ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ | ಪರೀಕ್ಷೆ ಬರೆಯಲು ಬಂದ ಕ್ವಾರಂಟೈನ್‌ನಲ್ಲಿದ್ದ ವಿದ್ಯಾರ್ಥಿ ಆಸ್ಪತ್ರೆಗೆ

Last Updated 25 ಜೂನ್ 2020, 5:23 IST
ಅಕ್ಷರ ಗಾತ್ರ

ಶಿರಾ (ತುಮಕೂರು ಜಿಲ್ಲೆ):ತಾಲ್ಲೂಕು ಪಟ್ಟನಾಯಕನಹಳ್ಳಿ ಪರೀಕ್ಷಾ ಕೇಂದ್ರಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದಿದ್ದ ಕ್ವಾರಂಟೈನ್‌ಲ್ಲಿದ್ದ ವಿದ್ಯಾರ್ಥಿಯನ್ನು ವಾಪಸ್ ಕಳುಹಿಸಲಾಗಿದೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಇದ್ದ ವಿದ್ಯಾರ್ಥಿ, ಮೂರು ದಿನಗಳ ಹಿಂದೆ ಸ್ವಗ್ರಾಮ ಕಾಮಗೊಂಡನಹಳ್ಳಿಗೆ ಬಂದಿದ್ದ. ಆತನನ್ನು ಕ್ವಾರಂಟೈನ್ ಮಾಡಲಾಗಿತ್ತು.

ಗುರುವಾರ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದು ವಾಪಸ್ ಕಳುಹಿಸಲಾಯಿತು. ಆರೋಗ್ಯ ಇಲಾಖೆ ಅಧಿಕಾರಿಗಳು ವಿದ್ಯಾರ್ಥಿ ಮನೆಯ ಸುತ್ತ ಸ್ಯಾನಿಟೈಸ್ ಮಾಡಿದ್ದಾರೆ. ತಪಾಸಣೆಗಾಗಿ ಆತನನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಕರೆತರಲಾಗಿದೆ.

ಪೂರಕ ಪರೀಕ್ಷೆಯಲ್ಲಿ ಈ ವಿದ್ಯಾರ್ಥಿಗೆ ಅವಕಾಶ ನೀಡಲಾಗುತ್ತದೆ. ಈ ವಿದ್ಯಾರ್ಥಿಯನ್ನು ಮೊದಲ ಸಲ ಪರೀಕ್ಷೆ ಬರೆಯುತ್ತಿರುವರು (ಫ್ರೆಶರ್ಸ್) ಎಂದು ಪರಿಗಣಿಸಲಾಗುವುದು ಎಂದು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ರೇವಣಸಿದ್ಧಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT