<p><strong>ಪಾವಗಡ:</strong> ತಾಲ್ಲೂಕಿನ ಅರಸೀಕೆರೆ ಮಾರ್ಗದಿಂದ ಪಟ್ಟಣದ ಶಾಲಾ, ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಕೆಎಸ್ಆರ್ಟಿಸಿ ಘಟಕ ನಿರೀಕ್ಷಕ ಶಿವಲಿಂಗಪ್ಪ ಅವರಿಗೆ ಸೋಮವಾರ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.</p>.<p>ಶಾಲಾ, ಕಾಲೇಜಿಗೆ ಹೋಗುವ ಸಮಯಕ್ಕೆ ಅರಸೀಕೆರೆ ಮಾರ್ಗದಲ್ಲಿ ಬಸ್ ಸೌಕರ್ಯ ಇಲ್ಲದೆ ಸಮಸ್ಯೆಯಾಗುತ್ತಿದೆ. ಈಗಾಗಲೆ ಶಾಲಾ ಕಾಲೇಜು ಆರಂಭವಾಗಿವೆ. ಶಿರಾ ಡಿಪೋದಿಂದ ಬೆಳಗ್ಗೆ 8ಕ್ಕೆ ಅರಸೀಕೆರೆಗೆ ಸರ್ಕಾರಿ ಬಸ್ ಬರುತ್ತಿತ್ತು. ಆದರೆ ಆ ಬಸ್ಸನ್ನು ಸಹ ನಿಲ್ಲಿಸಲಾಗಿದೆ. ಸಮಯಕ್ಕೆ ಸರಿಯಾಗಿ ತರಗತಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಶಿಕ್ಷಣ ಇಲಾಖೆ ಹಾಜರಾತಿ ಕಡ್ಡಾಯಗೊಳಿಸಿದೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆರೋಪಿಸಿದರು.</p>.<p>ಕೂಡಲೆ ಬಸ್ ಸೌಕರ್ಯ ಕಲ್ಪಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.</p>.<p>ವೆಂಕಟೇಶ್, ಅನಿಲ್ ಮಹಾದೇವ್, ಸಾಗರ್, ಸೋಮಶೇಖರ್, ರಾಜೇಶ್, ವಿರುಪಾಕ್ಷ, ಧನುಶ್, ಚಿರಂಜೀವಿ, ಅಭಿಲಾಷ್, ದರ್ಶನ್, ಆರ್.ಸಾಗರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ತಾಲ್ಲೂಕಿನ ಅರಸೀಕೆರೆ ಮಾರ್ಗದಿಂದ ಪಟ್ಟಣದ ಶಾಲಾ, ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಕೆಎಸ್ಆರ್ಟಿಸಿ ಘಟಕ ನಿರೀಕ್ಷಕ ಶಿವಲಿಂಗಪ್ಪ ಅವರಿಗೆ ಸೋಮವಾರ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.</p>.<p>ಶಾಲಾ, ಕಾಲೇಜಿಗೆ ಹೋಗುವ ಸಮಯಕ್ಕೆ ಅರಸೀಕೆರೆ ಮಾರ್ಗದಲ್ಲಿ ಬಸ್ ಸೌಕರ್ಯ ಇಲ್ಲದೆ ಸಮಸ್ಯೆಯಾಗುತ್ತಿದೆ. ಈಗಾಗಲೆ ಶಾಲಾ ಕಾಲೇಜು ಆರಂಭವಾಗಿವೆ. ಶಿರಾ ಡಿಪೋದಿಂದ ಬೆಳಗ್ಗೆ 8ಕ್ಕೆ ಅರಸೀಕೆರೆಗೆ ಸರ್ಕಾರಿ ಬಸ್ ಬರುತ್ತಿತ್ತು. ಆದರೆ ಆ ಬಸ್ಸನ್ನು ಸಹ ನಿಲ್ಲಿಸಲಾಗಿದೆ. ಸಮಯಕ್ಕೆ ಸರಿಯಾಗಿ ತರಗತಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಶಿಕ್ಷಣ ಇಲಾಖೆ ಹಾಜರಾತಿ ಕಡ್ಡಾಯಗೊಳಿಸಿದೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆರೋಪಿಸಿದರು.</p>.<p>ಕೂಡಲೆ ಬಸ್ ಸೌಕರ್ಯ ಕಲ್ಪಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.</p>.<p>ವೆಂಕಟೇಶ್, ಅನಿಲ್ ಮಹಾದೇವ್, ಸಾಗರ್, ಸೋಮಶೇಖರ್, ರಾಜೇಶ್, ವಿರುಪಾಕ್ಷ, ಧನುಶ್, ಚಿರಂಜೀವಿ, ಅಭಿಲಾಷ್, ದರ್ಶನ್, ಆರ್.ಸಾಗರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>