<p><strong>ತುಮಕೂರು: </strong>ಚಕ್ರವರ್ತಿ ಗೆಳೆಯರ ಬಳಗದಿಂದ ರಾಜ್ಯಮಟ್ಟದ 7ನೇಹೊನಲು ಬೆಳಕಿನ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಫೆ.28 ರಿಂದ ಮಾರ್ಚ್ 1ರವರೆಗೆ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಮುಖಂಡ ಪಿ.ಎನ್.ಕೃಷ್ಣಮೂರ್ತಿ ತಿಳಿಸಿದರು.</p>.<p>ಪಂದ್ಯಾವಳಿಗೆ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡುವರು. ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ, ಸಚಿವ ಜೆ.ಸಿ.ಮಾಧುಸ್ವಾಮಿ, ಶಾಸಕರಾದ ಶ್ರೀನಿವಾಸ್, ಕೆ.ಎನ್.ರಾಜಣ್ಣ, ಜ್ಯೋತಿಗಣೇಶ್, ಡಿ.ಸಿ.ಗೌರಿಶಂಕರ್, ಡಾ.ಜಿ.ಪರಮೇಶ್ವರ್, ಎನ್.ಎಸ್.ಜಯಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಎರಡನೇ ದಿನದ ಪಂದ್ಯಾವಳಿಗೆ ಎಲೆರಾಂಪುರದ ಹನುಮಂತನಾಥ ಸ್ವಾಮೀಜಿ ಹಾಗೂ ಮೂರನೇ ದಿನದ ಪಂದ್ಯಾವಳಿಗೆ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟಿಗ ಅಜರುದ್ದೀನ್, ದೊಡ್ಡಗಣೇಶ್, ಮೇಯರ್ ಫರೀದಾಬೇಗಂ, ಆಯುಕ್ತ ಭೂಬಾಲನ್ ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು.</p>.<p>ಮುಖಂಡ ಧನಿಯಾಕುಮಾರ್, ಕ್ರೀಡಾಪಟುಗಳು ಹಾಗೂ ಪೌರಕಾರ್ಮಿಕರು ಸೇರಿದಂತೆ 100 ಮಂದಿಯನ್ನು ಅಭಿನಂದಿಸಲಾಗುವುದು. ಮಾಹಿತಿಗೆ ಮೊಬೈಲ್ 98458 95324, 97421 23433 ಸಂಪರ್ಕಿಸಬಹುದು ಎಂದರು.</p>.<p>ಈಗಾಗಲೇ ಈ ಪಂದ್ಯಾವಳಿಯಲ್ಲಿ ಭಾಗವಹಿಸಲು 20 ತಂಡಗಳು ನೋಂದಣಿ ಮಾಡಿಕೊಂಡಿವೆ. ಪ್ರಥಮ ಬಹುಮಾನ ₹2.50 ಲಕ್ಷ, ದ್ವಿತೀಯ ₹1.50 ಲಕ್ಷ ಹಾಗೂ ಪ್ರತಿ ಪಂದ್ಯಕ್ಕೆ ಪಂದ್ಯಶ್ರೇಷ್ಟ ಹಾಗೂ ಸರಣಿಯ ಕೊನೆಯಲ್ಲಿ ವಿಶೇಷ ಸರಣಿ ಶ್ರೇಷ್ಟ ಪ್ರಶಸ್ತಿ ನೀಡಲಾಗುವುದು. ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡಗಳಿಗೆ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಚಕ್ರವರ್ತಿ ಗೆಳೆಯರ ಬಳಗದಿಂದ ರಾಜ್ಯಮಟ್ಟದ 7ನೇಹೊನಲು ಬೆಳಕಿನ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಫೆ.28 ರಿಂದ ಮಾರ್ಚ್ 1ರವರೆಗೆ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಮುಖಂಡ ಪಿ.ಎನ್.ಕೃಷ್ಣಮೂರ್ತಿ ತಿಳಿಸಿದರು.</p>.<p>ಪಂದ್ಯಾವಳಿಗೆ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡುವರು. ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ, ಸಚಿವ ಜೆ.ಸಿ.ಮಾಧುಸ್ವಾಮಿ, ಶಾಸಕರಾದ ಶ್ರೀನಿವಾಸ್, ಕೆ.ಎನ್.ರಾಜಣ್ಣ, ಜ್ಯೋತಿಗಣೇಶ್, ಡಿ.ಸಿ.ಗೌರಿಶಂಕರ್, ಡಾ.ಜಿ.ಪರಮೇಶ್ವರ್, ಎನ್.ಎಸ್.ಜಯಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಎರಡನೇ ದಿನದ ಪಂದ್ಯಾವಳಿಗೆ ಎಲೆರಾಂಪುರದ ಹನುಮಂತನಾಥ ಸ್ವಾಮೀಜಿ ಹಾಗೂ ಮೂರನೇ ದಿನದ ಪಂದ್ಯಾವಳಿಗೆ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟಿಗ ಅಜರುದ್ದೀನ್, ದೊಡ್ಡಗಣೇಶ್, ಮೇಯರ್ ಫರೀದಾಬೇಗಂ, ಆಯುಕ್ತ ಭೂಬಾಲನ್ ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು.</p>.<p>ಮುಖಂಡ ಧನಿಯಾಕುಮಾರ್, ಕ್ರೀಡಾಪಟುಗಳು ಹಾಗೂ ಪೌರಕಾರ್ಮಿಕರು ಸೇರಿದಂತೆ 100 ಮಂದಿಯನ್ನು ಅಭಿನಂದಿಸಲಾಗುವುದು. ಮಾಹಿತಿಗೆ ಮೊಬೈಲ್ 98458 95324, 97421 23433 ಸಂಪರ್ಕಿಸಬಹುದು ಎಂದರು.</p>.<p>ಈಗಾಗಲೇ ಈ ಪಂದ್ಯಾವಳಿಯಲ್ಲಿ ಭಾಗವಹಿಸಲು 20 ತಂಡಗಳು ನೋಂದಣಿ ಮಾಡಿಕೊಂಡಿವೆ. ಪ್ರಥಮ ಬಹುಮಾನ ₹2.50 ಲಕ್ಷ, ದ್ವಿತೀಯ ₹1.50 ಲಕ್ಷ ಹಾಗೂ ಪ್ರತಿ ಪಂದ್ಯಕ್ಕೆ ಪಂದ್ಯಶ್ರೇಷ್ಟ ಹಾಗೂ ಸರಣಿಯ ಕೊನೆಯಲ್ಲಿ ವಿಶೇಷ ಸರಣಿ ಶ್ರೇಷ್ಟ ಪ್ರಶಸ್ತಿ ನೀಡಲಾಗುವುದು. ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡಗಳಿಗೆ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>