ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವಿನ ಅನುಭವಕ್ಕಾಗಿ ಆತ್ಮಹತ್ಯೆ

Last Updated 7 ಜೂನ್ 2020, 16:53 IST
ಅಕ್ಷರ ಗಾತ್ರ

ಕೊರಟಗೆರೆ: ತಾಲ್ಲೂಕಿನ ಗೌರಗಾನಹಳ್ಳಿ ಗ್ರಾಮದ ಧನಂಜಯ್ (26) ಸಾವಿನ ಅನುಭವ ಪಡೆಯಬೇಕು ಎಂದು ಭಾನುವಾರ ‘ಟಿಕ್‌ಟಾಕ್‌’ ವಿಡಿಯೊ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಷ ಸೇವನೆಗೂ ಮುನ್ನ ಧನಂಜಯ್, ‘ಜೀವನದಲ್ಲಿ ಒಂದು ಸಲ ಸಾಯಬೇಕು. ಅದು ಹೇಗಿರುತ್ತದೆ ಎಂಬ ಅನುಭವ ಪಡೆಯಬೇಕು. ನಾನು ಸಾಯುವುದಕ್ಕೆ ಪ್ರಯತ್ನ ಪಡುತ್ತಿದ್ದೇನೆ. ಅದನ್ನು ನೀವೆಲ್ಲ ನೋಡಬೇಕು’ ಎಂದು ಟಿಕ್‌ಟಾಕ್‌ನಲ್ಲಿ ವಿಡಿಯೊನಲ್ಲಿ ಹೇಳಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕ್ರಿಮಿನಾಶಕ ಸೇವಿಸಿದ ನಂತರ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಧನಂಜಯ್‌ಗೆ 4 ತಿಂಗಳ ಹಿಂದೆ ವಿವಾಹವಾಗಿತ್ತು. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT