ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ನಾಳಿನ ಬಂದ್‌ಗೆ ವಿವಿಧ ಸಂಘಟನೆಗಳ ಬೆಂಬಲ

ಜಿಲ್ಲೆಯಲ್ಲಿ ಧಾನ್ಯ ವ್ಯಾಪಾರಿಗಳು, ಖಾಸಗಿ ಬಸ್ ಮಾಲೀಕರು, ಹೋಟೆಲ್ ಮಾಲೀಕರ ಬೆಂಬಲ
Last Updated 27 ಸೆಪ್ಟೆಂಬರ್ 2020, 16:25 IST
ಅಕ್ಷರ ಗಾತ್ರ

ತುಮಕೂರು: ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಸೋಮವಾರ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಕರೆ ನೀಡಿರುವ ಬಂದ್‌ಗೆ ಜಿಲ್ಲೆಯಲ್ಲಿ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಜಿಲ್ಲೆಯಲ್ಲಿ ಧಾನ್ಯ ವ್ಯಾಪಾರಿಗಳು, ಖಾಸಗಿ ಬಸ್ ಮಾಲೀಕರು, ಹೋಟೆಲ್ ಮಾಲೀಕರು, ವಿದ್ಯಾರ್ಥಿ-ಯುವಜನ-ಮಹಿಳಾ ಸಂಘಟನೆಗಳು ಬೆಂಬಲ ನೀಡಿವೆ. ಎಸ್‍ಎಫ್‍ಐ, ಡಿವೈಎಫ್‍ಐ, ಎಐಡಿಎಸ್‍ಒ, ಎಐಎಂಎಸ್‍ಎಸ್, ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ, ದಲಿತ ಸಂಘರ್ಷ ಸಮಿತಿ (ಎನ್.ಮೂರ್ತಿ ಬಣ), ಕನ್ನಡ ಸಂಘಟನೆಗಳು, ಪ್ರಗತಿಪರ ಸಂಘಟನೆಗಳ ಒಕ್ಕೂಟ, ಪಿಯುಸಿಎಲ್, ಸಿಐಟಿಯು, ಎಐಟಿಯುಸಿ, ಎಐಟಿಯುಟಿಯುಸಿ, ಕಾರ್ಮಿಕ ಸಂಘಟನೆಗಳು, ಸಿಪಿಎಂ, ಜೆಡಿಯು ಬಂದ್‌ನಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿವೆ.

ಬಂದ್‌ಗೆ ಸಂಬಂಧಿಸಿದಂತೆ ನಗರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ರಾಜ್ಯ ರೈತ ಸಂಘದ ಅಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, ಬಂದ್‌ಗೆ ಉತ್ತಮ ಬೆಂಬಲ ವ್ಯಕ್ತವಾಗುವ ಲಕ್ಷಣಗಳು ಇವೆ ಎಂದರು.

ಬೆಳಿಗ್ಗೆ 7.30ಕ್ಕೆ ವಿವಿಧ ಸಂಘಟನೆಗಳ ಕಾರ್ಯಕರ್ತರು ನಗರದ ಟೌನ್‌ಹಾಲ್‌ನಲ್ಲಿ ಸಮಾವೇಶಗೊಳ್ಳುವರು. ಅಲ್ಲಿಂದ ಬೈಕ್ ರ‍್ಯಾಲಿ, ಪ್ರತಿಭಟನಾ ಸಭೆ ನಡೆಸಲಾಗುವುದು ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಕಾರ್ಯದರ್ಶಿ ಬಿ.ಉಮೇಶ್ ತಿಳಿಸಿದರು.

ರೈತ ಸಂಘ (ಕೋಡಿಹಳ್ಳಿ ಚಂದ್ರಶೇಖರ್ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಆನಂದ ಪಟೇಲ್, ಪ್ರಾಂತ ರೈತ ಸಂಘದ ಸಂಚಾಲಕ ಸಿ.ಅಜ್ಜಪ್ಪ, ಸಿ.ಯತಿರಾಜು, ಅರುಣ್‍ಕುಮಾರ್, ಗಿರೀಶ್, ಎಸ್.ಎನ್.ಸ್ವಾಮಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT