<p><strong>ತುಮಕೂರು</strong>: ಪ್ರವರ್ಗ ‘2ಎ’ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಲಿಂಗಾಯತ ಪಂಚಮಸಾಲಿ ಸಮುದಾಯದ ಪಾದಯಾತ್ರೆ ಶುಕ್ರವಾರ ನಗರದ ಸಿದ್ಧಗಂಗಾ ಮಠದಲ್ಲಿ ವಾಸ್ತವ್ಯ ಹೂಡಲಿದೆ. ಗುರುವಾರ ರಾತ್ರಿ ಕೋರದ ಸಿದ್ಧಗಂಗಾ ವಿದ್ಯಾ ಸಂಸ್ಥೆಯಲ್ಲಿ ಪಾದಯಾತ್ರಿಗಳು ವಾಸ್ತವ್ಯ ಹೂಡಿದ್ದರು.</p>.<p>ನಿರಂತರವಾಗಿ 590 ಕಿ.ಮೀ ಪಾದಯಾತ್ರೆ ಕ್ರಮಿಸಿದ್ದೇವೆ. ಬುಧವಾರ ರಾತ್ರಿ ಪಂಚಮಸಾಲಿ ಸಮುದಾಯದ ಸಚಿವರು, ಶಾಸಕರು ನಡೆಸಿದ ಸಭೆ ಸಮುದಾಯದ ಇತಿಹಾಸದಲ್ಲೇ ಮೊದಲ ಬಾರಿ ಒಗ್ಗಟ್ಟು ಪ್ರದರ್ಶಿಸಲು ವೇದಿಕೆ ಆಯಿತು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p><strong>ಮೂತ್ರ ಪರೀಕ್ಷೆ: </strong>ಬುಧವಾರ ರಾತ್ರಿ ನಡೆದ ಸಭೆಯಲ್ಲಿ ಸಚಿವ ಸಿ.ಸಿ.ಪಾಟೀಲ್ ಮತ್ತು ಪಂಚಮಸಾಲಿ ಸಮುದಾಯದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿತ್ತು. ಈ ಕುರಿತು ಗುರುವಾರದ ಪಾದಯಾತ್ರೆಯಲ್ಲಿ ಸಚಿವರ ವಿರುದ್ಧ ವಿಜಯಾನಂದ ಕಾಶಪ್ಪನವರ್ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಆಮರಣಾಂತ ಉಪವಾಸ ಮಾಡಿದರೆ ಮೂತ್ರ ಪರೀಕ್ಷೆ ಮಾಡಿಸುತ್ತೇನೆ ಎಂದು ಸಿ.ಸಿ.ಪಾಟೀಲ್ ಸಭೆಯಲ್ಲಿ ಹೇಳಿದರು. ಸರ್ಕಾರದ ಪರವಾದ ಸಚಿವರಾಗಿ ಸಭೆಯಲ್ಲಿ ಮಾತನಾಡಿದ ರೀತಿ ಸರಿ ಇರಲಿಲ್ಲ. ನಮ್ಮನ್ನು ಪರೀಕ್ಷೆ ಮಾಡಲಿ, ಪೂಜ್ಯರ ಮೂತ್ರವನ್ನೂ ಪರೀಕ್ಷೆ ಮಾಡಲಿ. ಮುಂದೆ ಸಮಾಜದವರೇ ಅವರ ಮೂತ್ರ ಪರೀಕ್ಷಿಸುವರು. ಆ ಕಾಲ ಬರುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆಯುವ ಸಭೆಯಲ್ಲಿ ಈ ರೀತಿ ಸಚಿವರು ಮಾತನಾಡುವುದು ಎಷ್ಟು ಸರಿ. ನಮ್ಮದು ಪಕ್ಷಾತೀತ ಹೋರಾಟ. ನಮಗೆ ಮೀಸಲಾತಿ ಬೇಕು ಅಷ್ಟೇ’ ಎಂದು ಹೇಳಿದರು.</p>.