<p><strong>ತುಮಕೂರು</strong>: ಜಿಲ್ಲೆಯ ಔಷಧ ವಿಜ್ಞಾನ ಮತ್ತು ಅರೆ ವೈದ್ಯಕೀಯ ಪದವಿ ವಿದ್ಯಾರ್ಥಿಗಳು ಶುಕ್ರವಾರ ನಗರದ ಕ್ರೋಮೋಡ್ ಬಯೋಟೆಕ್ ಕೈಗಾರಿಕೆಗೆ ಭೇಟಿ ನೀಡಿ, ಹಲವು ವಿಚಾರಗಳ ಕುರಿತು ಮಾಹಿತಿ ಪಡೆದುಕೊಂಡರು.</p>.<p>ಹಾಲಪ್ಪ ಪ್ರತಿಷ್ಠಾನದಿಂದ ‘ಕೈಗಾರಿಕಾ ಅಧ್ಯಯನ ಭೇಟಿ’ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಅಧ್ಯಾಪಕರು ಭಾಗವಹಿಸಿದ್ದರು.</p>.<p>‘ಉದ್ಯೋಗ ಪಡೆಯುವ, ಸ್ವಯಂ ಉದ್ಯೋಗದ ಕನಸು ಕಾಣುತ್ತಿರುವ ಯುವ ಜನತೆ ಮತ್ತು ಉದ್ದಿಮೆದಾರರ ಜತೆ ನೇರ ಸಂಪರ್ಕ ಏರ್ಪಡಿಸಲಾಗುತ್ತಿದೆ. ವಿದ್ಯಾರ್ಥಿ ಮತ್ತು ಕೈಗಾರಿಕೆ ಮಧ್ಯೆ ಸೇತುವೆಯಾಗಿ ಪ್ರತಿಷ್ಠಾನ ಕೆಲಸ ಮಾಡುತ್ತಿದೆ’ ಎಂದು ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ್ ಹಾಲಪ್ಪ ಹೇಳಿದರು.</p>.<p>ಉದ್ಯೋಗಾಧಾರಿತ ಶಿಕ್ಷಣ ಕಲಿಯುತ್ತಿರುವ ಮಕ್ಕಳು ಕೈಗಾರಿಕೆಗಳಿಗೆ ಭೇಟಿ ನೀಡಬೇಕು. ಉದ್ಯಮ ಎಂದರೆ ಏನು, ಅದರಲ್ಲಿ ಏನೇನು ಅಡಕವಾಗಿದೆ. ಇದರ ಹಿಂದಿನ ಶ್ರಮ, ಯಾವೆಲ್ಲ ಇಲಾಖೆಗಳ ಸಹಕಾರ, ಸಹಯೋಗ ಇದೆ ಎಂಬುದು ತಿಳಿಯುತ್ತದೆ. ಮಾರ್ಗದರ್ಶನ ಪಡೆಯಲು ಸಹಕಾರಿಯಾಗುತ್ತದೆ ಎಂದರು.</p>.<p>ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರದ ಮುಖ್ಯಸ್ಥ ಮಧು, ‘ಯುವ ಸಮೂಹ ಎಲ್ಲದರಲ್ಲಿಯೂ ಆಸಕ್ತಿ ಕಳೆದುಕೊಳ್ಳುತ್ತಿದೆ. ಮೊಬೈಲ್ ಇದ್ದರೆ ಸಾಕು, ಇನ್ನೇನು ಬೇಡ ಎನ್ನುವ ಮನಃಸ್ಥಿತಿ ಇದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಶ್, ‘ಉದ್ದಿಮೆ ಪ್ರಾರಂಭಕ್ಕೆ ಅಗತ್ಯ ಭೂಮಿ ಪಡೆಯಲು ಕೆಐಎಡಿಬಿಗೆ ಅರ್ಜಿ ಸಲ್ಲಿಸಬೇಕು. ನಂತರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪರಿಶೀಲಿಸಿ ಹಂಚಿಕೆ ಮಾಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.</p>.<p>ಕೈಗಾರಿಕಾ ಹಣಕಾಸು ನಿಗಮದ ಶ್ರೀನಿವಾಸ್, ವಿ.ಪಿ.ಆಗ್ರೊ ಸೈನ್ಸ್ನ ಪಾರ್ಥಸಾರಥಿ, ಸಿದ್ಧಗಂಗಾ ಇನ್ಕ್ಯುಬೇಷನ್ ಸೆಂಟರ್ನ ಶ್ರೀಕಾಂತ್ ನಾಯರ್, ಕ್ರೋಮೆಡ್ ಬಯೋ ಸೈನ್ಸ್ ನಿರ್ದೇಶಕರಾದ ರಾಜೇಶ್, ಉಮಾಶಂಕರ್, ಅಶ್ವಿನಿ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಜಿಲ್ಲೆಯ ಔಷಧ ವಿಜ್ಞಾನ ಮತ್ತು ಅರೆ ವೈದ್ಯಕೀಯ ಪದವಿ ವಿದ್ಯಾರ್ಥಿಗಳು ಶುಕ್ರವಾರ ನಗರದ ಕ್ರೋಮೋಡ್ ಬಯೋಟೆಕ್ ಕೈಗಾರಿಕೆಗೆ ಭೇಟಿ ನೀಡಿ, ಹಲವು ವಿಚಾರಗಳ ಕುರಿತು ಮಾಹಿತಿ ಪಡೆದುಕೊಂಡರು.