<p><strong>ಶಿರಾ:</strong> ತಾಲ್ಲೂಕಿನ ದ್ವಾರನಕುಂಟೆ ಗ್ರಾಮದ ಡಿ.ಕೆ.ಕೊಟೇಶ್ ಹುಟ್ಟಿನಿಂದ ಅಂಧನಾಗಿದ್ದರೂ ಅಂಗವಿಕಲತೆಯನ್ನು ಮೆಟ್ಟಿ ನಿಂತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 501 ಅಂಕಗಳನ್ನು ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದು, ಮುಂದೆ ಓದಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದ ಕೊಟೇಶ್ಗೆ ಶಿಕ್ಷಣದ ಮುಂದಿನ ವೆಚ್ಚ ಭರಿಸಲು ದಾನಿಗಳು ಮುಂದೆ ಬಂದಿದ್ದಾರೆ.</p>.<p>ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ಪುತ್ರ ಡಾ.ಸಿ.ಎಂ.ರಾಜೇಶ್ ಗೌಡ ಅವರು ಬುಧವಾರ ದ್ವಾರನಕುಂಟೆ ಗ್ರಾಮದಲ್ಲಿರುವ ಡಿ.ಕೆ.ಕೊಟೇಶನ ಮನೆಗೆ ಭೇಟಿ ನೀಡಿ ಮುಂದಿನ ಶಿಕ್ಷಣ ಪಡೆಯುವ ಬಗ್ಗೆ ಪೋಷಕರೊಂದಿಗೆ ಚರ್ಚಿಸಿದರು.</p>.<p>‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ರಾಜೇಶ್ ಗೌಡ, ‘ಬಡತನ ಯಾರಿಗೂ ಶಾಶ್ವತವಲ್ಲ. ಜೊತೆಗೆ ಅಂಧತ್ವ ಸಾಧನೆಗೆ ಅಡ್ಡಿಯಾಗುವುದಿಲ್ಲ ಎನ್ನುವುದನ್ನು ಕೊಟೇಶ್ ತೋರಿಸಿ ಕೊಟ್ಟಿದ್ದಾನೆ. ಇವರಿಗೆ ಓದಬೇಕೆಂಬ ಹಂಬಲ ಇದೆ. ಈ ಪ್ರತಿಭೆಯ ಬದುಕಿನಲ್ಲಿ ಬೆಳಕು ಚೆಲ್ಲುವ ದೃಷ್ಟಿಯಿಂದ ಆರ್ಥಿಕ ನೆರವು ನೀಡಲಾಗುವುದು’ ಎಂದರು.</p>.<p>ಮೇ 3ರಂದು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ‘ಬಡತನ, ಅಂಗವಿಕಲತೆ ಮೆಟ್ಟಿನಿಂತ ಕೋಟೇಶ್’ ವರದಿಯನ್ನು ಗಮನಿಸಿದ ರಾಜೇಶ್ ಗೌಡ ಅವರು ಕೋಟೇಶ್ಗೆ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರದಿದ್ದಾರೆ.</p>.<p>ಮಾಜಿ ಸೈನಿಕ ಸಣ್ಣರಂಗಪ್ಪ, ಶಿಕ್ಷಕ ದ್ವಾರನಕುಂಟೆ ಲಕ್ಷ್ಮಣ್, ಮುಖಂಡರಾದ ಪ್ರಕಾಶ್ಗೌಡ, ಬಾಲೇಗೌಡ, ಬಿ.ಎಚ್.ಸುರೇಶ್, ಮೂಡಲಗಿರಿಯಪ್ಪ, ದೊಡ್ಮನೆ ರಂಗನಾಥ್, ಕರೇಕ್ಯಾತನಹಳ್ಳಿ ಮಹೇಂದ್ರ, ತಾವರೆಕೆರೆ ದೇವರಾಜು, ವರದಪುರ ರಾಮಣ್ಣ, ಚಂಗಾವರ ಮಾರಣ್ಣ, ರಘು, ದೇವರಾಜು ಇದ್ದರು.</p>.<p class="Subhead"><strong>ಆರ್ಥಿಕ ಸಹಾಯ:</strong> ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ ವರದಿಯನ್ನು ನೋಡಿ ಹಲವು ಜನ ಸ್ಪಂದಿಸಿದ್ದು, ಕೊಟೇಶನ ಮುಂದಿನ ವ್ಯಾಸಂಗಕ್ಕೆ ಸಹಾಯವಾಗಲೆಂದು ಅವರ ಬ್ಯಾಂಕ್ ಖಾತೆಗೆ ₹ 25 ಸಾವಿರ ನೆರವು ಬಂದಿದೆ. ಮೂಲಕ ಅಂದ ವಿಧ್ಯಾರ್ಥಿಗೆ ಹಲವರು ಆರ್ಥಿಕ ಬಲ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ತಾಲ್ಲೂಕಿನ ದ್ವಾರನಕುಂಟೆ ಗ್ರಾಮದ ಡಿ.