<p><strong>ಮಧುಗಿರಿ: </strong>ರಾಜ್ಯದಲ್ಲಿ ಕಳೆದ ವರ್ಷದ ಪ್ರವಾಹದಿಂದಾಗಿ ₹35 ಸಾವಿರ ಕೋಟಿ ನಷ್ಟ ಉಂಟಾಗಿದೆ ಎಂದು ಉಪ ಮುಖ್ಯಮಂತ್ರಿ ಎಂ.ಗೋವಿಂದ ಕಾರಜೋಳ ತಿಳಿಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರವಾಹದಿಂದ ಸೇತುವೆ, ರಸ್ತೆ, ಕೆರೆ, ಮನೆ ಸೇರಿದಂತೆ ಅಪಾರ ನಷ್ಟ ಉಂಟಾಯಿತು. ಬಳಿಕ ಸೇತುವೆ, ರಸ್ತೆ ಹಾಗೂ ಹಲವು ಕಾಮಗಾರಿಗಳನ್ನು ₹750 ಕೋಟಿ ವೆಚ್ಚದಲ್ಲಿ ಪ್ರಾರಂಭಿಸಲಾಯಿತು. ಆದರೆ, ಲಾಕ್ಡೌನ್ನಿಂದ ಕಾಮಗಾರಿಗಳ ಕೆಲಸ ಸ್ಥಗಿತಗೊಂಡಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಎಲ್ಲ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ತಡೆ ಹಿಡಿದಿದ್ದ ಕಾಮಗಾರಿಯನ್ನು ಮುಂದುವೆರಿಸಲಾಗುವುದು ಎಂದರು.</p>.<p>ಶಾಸಕ ಎಂ.ವಿ.ವೀರಭದ್ರಯ್ಯ ಮಾತನಾಡಿ, ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಕ್ಷೇತ್ರಕ್ಕೆ ಮಂಜೂರಾಗಿದ್ದ ₹22 ಕೋಟಿ ವೆಚ್ಚದ ಕಾಮಗಾರಿಯನ್ನು ಬಿಜೆಪಿ ಸರ್ಕಾರ ತಡೆಯೊಡ್ಡಿದೆ. ತಕ್ಷಣ ಈ ವಿಶೇಷ ಅನುದಾನವನ್ನು ಬಿಡುಗಡೆ ಮಾಡ ಬೇಕು ಎಂದು ಮನವಿ ಮಾಡಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ, ಮುಖ್ಯಾಧಿಕಾರಿ ಅಮರನಾರಾಯಣ, ಜಿ.ಪಂ ಸದಸ್ಯ ಎಚ್.ಕೆಂಚಮಾರಯ್ಯ, ಪುರಸಭೆ ಸದಸ್ಯರಾದ ಎಂ.ಎಸ್.ಚಂದ್ರಶೇಖರ್ ಬಾಬು, ಎಂ.ಎಲ್.ಗಂಗರಾಜು,ಎಂ.ಆರ್.ಜಗನ್ನಾಥ್, ಕೆ.ನಾರಾಯಣ, ನರಸಿಂಹಮೂರ್ತಿ, ಪಿ.ಎಲ್.ನರಸಿಂಹ ಮೂರ್ತಿ, ಡಾ.ಲಕ್ಷ್ಮಿಕಾಂತ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ: </strong>ರಾಜ್ಯದಲ್ಲಿ ಕಳೆದ ವರ್ಷದ ಪ್ರವಾಹದಿಂದಾಗಿ ₹35 ಸಾವಿರ ಕೋಟಿ ನಷ್ಟ ಉಂಟಾಗಿದೆ ಎಂದು ಉಪ ಮುಖ್ಯಮಂತ್ರಿ ಎಂ.ಗೋವಿಂದ ಕಾರಜೋಳ ತಿಳಿಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರವಾಹದಿಂದ ಸೇತುವೆ, ರಸ್ತೆ, ಕೆರೆ, ಮನೆ ಸೇರಿದಂತೆ ಅಪಾರ ನಷ್ಟ ಉಂಟಾಯಿತು. ಬಳಿಕ ಸೇತುವೆ, ರಸ್ತೆ ಹಾಗೂ ಹಲವು ಕಾಮಗಾರಿಗಳನ್ನು ₹750 ಕೋಟಿ ವೆಚ್ಚದಲ್ಲಿ ಪ್ರಾರಂಭಿಸಲಾಯಿತು. ಆದರೆ, ಲಾಕ್ಡೌನ್ನಿಂದ ಕಾಮಗಾರಿಗಳ ಕೆಲಸ ಸ್ಥಗಿತಗೊಂಡಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಎಲ್ಲ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ತಡೆ ಹಿಡಿದಿದ್ದ ಕಾಮಗಾರಿಯನ್ನು ಮುಂದುವೆರಿಸಲಾಗುವುದು ಎಂದರು.</p>.<p>ಶಾಸಕ ಎಂ.ವಿ.ವೀರಭದ್ರಯ್ಯ ಮಾತನಾಡಿ, ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಕ್ಷೇತ್ರಕ್ಕೆ ಮಂಜೂರಾಗಿದ್ದ ₹22 ಕೋಟಿ ವೆಚ್ಚದ ಕಾಮಗಾರಿಯನ್ನು ಬಿಜೆಪಿ ಸರ್ಕಾರ ತಡೆಯೊಡ್ಡಿದೆ. ತಕ್ಷಣ ಈ ವಿಶೇಷ ಅನುದಾನವನ್ನು ಬಿಡುಗಡೆ ಮಾಡ ಬೇಕು ಎಂದು ಮನವಿ ಮಾಡಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ, ಮುಖ್ಯಾಧಿಕಾರಿ ಅಮರನಾರಾಯಣ, ಜಿ.ಪಂ ಸದಸ್ಯ ಎಚ್.ಕೆಂಚಮಾರಯ್ಯ, ಪುರಸಭೆ ಸದಸ್ಯರಾದ ಎಂ.ಎಸ್.ಚಂದ್ರಶೇಖರ್ ಬಾಬು, ಎಂ.ಎಲ್.ಗಂಗರಾಜು,ಎಂ.ಆರ್.ಜಗನ್ನಾಥ್, ಕೆ.ನಾರಾಯಣ, ನರಸಿಂಹಮೂರ್ತಿ, ಪಿ.ಎಲ್.ನರಸಿಂಹ ಮೂರ್ತಿ, ಡಾ.ಲಕ್ಷ್ಮಿಕಾಂತ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>