<p><strong>ಹುಳಿಯಾರು:</strong> ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ನಡೆಯುತ್ತಿದ್ದ ಕಾಂಪೌಂಡ್ ಕಾಮಗಾರಿ ಕಳಪೆಯಾಗಿ ಎಂದು ತಹಶೀಲ್ದಾರ್ ಎಂ. ಮಮತಾ ಅಧಿಕಾರಿಗಳನ್ನು ಗುರವಾರ ತರಾಟೆಗೆ ತೆಗೆದುಕೊಂಡರು.</p>.<p>ಪಟ್ಟಣದ ಸಂತೆ ಜಾಗ ಸ್ಥಳಾಂತರದ ಪರಿಶೀಲನೆಗೆ ಪಟ್ಟಣ ಪಂಚಾಯಿತಿಗೆ ಬಂದಿದ್ದರು. ಅಲ್ಲಿಯೇ ನಡೆಯುತ್ತಿದ್ದ ಕಾಂಪೌಂಡ್ ನಿರ್ಮಾಣ ಕಾಮಗಾರಿ ವೀಕ್ಷಿಸಿದರು. ತಳಹದಿ ನಿರ್ಮಿಸದೆ ಕೇವಲ ಸೀಮೆಂಟ್ ಇಟ್ಟಿಗೆಗಳನ್ನು ಜೋಡಿಸಿ ಕಾಂಪೌಂಡ್ ನಿರ್ಮಿಸುತ್ತಿರುವುದನ್ನು ಗಮನಿಸಿದ ಅವರು, ಕಾಮಗಾರಿ ಬಗ್ಗೆ ಮೇಸ್ತ್ರಿಯಿಂದ ತಕ್ಷಣ ಸ್ಪಷ್ಟನೆ ಪಡೆದರು.</p>.<p>ಕಾಮಗಾರಿ ಮೇಲ್ವಿಚಾರಣೆ ಹೊಣೆ ಹೊತ್ತಿದ್ದ ಮುಖ್ಯಾಧಿಕಾರಿ ಮಂಜುನಾಥ್ ಅವರನ್ನು ಪ್ರಶ್ನಿಸಿದ ತಹಶೀಲ್ದಾರ್, ‘ಇಂತಹ ಕಳಪೆ ಕಾಮಗಾರಿಯಿಂದ ಸರ್ಕಾರದ ಹಣ ದುರುಪಯೋಗವಾಗುತ್ತದೆ. ತಳಹದಿ ಇಲ್ಲದೆ ನಿರ್ಮಿಸಿದ ಕಾಂಪೌಂಡ್ ಕುಸಿದರೆ ಜೀವಹಾನಿಗೆ ಯಾರು ಹೊಣೆ?’ ಎಂದು ಪ್ರಶ್ನಿಸಿದರು.</p>.<p>ಪಟ್ಟಣ ಪಂಚಾಯಿತಿಯಲ್ಲಿಯೇ ಎಂಜಿನಿಯರ್ ಇಂತಹ ಗಂಭೀರ ಲೋಪಕ್ಕೆ ಅವಕಾಶ ನೀಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಸ್ಥಳಕ್ಕೆ ಬಂದ ಪಟ್ಟಣ ಪಂಚಾಯಿತಿ ಅಧ್ಯಕ್ಷರನ್ನು ಪ್ರಶ್ನಿಸಿದರು.</p>.<p>ಮುಖ್ಯಾಧಿಕಾರಿ ಮಂಜುನಾಥ್ ಮಾತನಾಡಿ, ನನಗೆ ತಾಂತ್ರಿಕ ಮಾಹಿತಿಯ ಅರಿವು ಇಲ್ಲ. ಎಂಜಿನಿಯರ್ಗೆ ಗಮನಹರಿಸುವಂತೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.</p>.<p>‘ಕಾಂಪೌಂಡ್ ಕುಸಿದು ಯಾವುದೇ ಅನಾಹುತ ಸಂಭವಿಸಿದರೆ ನೇರವಾಗಿ ನಿಮ್ಮ ಮೇಲೆಯೇ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಾಧಿಕಾರಿಗೆ ತಹಶೀಲ್ದಾರ್ ಎಚ್ಚರಿಕೆ ನೀಡಿದರು.</p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ, ಈಗಾಗಲೇ ನಿರ್ಮಿಸಿದ್ದ ಕಾಂಪೌಂಡ್ ಕೆಡವಿ, ನಿಯಮಾನುಸಾರ ತಳಹದಿ ಸಹಿತ ಪುನರ್ ನಿರ್ಮಾಣಕ್ಕೆ ಮುಂದಾಗಿದ್ದಾರೆ.</p>.<p>ಮುಖ್ಯಾಧಿಕಾರಿ ಮಂಜುನಾಥ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಪ್ರೀತಿ, ಮಾಜಿ ಸದಸ್ಯ ರಾಘವೇಂದ್ರ, ರೈತ ಸಂಘದ ಅಧ್ಯಕ್ಷ ಚಂದ್ರಪ್ಪ, ಶಂಕರೇಶ್, ಆರ್ಐ ಶ್ರೀನಿವಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಳಿಯಾರು:</strong> ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ನಡೆಯುತ್ತಿದ್ದ ಕಾಂಪೌಂಡ್ ಕಾಮಗಾರಿ ಕಳಪೆಯಾಗಿ ಎಂದು ತಹಶೀಲ್ದಾರ್ ಎಂ. ಮಮತಾ ಅಧಿಕಾರಿಗಳನ್ನು ಗುರವಾರ ತರಾಟೆಗೆ ತೆಗೆದುಕೊಂಡರು.