ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕ ಅನುಮಾನಾಸ್ಪದ ಸಾವು

Last Updated 4 ಅಕ್ಟೋಬರ್ 2020, 3:42 IST
ಅಕ್ಷರ ಗಾತ್ರ

ಗುಬ್ಬಿ: ತಾಲ್ಲೂಕಿನ ನಾರನಹಳ್ಳಿ ಗ್ರಾಮದ ಉದಯ್ (12) ಶನಿವಾರ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಉದಯ್, ಶಂಕರೇಗೌಡ ಎಂಬುವವರ ಪುತ್ರ.

ತೋಟಕ್ಕೆ ತೆರಳಿದ್ದ ