<p><strong>ತಿಪಟೂರು:</strong> ನಗರದ ಅಂಬೇಡ್ಕರ್ ವೃತ್ತದ ಬಳಿಯಿರುವ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ವಸತಿ ನಿಲಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳು ಗುದ್ದಲಿ, ಹಾರೆ ಹಿಡಿದು ಭಾನುವಾರ ಕಾರ್ಮಿಕರಂತೆ ಕೆಲಸ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<p>ಈ ಹಿನ್ನೆಲೆಯಲ್ಲಿ ವಸತಿ ನಿಲಯಕ್ಕೆ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಕಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು.</p>.<p>ಕೊಠಡಿ ಸಮಸ್ಯೆ ಇರುವ ಕಾರಣ ಒಂದೇ ಕೊಠಡಿಯಲ್ಲಿ ಗುದ್ದಲಿ, ಹಾರೆ, ಮುರಿದು ಹೋಗಿರುವ ಮಂಚ, ಹರಿದ ಹಾಸಿಗೆ, ಅನುಪಯುಕ್ತ ವಸ್ತುಗಳನ್ನು ಇಡಲಾಗಿದೆ. ಅಲ್ಲಿಯೇ ಹಾಸ್ಟೆಲ್ ಸಂಬಂಧಿಸಿದ ಅಕ್ಕಿಯನ್ನು ಶೇಖರಣೆ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಈಗಾಗಲೇ ಭೋಜನಾಲಯಕ್ಕೆ, ಶೌಚಾಲಯಕ್ಕೆ ₹30 ಲಕ್ಷ ಅನುದಾನ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಹಾಸ್ಟೆಲ್ ಉಗ್ರಾಣದ ಕೋಠಡಿಯ ಚಾವಣಿ ಗೋಡೆಗಳು ಕುಸಿದು ಚೀಲದ ಮೇಲೆ ಮಣ್ಣು ಬೀಳುತ್ತಿದೆ. ವಿದ್ಯಾರ್ಥಿಗಳಿಗೆ ಕೊಟ್ಟಿರುವ ಹಾಸಿಗೆ, ತಲೆದಿಂಬು ಹರಿದು ಹೋಗಿದೆ. ಕೊಠಡಿಗಳಿಗೆ ಸರಿಯಾದ ವಿದ್ಯುತ್ ಸಂಪರ್ಕ ವ್ಯವಸ್ಥೆ ಇಲ್ಲದೆ ಸಮಸ್ಯೆಗಳ ಮಧ್ಯೆ ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ಇರುವಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ನಗರದ ಅಂಬೇಡ್ಕರ್ ವೃತ್ತದ ಬಳಿಯಿರುವ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ವಸತಿ ನಿಲಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳು ಗುದ್ದಲಿ, ಹಾರೆ ಹಿಡಿದು ಭಾನುವಾರ ಕಾರ್ಮಿಕರಂತೆ ಕೆಲಸ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<p>ಈ ಹಿನ್ನೆಲೆಯಲ್ಲಿ ವಸತಿ ನಿಲಯಕ್ಕೆ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಕಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು.</p>.<p>ಕೊಠಡಿ ಸಮಸ್ಯೆ ಇರುವ ಕಾರಣ ಒಂದೇ ಕೊಠಡಿಯಲ್ಲಿ ಗುದ್ದಲಿ, ಹಾರೆ, ಮುರಿದು ಹೋಗಿರುವ ಮಂಚ, ಹರಿದ ಹಾಸಿಗೆ, ಅನುಪಯುಕ್ತ ವಸ್ತುಗಳನ್ನು ಇಡಲಾಗಿದೆ. ಅಲ್ಲಿಯೇ ಹಾಸ್ಟೆಲ್ ಸಂಬಂಧಿಸಿದ ಅಕ್ಕಿಯನ್ನು ಶೇಖರಣೆ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಈಗಾಗಲೇ ಭೋಜನಾಲಯಕ್ಕೆ, ಶೌಚಾಲಯಕ್ಕೆ ₹30 ಲಕ್ಷ ಅನುದಾನ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಹಾಸ್ಟೆಲ್ ಉಗ್ರಾಣದ ಕೋಠಡಿಯ ಚಾವಣಿ ಗೋಡೆಗಳು ಕುಸಿದು ಚೀಲದ ಮೇಲೆ ಮಣ್ಣು ಬೀಳುತ್ತಿದೆ. ವಿದ್ಯಾರ್ಥಿಗಳಿಗೆ ಕೊಟ್ಟಿರುವ ಹಾಸಿಗೆ, ತಲೆದಿಂಬು ಹರಿದು ಹೋಗಿದೆ. ಕೊಠಡಿಗಳಿಗೆ ಸರಿಯಾದ ವಿದ್ಯುತ್ ಸಂಪರ್ಕ ವ್ಯವಸ್ಥೆ ಇಲ್ಲದೆ ಸಮಸ್ಯೆಗಳ ಮಧ್ಯೆ ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ಇರುವಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>