ಹಾವು, ಚೇಳು, ಸೊಳ್ಳೆಗಳೊಂದಿಗೆ ಕಾಲ ನೂಕುವಂತಾಗಿದೆ ಎಂದು ಎಂದು ಸ್ಥಳೀಯರು ದೂರುತ್ತಾರೆ. ಎಷ್ಟೊ ಮಕ್ಕಳಿಗೆ ಶಿಕ್ಷಣ ಸಿಕ್ಕಿಲ್ಲ. ಸಣ್ಣಪುಟ್ಟ ವ್ಯಾಪಾರ, ಹಂದಿ ಸಾಕಾಣಿಕೆ, ಭಿಕ್ಷಾಟನೆಯಿಂದ ಇವರು ಬದುಕು ಸಾಗಿಸುತ್ತಿದ್ದಾರೆ. ಈಗಾಗಲೇ ಬೇರೆ ಕಡೆ ಹಕ್ಕುಪತ್ರ ವಿತರಣೆ ಮಾಡಿದ್ದರೂ, ಅಲ್ಲಿಯೂ ಮೂಲ ಸೌಕರ್ಯ ಒದಗಿಸಿಲ್ಲ ಎಂಬ ದೂರು ಕೇಳಿ ಬರುತ್ತಿದೆ.