<p>ಪಾದಯಾತ್ರೆಯಲ್ಲಿ ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಪ್ರವರ್ಗ ‘2ಎ’ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಲಿಂಗಾಯತ ಪಂಚಮಸಾಲಿ ಸಮುದಾಯದ ಪಾದಯಾತ್ರೆ ಶುಕ್ರವಾರ ನಗರದ ಸಿದ್ಧಗಂಗಾ ಮಠದಲ್ಲಿ ವಾಸ್ತವ್ಯ ಹೂಡಲಿದೆ. ಗುರುವಾರ ರಾತ್ರಿ ಕೋರದ ಸಿದ್ಧಗಂಗಾ ವಿದ್ಯಾ ಸಂಸ್ಥೆಯಲ್ಲಿ ಪಾದಯಾತ್ರಿಗಳು ವಾಸ್ತವ್ಯ ಹೂಡಿದ್ದರು.</p>.<p>ನಿರಂತರವಾಗಿ 590 ಕಿ.ಮೀ ಪಾದಯಾತ್ರೆ ಕ್ರಮಿಸಿದ್ದೇವೆ. ಬುಧವಾರ ರಾತ್ರಿ ಪಂಚಮಸಾಲಿ ಸಮುದಾಯದ ಸಚಿವರು, ಶಾಸಕರು ನಡೆಸಿದ ಸಭೆ ಸಮುದಾಯದ ಇತಿಹಾಸದಲ್ಲೇ ಮೊದಲ ಬಾರಿ ಒಗ್ಗಟ್ಟು ಪ್ರದರ್ಶಿಸಲು ವೇದಿಕೆ ಆಯಿತು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p><strong>ಮೂತ್ರ ಪರೀಕ್ಷೆ: </strong>ಬುಧವಾರ ರಾತ್ರಿ ನಡೆದ ಸಭೆಯಲ್ಲಿ ಸಚಿವ ಸಿ.ಸಿ.ಪಾಟೀಲ್ ಮತ್ತು ಪಂಚಮಸಾಲಿ ಸಮುದಾಯದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿತ್ತು. ಈ ಕುರಿತು ಗುರುವಾರದ ಪಾದಯಾತ್ರೆಯಲ್ಲಿ ಸಚಿವರ ವಿರುದ್ಧ ವಿಜಯಾನಂದ ಕಾಶಪ್ಪನವರ್ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಆಮರಣಾಂತ ಉಪವಾಸ ಮಾಡಿದರೆ ಮೂತ್ರ ಪರೀಕ್ಷೆ ಮಾಡಿಸುತ್ತೇನೆ ಎಂದು ಸಿ.ಸಿ.ಪಾಟೀಲ್ ಸಭೆಯಲ್ಲಿ ಹೇಳಿದರು. ಸರ್ಕಾರದ ಪರವಾದ ಸಚಿವರಾಗಿ ಸಭೆಯಲ್ಲಿ ಮಾತನಾಡಿದ ರೀತಿ ಸರಿ ಇರಲಿಲ್ಲ. ನಮ್ಮನ್ನು ಪರೀಕ್ಷೆ ಮಾಡಲಿ, ಪೂಜ್ಯರ ಮೂತ್ರವನ್ನೂ ಪರೀಕ್ಷೆ ಮಾಡಲಿ. ಮುಂದೆ ಸಮಾಜದವರೇ ಅವರ ಮೂತ್ರ ಪರೀಕ್ಷಿಸುವರು. ಆ ಕಾಲ ಬರುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆಯುವ ಸಭೆಯಲ್ಲಿ ಈ ರೀತಿ ಸಚಿವರು ಮಾತನಾಡುವುದು ಎಷ್ಟು ಸರಿ. ನಮ್ಮದು ಪಕ್ಷಾತೀತ ಹೋರಾಟ. ನಮಗೆ ಮೀಸಲಾತಿ ಬೇಕು ಅಷ್ಟೇ’ ಎಂದು ಹೇಳಿದರು.</p>.<p>ಪಾದಯಾತ್ರೆಯಲ್ಲಿ ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>