ಪಿಎಸ್ಐ ₹ 10 ಲಕ್ಷ, ಸಿಪಿಐ ₹ 15 ಲಕ್ಷ ಮತ್ತು ಡಿವೈಎಸ್ಪಿ ₹ 25 ಲಕ್ಷ ಕೊಟ್ಟು ವರ್ಗಾವಣೆ ಮಾಡಿಸಿಕೊಂಡು ಬಂದಿದ್ದಾರೆ ಎಂಬ ಮಾತುಗಳನ್ನು ಪೊಲೀಸರೇ ಹೇಳುತ್ತಿದ್ದಾರೆ. ಲಂಚ ಕೊಟ್ಟು ಬಂದವರು ಪ್ರತಿ ತಿಂಗಳು ಶಾಸಕರಿಗೆ ಮಾಮೂಲಿ ಕೊಡಬೇಕು. ನಿಮ್ಮ ಕಷ್ಟಗಳನ್ನು ಶಾಸಕರಿಗೆ ಹೋಗಿ ಹೇಳಿ ಎಂದು ಹಣ, ಒಡವೆ ಕಳೆದುಕೊಂಡ ಸಂತ್ರಸ್ತರಿಗೆ ಪೊಲೀಸರು ಹೇಳುತ್ತಿದ್ದಾರೆ ಎಂದು ಬಿ.ಸುರೇಶ್ ಗೌಡ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.