</p>.<p>ಪಟ್ಟಣದ ಸಂತೆ ಜಾಗ ಸ್ಥಳಾಂತರದ ಪರಿಶೀಲನೆಗೆ ಪಟ್ಟಣ ಪಂಚಾಯಿತಿಗೆ ಬಂದಿದ್ದರು. ಅಲ್ಲಿಯೇ ನಡೆಯುತ್ತಿದ್ದ ಕಾಂಪೌಂಡ್ ನಿರ್ಮಾಣ ಕಾಮಗಾರಿ ವೀಕ್ಷಿಸಿದರು. ತಳಹದಿ ನಿರ್ಮಿಸದೆ ಕೇವಲ ಸೀಮೆಂಟ್ ಇಟ್ಟಿಗೆಗಳನ್ನು ಜೋಡಿಸಿ ಕಾಂಪೌಂಡ್ ನಿರ್ಮಿಸುತ್ತಿರುವುದನ್ನು ಗಮನಿಸಿದ ಅವರು, ಕಾಮಗಾರಿ ಬಗ್ಗೆ ಮೇಸ್ತ್ರಿಯಿಂದ ತಕ್ಷಣ ಸ್ಪಷ್ಟನೆ ಪಡೆದರು.</p>.<p>ಕಾಮಗಾರಿ ಮೇಲ್ವಿಚಾರಣೆ ಹೊಣೆ ಹೊತ್ತಿದ್ದ ಮುಖ್ಯಾಧಿಕಾರಿ ಮಂಜುನಾಥ್ ಅವರನ್ನು ಪ್ರಶ್ನಿಸಿದ ತಹಶೀಲ್ದಾರ್, ‘ಇಂತಹ ಕಳಪೆ ಕಾಮಗಾರಿಯಿಂದ ಸರ್ಕಾರದ ಹಣ ದುರುಪಯೋಗವಾಗುತ್ತದೆ. ತಳಹದಿ ಇಲ್ಲದೆ ನಿರ್ಮಿಸಿದ ಕಾಂಪೌಂಡ್ ಕುಸಿದರೆ ಜೀವಹಾನಿಗೆ ಯಾರು ಹೊಣೆ?’ ಎಂದು ಪ್ರಶ್ನಿಸಿದರು.</p>.<p>ಪಟ್ಟಣ ಪಂಚಾಯಿತಿಯಲ್ಲಿಯೇ ಎಂಜಿನಿಯರ್ ಇಂತಹ ಗಂಭೀರ ಲೋಪಕ್ಕೆ ಅವಕಾಶ ನೀಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಸ್ಥಳಕ್ಕೆ ಬಂದ ಪಟ್ಟಣ ಪಂಚಾಯಿತಿ ಅಧ್ಯಕ್ಷರನ್ನು ಪ್ರಶ್ನಿಸಿದರು.</p>.<p>ಮುಖ್ಯಾಧಿಕಾರಿ ಮಂಜುನಾಥ್ ಮಾತನಾಡಿ, ನನಗೆ ತಾಂತ್ರಿಕ ಮಾಹಿತಿಯ ಅರಿವು ಇಲ್ಲ. ಎಂಜಿನಿಯರ್ಗೆ ಗಮನಹರಿಸುವಂತೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.</p>.<p>‘ಕಾಂಪೌಂಡ್ ಕುಸಿದು ಯಾವುದೇ ಅನಾಹುತ ಸಂಭವಿಸಿದರೆ ನೇರವಾಗಿ ನಿಮ್ಮ ಮೇಲೆಯೇ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಾಧಿಕಾರಿಗೆ ತಹಶೀಲ್ದಾರ್ ಎಚ್ಚರಿಕೆ ನೀಡಿದರು.</p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ, ಈಗಾಗಲೇ ನಿರ್ಮಿಸಿದ್ದ ಕಾಂಪೌಂಡ್ ಕೆಡವಿ, ನಿಯಮಾನುಸಾರ ತಳಹದಿ ಸಹಿತ ಪುನರ್ ನಿರ್ಮಾಣಕ್ಕೆ ಮುಂದಾಗಿದ್ದಾರೆ.</p>.<p>ಮುಖ್ಯಾಧಿಕಾರಿ ಮಂಜುನಾಥ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಪ್ರೀತಿ, ಮಾಜಿ ಸದಸ್ಯ ರಾಘವೇಂದ್ರ, ರೈತ ಸಂಘದ ಅಧ್ಯಕ್ಷ ಚಂದ್ರಪ್ಪ, ಶಂಕರೇಶ್, ಆರ್ಐ ಶ್ರೀನಿವಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>