ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ: ಸರ್ಕಾರದ ಜನಪರ ಯೋಜನೆಗಳ ಬೆಂಬಲಿಸಿ: ಶೋಭಾ ಕರಂದ್ಲಾಜೆ ಮನವಿ

Last Updated 21 ಅಕ್ಟೋಬರ್ 2020, 5:37 IST
ಅಕ್ಷರ ಗಾತ್ರ

ಶಿರಾ: ಕೇಂದ್ರ ಮತ್ತು ರಾಜ್ಯ ಸರ್ಕಾರ ಕೈಗೊಂಡಿರುವ ಜನಪರ ಯೋಜನೆಗಳನ್ನು ಬೆಂಬಲಿಸಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ ಅವರನ್ನು ಗೆಲ್ಲಿಸುವಂತೆ ಸಂಸದೆ ಶೋಭಾ ಕರಂದ್ಲಾಜೆ ಮನವಿ ಮಾಡಿದರು.

ತಾಲ್ಲೂಕಿನ ಹುಲಿಕುಂಟೆ ಹೋಬಳಿಯ ದ್ವಾರನಕುಂಟೆ ಗ್ರಾಮದಲ್ಲಿ ಮಂಗಳವಾರ ರಾಜೇಶ್ ಗೌಡ ಪರ ಮತಯಾಚಿಸಿದರು.

‘ಬಿಜೆಪಿ‌ ದಲಿತರು, ರೈತರು, ಬಡವರು ಹಾಗೂ ಶೋಷಿತರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೂಪಿಸಿದೆ. ಬೈಸಿಕಲ್, ಉಜ್ವಲ ಗ್ಯಾಸ್, ಬಾಣಂತಿಯರಿಗೆ ₹ 5 ಸಾವಿರ, ಕೊರೊನಾ ‌ಸಮಯದಲ್ಲಿ ಉಚಿತ ಅಕ್ಕಿ, ಗೋದಿ ವಿತರಣೆ ಸೇರಿದಂತೆ ಆರ್ಹ ಫಲಾನಿಭವಿಗಳಿಗೆ ಪ್ರಾಮಾಣಿಕವಾಗಿ ಸೌಲಭ್ಯ ಕಲ್ಪಿಸಿದೆ’ ಎಂದರು.

ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಎಪಿಎಂಸಿ ನಿರ್ದೇಶಕಿ ಲಲಿತಮ್ಮ, ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪದ್ಮಾ, ಜಯಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT