<p><strong>ತುಮಕೂರು: ‘</strong>ಜೆಡಿಎಸ್ನವರ ವಿರುದ್ಧ ದೊಣ್ಣೆ ಹಿಡಿದು ನಿಂತು ಎಲೆಕ್ಷನ್ ಮಾಡಿ. ಶಾಸಕ ಗೌರಿಶಂಕರ್ ಬಂದರೆ ನೀರು ಬಿಡಿಸದೇ ಇರೋ ಕಳ್ಳ ಕಳ್ಳ ಎಂದು ಕೂಗಿ’ ಎಂದು ಮಾಜಿ ಶಾಸಕ ಬಿ.ಸುರೇಶ್ ಗೌಡ ಅವರು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.</p>.<p>ತಾಲ್ಲೂಕಿನ ಹೊನಸಿಗೆರೆಯಲ್ಲಿ ಈಚೆಗೆ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರ ಮಾತಿನ ವಿಡಿಯೊ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<p>‘ಶಾಸಕ ಗೌರಿಶಂಕರನೇನೂ ದೊಡ್ಡ ಮನುಷ್ಯ ಅಲ್ಲ. ಅವರಪ್ಪ ಪೊಲೀಸ್ ಆಗಿದ್ದವನು. ಅವನೂ ಶ್ರೀಮಂತ ಅಲ್ಲ. ನಮ್ಮ ದುಡ್ಡೇ ಹೊಡೆದು ನಮ್ಗೆ ಹಂಚ್ತಾನೆ. ಗಣಿ ಪ್ರಕರಣಗಳಲ್ಲಿ ಕೋಟಿ ಕೋಟಿ ಲೂಟಿ ಹೊಡೆದಿದ್ದಾನೆ’ ಎಂದು ಆರೋಪಿಸಿದರು.</p>.<p>‘ಅವನು ಹಣ ಕೊಟ್ಟರೆ ಚೆನ್ನಾಗಿ ಇಸ್ಕೊಳ್ಳಿ. ಚೆನ್ನಾಗಿ ತಿನ್ನಿ, ವೋಟ್ ಮಾತ್ರ ಬಿಜೆಪಿಗೆ ಹಾಕಿಸಬೇಕು. ಏನು ಬರುತ್ತೋ ಬರಲಿ. ಕುರುಕ್ಷೇತ್ರದಲ್ಲಿ ಪಾಂಡವರ ಹಿಂದೆ ಶ್ರೀಕೃಷ್ಣ ಪರಮಾತ್ಮ ಇದ್ದಂತೆ ನಾನೂ ನಿಮ್ಮ ಹಿಂದೆ ಇರುತ್ತೇನೆ’ ಎಂದು ಹುರಿದುಂಬಿಸಿದ್ದಾರೆ.</p>.<p><strong>ಗೌರಿಶಂಕರ್ ದೂರು</strong></p>.<p>ಚುನಾವಣೆ ನೀತಿ ಸಂಹಿತೆ ಜಾರಿ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಸುರೇಶ್ಗೌಡ ಅವರು ದೊಣ್ಣೆ ಹಿಡಿದು ಚುನಾವಣೆ ಮಾಡಿ, ಹಣ ಕೊಟ್ಟರೆ ತೆಗೆದುಕೊಳ್ಳಿ ಎಂದು ಪಕ್ಷದ ವರಿಷ್ಠರು ಹಾಗೂ ನಮ್ಮ ವಿರುದ್ಧ ಹೇಳಿಕೆ ನೀಡಿ ನಿಂದನೆ ಮಾಡಿದ್ದಾರೆ. ಈ ಕುರಿತು ಚುನಾವಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಲಿದ್ದೇನೆ’ ಎಂದು ಶಾಸಕ<br />ಡಿ.ಸಿ.ಗೌರಿಶಂಕರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: ‘</strong>ಜೆಡಿಎಸ್ನವರ ವಿರುದ್ಧ ದೊಣ್ಣೆ ಹಿಡಿದು ನಿಂತು ಎಲೆಕ್ಷನ್ ಮಾಡಿ. ಶಾಸಕ ಗೌರಿಶಂಕರ್ ಬಂದರೆ ನೀರು ಬಿಡಿಸದೇ ಇರೋ ಕಳ್ಳ ಕಳ್ಳ ಎಂದು ಕೂಗಿ’ ಎಂದು ಮಾಜಿ ಶಾಸಕ ಬಿ.ಸುರೇಶ್ ಗೌಡ ಅವರು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.</p>.<p>ತಾಲ್ಲೂಕಿನ ಹೊನಸಿಗೆರೆಯಲ್ಲಿ ಈಚೆಗೆ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರ ಮಾತಿನ ವಿಡಿಯೊ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<p>‘ಶಾಸಕ ಗೌರಿಶಂಕರನೇನೂ ದೊಡ್ಡ ಮನುಷ್ಯ ಅಲ್ಲ. ಅವರಪ್ಪ ಪೊಲೀಸ್ ಆಗಿದ್ದವನು. ಅವನೂ ಶ್ರೀಮಂತ ಅಲ್ಲ. ನಮ್ಮ ದುಡ್ಡೇ ಹೊಡೆದು ನಮ್ಗೆ ಹಂಚ್ತಾನೆ. ಗಣಿ ಪ್ರಕರಣಗಳಲ್ಲಿ ಕೋಟಿ ಕೋಟಿ ಲೂಟಿ ಹೊಡೆದಿದ್ದಾನೆ’ ಎಂದು ಆರೋಪಿಸಿದರು.</p>.<p>‘ಅವನು ಹಣ ಕೊಟ್ಟರೆ ಚೆನ್ನಾಗಿ ಇಸ್ಕೊಳ್ಳಿ. ಚೆನ್ನಾಗಿ ತಿನ್ನಿ, ವೋಟ್ ಮಾತ್ರ ಬಿಜೆಪಿಗೆ ಹಾಕಿಸಬೇಕು. ಏನು ಬರುತ್ತೋ ಬರಲಿ. ಕುರುಕ್ಷೇತ್ರದಲ್ಲಿ ಪಾಂಡವರ ಹಿಂದೆ ಶ್ರೀಕೃಷ್ಣ ಪರಮಾತ್ಮ ಇದ್ದಂತೆ ನಾನೂ ನಿಮ್ಮ ಹಿಂದೆ ಇರುತ್ತೇನೆ’ ಎಂದು ಹುರಿದುಂಬಿಸಿದ್ದಾರೆ.</p>.<p><strong>ಗೌರಿಶಂಕರ್ ದೂರು</strong></p>.<p>ಚುನಾವಣೆ ನೀತಿ ಸಂಹಿತೆ ಜಾರಿ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಸುರೇಶ್ಗೌಡ ಅವರು ದೊಣ್ಣೆ ಹಿಡಿದು ಚುನಾವಣೆ ಮಾಡಿ, ಹಣ ಕೊಟ್ಟರೆ ತೆಗೆದುಕೊಳ್ಳಿ ಎಂದು ಪಕ್ಷದ ವರಿಷ್ಠರು ಹಾಗೂ ನಮ್ಮ ವಿರುದ್ಧ ಹೇಳಿಕೆ ನೀಡಿ ನಿಂದನೆ ಮಾಡಿದ್ದಾರೆ. ಈ ಕುರಿತು ಚುನಾವಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಲಿದ್ದೇನೆ’ ಎಂದು ಶಾಸಕ<br />ಡಿ.ಸಿ.ಗೌರಿಶಂಕರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>