<p><strong>ತಿಪಟೂರು: </strong>ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ಅಕ್ಟೋಬರ್ 31ಕ್ಕೆ ನಿಗದಿಯಾಗಿದೆ. ಆದರೆ, ಚುನಾವಣೆ ನಡೆಸಿದರೂ, ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.</p>.<p>ರಾಜ್ಯದ ಹಲವು ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ಸಂಬಂಧಿಸಿದ ಪ್ರಕರಣ ಹೈಕೋರ್ಟ್ನಲ್ಲಿವೆ. ಹೈಕೋರ್ಟ್ನಲ್ಲಿ ತಕರಾರು ಅರ್ಜಿ ಸಲ್ಲಿಸಿರುವ ಪುರಸಭೆ, ನಗರಸಭೆ ಹೊರತುಪಡಿಸಿ ಉಳಿದೆಡೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶಿಸಿತ್ತು.</p>.<p>ಹೈಕೋರ್ಟ್ನಲ್ಲಿ ಮೀಸಲಾತಿ ಪ್ರಕರಣ ಬಾಕಿ ಇರುವುದರಿಂದ ಚುನಾವಣೆಯ ಫಲಿತಾಂಶ ಕಾಯ್ದಿರಿಸುವಂತೆ ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ಸಲ್ಲಿಸಲಾಗಿತ್ತು.</p>.<p>ಹಾಗಾಗಿ ಚುನಾವಣೆ ನಡೆಸಿದರೂ ಫಲಿತಾಂಶವನ್ನು ಒಂದು ತಿಂಗಳವರಗೆ ಕಾಯ್ದಿರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅಲ್ಲದೇ ತಿಂಗಳ ಒಳಗಾಗಿ ಈ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ಇರುವ ಎಲ್ಲ ಪ್ರಕರಣಗಳನ್ನು ವಿಚಾರಣೆ ನಡೆಸಿ ತೀರ್ಪು ನೀಡುವಂತೆ ಆದೇಶಿಸಿದೆ.</p>.<p>ಸುಪ್ರೀಂ ಕೋರ್ಟ್ನ ಈ ಆದೇಶದಿಂದಾಗಿ ನಗರಸಭಾ ಸದಸ್ಯರ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಹೆಚ್ಚಿನ ಮತ ಪಡೆದರೂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕಾಗಿ ಒಂದು ತಿಂಗಳು ಕಾಯುವುದು ಆಕಾಂಕ್ಷಿಗಳಿಗೆ ಅನಿವಾರ್ಯವಾಗಿದೆ.</p>.<p>ಸದಸ್ಯರ ಪ್ರವಾಸ: ನಗರಸಭೆಯ ಚುನಾವಣೆ ಇದೇ 31 ಕ್ಕೆ ನಿಗದಿಯಾಗಿದ್ದು, ಬಿಜೆಪಿಯ 11, ಲೋಕೇಶ್ವರ ಬೆಂಬಲಿತ ಐವರು (ಜೆಡಿಎಸ್ನಿಂದ ಗೆದ್ದಿರುವವರು) ಮತ್ತು ಮೂವರು ಪಕ್ಷೇತರ ಅಭ್ಯರ್ಥಿಗಳು ಸೇರಿ ಒಟ್ಟು 19 ಸದಸ್ಯರು ಪ್ರವಾಸ ತೆರಳಿದ್ದಾರೆ. ಇದರಿಂದಾಗಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು: </strong>ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ಅಕ್ಟೋಬರ್ 31ಕ್ಕೆ ನಿಗದಿಯಾಗಿದೆ. ಆದರೆ, ಚುನಾವಣೆ ನಡೆಸಿದರೂ, ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.</p>.<p>ರಾಜ್ಯದ ಹಲವು ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ಸಂಬಂಧಿಸಿದ ಪ್ರಕರಣ ಹೈಕೋರ್ಟ್ನಲ್ಲಿವೆ. ಹೈಕೋರ್ಟ್ನಲ್ಲಿ ತಕರಾರು ಅರ್ಜಿ ಸಲ್ಲಿಸಿರುವ ಪುರಸಭೆ, ನಗರಸಭೆ ಹೊರತುಪಡಿಸಿ ಉಳಿದೆಡೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶಿಸಿತ್ತು.</p>.<p>ಹೈಕೋರ್ಟ್ನಲ್ಲಿ ಮೀಸಲಾತಿ ಪ್ರಕರಣ ಬಾಕಿ ಇರುವುದರಿಂದ ಚುನಾವಣೆಯ ಫಲಿತಾಂಶ ಕಾಯ್ದಿರಿಸುವಂತೆ ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ಸಲ್ಲಿಸಲಾಗಿತ್ತು.</p>.<p>ಹಾಗಾಗಿ ಚುನಾವಣೆ ನಡೆಸಿದರೂ ಫಲಿತಾಂಶವನ್ನು ಒಂದು ತಿಂಗಳವರಗೆ ಕಾಯ್ದಿರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅಲ್ಲದೇ ತಿಂಗಳ ಒಳಗಾಗಿ ಈ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ಇರುವ ಎಲ್ಲ ಪ್ರಕರಣಗಳನ್ನು ವಿಚಾರಣೆ ನಡೆಸಿ ತೀರ್ಪು ನೀಡುವಂತೆ ಆದೇಶಿಸಿದೆ.</p>.<p>ಸುಪ್ರೀಂ ಕೋರ್ಟ್ನ ಈ ಆದೇಶದಿಂದಾಗಿ ನಗರಸಭಾ ಸದಸ್ಯರ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಹೆಚ್ಚಿನ ಮತ ಪಡೆದರೂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕಾಗಿ ಒಂದು ತಿಂಗಳು ಕಾಯುವುದು ಆಕಾಂಕ್ಷಿಗಳಿಗೆ ಅನಿವಾರ್ಯವಾಗಿದೆ.</p>.<p>ಸದಸ್ಯರ ಪ್ರವಾಸ: ನಗರಸಭೆಯ ಚುನಾವಣೆ ಇದೇ 31 ಕ್ಕೆ ನಿಗದಿಯಾಗಿದ್ದು, ಬಿಜೆಪಿಯ 11, ಲೋಕೇಶ್ವರ ಬೆಂಬಲಿತ ಐವರು (ಜೆಡಿಎಸ್ನಿಂದ ಗೆದ್ದಿರುವವರು) ಮತ್ತು ಮೂವರು ಪಕ್ಷೇತರ ಅಭ್ಯರ್ಥಿಗಳು ಸೇರಿ ಒಟ್ಟು 19 ಸದಸ್ಯರು ಪ್ರವಾಸ ತೆರಳಿದ್ದಾರೆ. ಇದರಿಂದಾಗಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>