ಕುಣಿಗಲ್: ರಾಜ್ಯ ಒಕ್ಕಲಿಗರ ಸಂಘ ಅವ್ಯವಸ್ಥೆಯಿಂದ ಕೂಡಿದ್ದು, ವ್ಯವಸ್ಥಿತ ನಿರ್ವಹಣೆಗಾಗಿ ಕಾಯಕಲ್ಪ ನೀಡಬೇಕಿದೆ ಎಂದು ಮಾಜಿ ಸಚಿವ ಡಿ. ನಾಗರಾಜಯ್ಯಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ತುಮಕೂರು ಜಿಲ್ಲೆಯಿಂದ ಇಬ್ಬರು ನಿರ್ದೇಶಕರು ಆಯ್ಕೆಯಾಗಬೇಕಿದೆ. ಡಿ. 12ರಂದು ನಡೆಯುವ ಚುನಾವಣೆಗೆ ಇದೇ 15ರಿಂದ 23ರ ವರೆಗೆ ನಾಮಪತ್ರ ಸಲ್ಲಿಸಬೇಕಿದೆ ಎಂದರು.
ಪ್ರಸಕ್ತ ಸಾಲಿನ ಚುನಾವಣೆಗೆ ತಮ್ಮ ಪುತ್ರ ಬಿ.ಎನ್. ಲೋಕೇಶ್ ಸ್ಪರ್ಧಿಸುತ್ತಿದ್ದಾರೆ. ಅವರಿಗೆ ಮತ ನೀಡಬೇಕು. ಜಿಲ್ಲೆಯಲ್ಲಿ 33 ಸಾವಿರ ಮತದಾರರಿದ್ದಾರೆ. ಈ ಪೈಕಿ ಕುಣಿಗಲ್ ತಾಲ್ಲೂಕಿನಲ್ಲಿ 11 ಸಾವಿರ ಮತದಾರರಿದ್ದಾರೆ ಎಂದುತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅಭ್ಯರ್ಥಿ ಬಿ.ಎನ್. ಲೋಕೇಶ್, ಪುರಸಭೆ ಮಾಜಿ ಅಧ್ಯಕ್ಷ ಕೆ.ಎಲ್. ಹರೀಶ್ಹಾಜರಿದ್ದರು.