ದೂರು ಬಂದ ನಂತರ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಾನಾಯ್ಕ ಶಾಲೆಗೆ ಭೇಟಿನೀಡಿ ಪರಿಶೀಲಿಸಿದ್ದಾರೆ. ಗ್ರಾಮಸ್ಥರು, ಜನರು ಈ ಸಮಯದಲ್ಲಿ ಶಿಕ್ಷಕಿಯರ ವಿರುದ್ಧ ದೂರಿನ ಸುರಿಮಳೆಗೈದಿದ್ದು, ಶಿಕ್ಷಕಿ ಗಂಗಲಕ್ಷ್ಮಮ್ಮ ಅವರ ಟೇಬಲ್ ತೆರೆದು ಪರಿಶೀಲಿಸಿದಾಗ ಅದರಲ್ಲಿ ಮದ್ಯದ ಬಾಟಲಿ ಪತ್ತೆಯಾಗಿದೆ. ಇದನ್ನು ಪೊಲೀಸರಿಗೆ ನೀಡಿದ್ದು, ಪರಿಶೀಲಿಸಿ ಕ್ರಮ ಜರುಗಿಸಬೇಕು, ಅಗತ್ಯ ವರದಿ ನೀಡುವಂತೆ ಕೋರಲಾಗಿದೆ ಎಂದು ಡಿಡಿಪಿಐ ಸಿ.ನಂಜಯ್ಯ ತಿಳಿಸಿದರು.