ತುಮಕೂರು: ಕೋರ ಹೋಬಳಿ ನರಸೀಪುರ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಗಣಿಗಾರಿಕೆ ಸ್ಥಳದ ಮೇಲೆ ಶುಕ್ರವಾರ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಉಮಾಶಂಕರ್ ಗಣಿಗಾರಿಕೆಗೆ ಬಳಸುತ್ತಿದ್ದ ಪರಿಕರ ಹಾಗೂ ಅಕ್ರಮವಾಗಿ ಸಂಗ್ರಹಿಸಿದ್ದ ₹ 9 ಲಕ್ಷ ಮೌಲ್ಯದ ಕಲ್ಲನ್ನು ವಶಪಡಿಸಿಕೊಂಡಿದ್ದಾರೆ.