ಕೆ.ಕೊಟೇಶ್ ಹುಟ್ಟಿನಿಂದ ಅಂಧನಾಗಿದ್ದರೂ ಅಂಗವಿಕಲತೆಯನ್ನು ಮೆಟ್ಟಿ ನಿಂತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 501 ಅಂಕಗಳನ್ನು ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದು, ಮುಂದೆ ಓದಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದ ಕೊಟೇಶ್ಗೆ ಶಿಕ್ಷಣದ ಮುಂದಿನ ವೆಚ್ಚ ಭರಿಸಲು ದಾನಿಗಳು ಮುಂದೆ ಬಂದಿದ್ದಾರೆ.</p>.<p>ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ಪುತ್ರ ಡಾ.ಸಿ.ಎಂ.ರಾಜೇಶ್ ಗೌಡ ಅವರು ಬುಧವಾರ ದ್ವಾರನಕುಂಟೆ ಗ್ರಾಮದಲ್ಲಿರುವ ಡಿ.ಕೆ.ಕೊಟೇಶನ ಮನೆಗೆ ಭೇಟಿ ನೀಡಿ ಮುಂದಿನ ಶಿಕ್ಷಣ ಪಡೆಯುವ ಬಗ್ಗೆ ಪೋಷಕರೊಂದಿಗೆ ಚರ್ಚಿಸಿದರು.</p>.<p>‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ರಾಜೇಶ್ ಗೌಡ, ‘ಬಡತನ ಯಾರಿಗೂ ಶಾಶ್ವತವಲ್ಲ. ಜೊತೆಗೆ ಅಂಧತ್ವ ಸಾಧನೆಗೆ ಅಡ್ಡಿಯಾಗುವುದಿಲ್ಲ ಎನ್ನುವುದನ್ನು ಕೊಟೇಶ್ ತೋರಿಸಿ ಕೊಟ್ಟಿದ್ದಾನೆ. ಇವರಿಗೆ ಓದಬೇಕೆಂಬ ಹಂಬಲ ಇದೆ. ಈ ಪ್ರತಿಭೆಯ ಬದುಕಿನಲ್ಲಿ ಬೆಳಕು ಚೆಲ್ಲುವ ದೃಷ್ಟಿಯಿಂದ ಆರ್ಥಿಕ ನೆರವು ನೀಡಲಾಗುವುದು’ ಎಂದರು.</p>.<p>ಮೇ 3ರಂದು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ‘ಬಡತನ, ಅಂಗವಿಕಲತೆ ಮೆಟ್ಟಿನಿಂತ ಕೋಟೇಶ್’ ವರದಿಯನ್ನು ಗಮನಿಸಿದ ರಾಜೇಶ್ ಗೌಡ ಅವರು ಕೋಟೇಶ್ಗೆ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರದಿದ್ದಾರೆ.</p>.<p>ಮಾಜಿ ಸೈನಿಕ ಸಣ್ಣರಂಗಪ್ಪ, ಶಿಕ್ಷಕ ದ್ವಾರನಕುಂಟೆ ಲಕ್ಷ್ಮಣ್, ಮುಖಂಡರಾದ ಪ್ರಕಾಶ್ಗೌಡ, ಬಾಲೇಗೌಡ, ಬಿ.ಎಚ್.ಸುರೇಶ್, ಮೂಡಲಗಿರಿಯಪ್ಪ, ದೊಡ್ಮನೆ ರಂಗನಾಥ್, ಕರೇಕ್ಯಾತನಹಳ್ಳಿ ಮಹೇಂದ್ರ, ತಾವರೆಕೆರೆ ದೇವರಾಜು, ವರದಪುರ ರಾಮಣ್ಣ, ಚಂಗಾವರ ಮಾರಣ್ಣ, ರಘು, ದೇವರಾಜು ಇದ್ದರು.</p>.<p class="Subhead"><strong>ಆರ್ಥಿಕ ಸಹಾಯ:</strong> ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ ವರದಿಯನ್ನು ನೋಡಿ ಹಲವು ಜನ ಸ್ಪಂದಿಸಿದ್ದು, ಕೊಟೇಶನ ಮುಂದಿನ ವ್ಯಾಸಂಗಕ್ಕೆ ಸಹಾಯವಾಗಲೆಂದು ಅವರ ಬ್ಯಾಂಕ್ ಖಾತೆಗೆ ₹ 25 ಸಾವಿರ ನೆರವು ಬಂದಿದೆ. ಮೂಲಕ ಅಂದ ವಿಧ್ಯಾರ್ಥಿಗೆ ಹಲವರು ಆರ್ಥಿಕ ಬಲ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>