ಜಿಲ್ಲೆಯಲ್ಲಿ ಧಾನ್ಯ ವ್ಯಾಪಾರಿಗಳು, ಖಾಸಗಿ ಬಸ್ ಮಾಲೀಕರು, ಹೋಟೆಲ್ ಮಾಲೀಕರು, ವಿದ್ಯಾರ್ಥಿ-ಯುವಜನ-ಮಹಿಳಾ ಸಂಘಟನೆಗಳು ಬೆಂಬಲ ನೀಡಿವೆ. ಎಸ್ಎಫ್ಐ, ಡಿವೈಎಫ್ಐ, ಎಐಡಿಎಸ್ಒ, ಎಐಎಂಎಸ್ಎಸ್, ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ, ದಲಿತ ಸಂಘರ್ಷ ಸಮಿತಿ (ಎನ್.ಮೂರ್ತಿ ಬಣ), ಕನ್ನಡ ಸಂಘಟನೆಗಳು, ಪ್ರಗತಿಪರ ಸಂಘಟನೆಗಳ ಒಕ್ಕೂಟ, ಪಿಯುಸಿಎಲ್, ಸಿಐಟಿಯು, ಎಐಟಿಯುಸಿ, ಎಐಟಿಯುಟಿಯುಸಿ, ಕಾರ್ಮಿಕ ಸಂಘಟನೆಗಳು, ಸಿಪಿಎಂ, ಜೆಡಿಯು ಬಂದ್ನಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿವೆ.