಾಣವಾಗಿರುವ ಒಳ ಚರಂಡಿ ವ್ಯವಸ್ಥೆ ನಿರುಪಯುಕ್ತವಾಗಿದ್ದು, ಶ್ರೀಘ್ರ ಹೊಸ ಒಳ ಚರಂಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದರು. ಇದಕ್ಕೆ ಸದಸ್ಯ ಯಜಮಾನ್ ಮಹೇಶ್ ಧ್ವನಿಗೂಡಿಸಿದರು.</p>.<p>2020-21ನೇ ಸಾಲಿನ ಸಂತೆ ಶುಲ್ಕ ಸಂಗ್ರಹ ಸಂಬಂಧಿಸಿದಂತೆ ಸದಸ್ಯ ಎನ್.ಆರ್.ಸುರೇಶ್ ಮಾತನಾಡಿ, ‘ಈ ಹಿಂದೆ ಸುಂಕ ವಸೂಲಿ ಗುತ್ತಿಗೆ ಪಡೆದಿದ್ದ ಇಬ್ಬರು ₹ 4 ಲಕ್ಷವನ್ನು ಪಟ್ಟಣ ಪಂಚಾಯಿತಿಗೆ ನೀಡಬೇಕಿದೆ ಇವರಿಂದ ಹಣ ವಸೂಲಿ ಮಾಡಲು ಯಾವ<br />ಕ್ರಮ ಕೈಗೊಂಡಿದ್ದೀರಿ’ ಎಂದು ಪ್ರಶ್ನಿಸಿದರು.</p>.<p>ಮುಖ್ಯಾಧಿಕಾರಿ ಮಂಜುಳಾದೇವಿ ಪ್ರತಿಕ್ರಿಯಿಸಿ, ‘ಹಣ ವಸೂಲಿ ಮಾಡಲು ಈಗಾಗಲೇ ಅವರಿಗೆ ನೋಟಿಸ್ ನೀಡಲಾಗಿದೆ’ ಎಂದರು. </p>.<p>ಸದಸ್ಯ ನದಿಂ ಮಾತನಾಡಿ, ‘ಎನ್ಒಸಿ ಕೊಡಿ ಎಂದರೆ ₹500 ಕಟ್ಟಿ ರಶೀದಿ ತನ್ನಿ ಎಂದು ಹೇಳುವ ಅಧಿಕಾರಿಗಳು ಲಕ್ಷಾಂತರ ವ್ಯವಹಾರ ಮಾಡಲು ಯಾವ ಭದ್ರತೆ ನೀಡಿಲ್ಲ. ಕೂಡಲೇ ಕಾನೂನು ಕ್ರಮ ಕೈಗೊಂಡು ಹಣ ವಸೂಲಿ ಮಾಡಬೇಕು’ ಎಂದು ಸೂಚಿಸಿದರು.</p>.<p>ಕೋಳಿ ಕಸದ ಹಣ ಎಲ್ಲಿ: ಪಟ್ಟಣದಲ್ಲಿ 20ಕ್ಕೂ ಹೆಚ್ಚು ಅಂಗಡಿಗಳಿವೆ. ಕೋಳಿಯ ಕಸ ವಿಲೇವಾರಿಗೆ ಪಟ್ಟಣ ಪಂಚಾಯಿತಿ ವಾಹನ ತೆರಳುತ್ತಿದ್ದು ಪ್ರತಿ ಕೋಳಿ ಅಂಗಡಿಯಿಂದ ತಿಂಗಳಿಗೆ ಇಷ್ಟು ಹಣ ನೀಡಬೇಕು ಎಂದು ಅಕ್ರಮವಾಗಿ ನಿಗದಿ ಮಾಡಿದ್ದಾರೆ. ಪಟ್ಟಣ ಪಂಚಾಯಿತಿಗೆ ತಿಂಗಳಿಗೆ ₹ 30ರಿಂದ ₹40 ಸಾವಿರ ನಷ್ಟವಾಗುತ್ತಿದೆ. ಕಳೆದ 2 ವರ್ಷಗಳಿಂದ ಲಕ್ಷಾಂತರ ಆದಾಯ ಕೊರತೆ ಆಗಿದೆ. ಕೂಡಲೇ ಸರಿಪಡಿಸಿ ಪಂಚಾಯಿತಿಗೆ ಆದಾಯ ಬರುವಂತೆ ಕ್ರಮಕೈಗೊಳ್ಳಿ’ ಎಂದು ಶಾಸಕರು ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.</p>.<p>ಸದಸ್ಯರಾದ ಚಿದಾನಂದ, ರವಿ, ಆಶಾರಾಣಿ, ಮಧು, ಟಿ.ಕೆ.ಪ್ರಭಕರ್ ಸೌಭಾಗ್ಯ, ಶೀಲಾ, ಸ್ವಪ್ನ, ಮೇಘನಾ, ಜಯಮ್ಮ, ಎಂಜಿನಿಯರ್ ಸತ್ಯನಾರಾಯಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>