</p>.<p>ಹಾಲಪ್ಪ ಪ್ರತಿಷ್ಠಾನದಿಂದ ‘ಕೈಗಾರಿಕಾ ಅಧ್ಯಯನ ಭೇಟಿ’ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಅಧ್ಯಾಪಕರು ಭಾಗವಹಿಸಿದ್ದರು.</p>.<p>‘ಉದ್ಯೋಗ ಪಡೆಯುವ, ಸ್ವಯಂ ಉದ್ಯೋಗದ ಕನಸು ಕಾಣುತ್ತಿರುವ ಯುವ ಜನತೆ ಮತ್ತು ಉದ್ದಿಮೆದಾರರ ಜತೆ ನೇರ ಸಂಪರ್ಕ ಏರ್ಪಡಿಸಲಾಗುತ್ತಿದೆ. ವಿದ್ಯಾರ್ಥಿ ಮತ್ತು ಕೈಗಾರಿಕೆ ಮಧ್ಯೆ ಸೇತುವೆಯಾಗಿ ಪ್ರತಿಷ್ಠಾನ ಕೆಲಸ ಮಾಡುತ್ತಿದೆ’ ಎಂದು ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ್ ಹಾಲಪ್ಪ ಹೇಳಿದರು.</p>.<p>ಉದ್ಯೋಗಾಧಾರಿತ ಶಿಕ್ಷಣ ಕಲಿಯುತ್ತಿರುವ ಮಕ್ಕಳು ಕೈಗಾರಿಕೆಗಳಿಗೆ ಭೇಟಿ ನೀಡಬೇಕು. ಉದ್ಯಮ ಎಂದರೆ ಏನು, ಅದರಲ್ಲಿ ಏನೇನು ಅಡಕವಾಗಿದೆ. ಇದರ ಹಿಂದಿನ ಶ್ರಮ, ಯಾವೆಲ್ಲ ಇಲಾಖೆಗಳ ಸಹಕಾರ, ಸಹಯೋಗ ಇದೆ ಎಂಬುದು ತಿಳಿಯುತ್ತದೆ. ಮಾರ್ಗದರ್ಶನ ಪಡೆಯಲು ಸಹಕಾರಿಯಾಗುತ್ತದೆ ಎಂದರು.</p>.<p>ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರದ ಮುಖ್ಯಸ್ಥ ಮಧು, ‘ಯುವ ಸಮೂಹ ಎಲ್ಲದರಲ್ಲಿಯೂ ಆಸಕ್ತಿ ಕಳೆದುಕೊಳ್ಳುತ್ತಿದೆ. ಮೊಬೈಲ್ ಇದ್ದರೆ ಸಾಕು, ಇನ್ನೇನು ಬೇಡ ಎನ್ನುವ ಮನಃಸ್ಥಿತಿ ಇದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಶ್, ‘ಉದ್ದಿಮೆ ಪ್ರಾರಂಭಕ್ಕೆ ಅಗತ್ಯ ಭೂಮಿ ಪಡೆಯಲು ಕೆಐಎಡಿಬಿಗೆ ಅರ್ಜಿ ಸಲ್ಲಿಸಬೇಕು. ನಂತರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪರಿಶೀಲಿಸಿ ಹಂಚಿಕೆ ಮಾಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.</p>.<p>ಕೈಗಾರಿಕಾ ಹಣಕಾಸು ನಿಗಮದ ಶ್ರೀನಿವಾಸ್, ವಿ.ಪಿ.ಆಗ್ರೊ ಸೈನ್ಸ್ನ ಪಾರ್ಥಸಾರಥಿ, ಸಿದ್ಧಗಂಗಾ ಇನ್ಕ್ಯುಬೇಷನ್ ಸೆಂಟರ್ನ ಶ್ರೀಕಾಂತ್ ನಾಯರ್, ಕ್ರೋಮೆಡ್ ಬಯೋ ಸೈನ್ಸ್ ನಿರ್ದೇಶಕರಾದ ರಾಜೇಶ್, ಉಮಾಶಂಕರ್, ಅಶ್ವಿನಿ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>