<p><strong>ತುಮಕೂರು:</strong> ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಶನಿವಾರ ತರಗತಿ ಬಹಿಷ್ಕರಿಸಿದರು. ಎಐಡಿಎಸ್ಒ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಸ್ವಯಂ ಪ್ರೇರಿತರಾಗಿ ತರಗತಿಯಿಂದ ದೂರ ಉಳಿದರು. ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಖಾಸಗಿ ಕಾಲೇಜುಗಳಲ್ಲಿ ತರಗತಿ ಪೂರ್ಣಗೊಳಿಸಿ ಸೆಮಿಸ್ಟರ್ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರಿ ಕಾಲೇಜುಗಳಲ್ಲಿ ಕನಿಷ್ಠ ಉಪನ್ಯಾಸಕರ ನೇಮಕವಾಗಿಲ್ಲ. ವಿದ್ಯಾರ್ಥಿಗಳು 30ರಿಂದ 40 ಕಿ.ಮೀ ಪ್ರಯಾಣಿಸಿ ಕಾಲೇಜಿಗೆ ಬರುತ್ತಿದ್ದಾರೆ. ತರಗತಿಗಳು ನಡೆಯದೆ ಮನೆಗೆ ಮರಳುತ್ತಿದ್ದಾರೆ’ ಎಂದು ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಸಿ.ಬಿ.ಲಕ್ಕಪ್ಪ ಹೇಳಿದರು.</p>.<p>ಸರ್ಕಾರ, ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ಒಂದೂ ತರಗತಿ ನಡೆಯದಿದ್ದರೂ ವಿ.ವಿಗಳು ಸೆಮಿಸ್ಟರ್ ಪರೀಕ್ಷೆ ವೇಳಾಪಟ್ಟಿ, ಶುಲ್ಕ ಪಾವತಿಯ ಸುತ್ತೋಲೆ ಹೊರಡಿಸಿರುವುದು ಖಂಡನೀಯ. ತರಗತಿ ನಡೆಸದೆ ಪರೀಕ್ಷೆ ಮಾಡಬಾರದು ಎಂದು ಆಗ್ರಹಿಸಿದರು.</p>.<p>ಎಐಡಿಎಸ್ಒ ಸದಸ್ಯರಾದ ಭರತ್, ವೃಷಭ, ಸೈಯದ್, ಪುನೀತ್, ರೋಜಾ ಮತ್ತು ರಕ್ಷಿತಾ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಶನಿವಾರ ತರಗತಿ ಬಹಿಷ್ಕರಿಸಿದರು. ಎಐಡಿಎಸ್ಒ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಸ್ವಯಂ ಪ್ರೇರಿತರಾಗಿ ತರಗತಿಯಿಂದ ದೂರ ಉಳಿದರು. ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಖಾಸಗಿ ಕಾಲೇಜುಗಳಲ್ಲಿ ತರಗತಿ ಪೂರ್ಣಗೊಳಿಸಿ ಸೆಮಿಸ್ಟರ್ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರಿ ಕಾಲೇಜುಗಳಲ್ಲಿ ಕನಿಷ್ಠ ಉಪನ್ಯಾಸಕರ ನೇಮಕವಾಗಿಲ್ಲ. ವಿದ್ಯಾರ್ಥಿಗಳು 30ರಿಂದ 40 ಕಿ.ಮೀ ಪ್ರಯಾಣಿಸಿ ಕಾಲೇಜಿಗೆ ಬರುತ್ತಿದ್ದಾರೆ. ತರಗತಿಗಳು ನಡೆಯದೆ ಮನೆಗೆ ಮರಳುತ್ತಿದ್ದಾರೆ’ ಎಂದು ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಸಿ.ಬಿ.ಲಕ್ಕಪ್ಪ ಹೇಳಿದರು.</p>.<p>ಸರ್ಕಾರ, ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ಒಂದೂ ತರಗತಿ ನಡೆಯದಿದ್ದರೂ ವಿ.ವಿಗಳು ಸೆಮಿಸ್ಟರ್ ಪರೀಕ್ಷೆ ವೇಳಾಪಟ್ಟಿ, ಶುಲ್ಕ ಪಾವತಿಯ ಸುತ್ತೋಲೆ ಹೊರಡಿಸಿರುವುದು ಖಂಡನೀಯ. ತರಗತಿ ನಡೆಸದೆ ಪರೀಕ್ಷೆ ಮಾಡಬಾರದು ಎಂದು ಆಗ್ರಹಿಸಿದರು.</p>.<p>ಎಐಡಿಎಸ್ಒ ಸದಸ್ಯರಾದ ಭರತ್, ವೃಷಭ, ಸೈಯದ್, ಪುನೀತ್, ರೋಜಾ ಮತ್ತು ರಕ್ಷಿತಾ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>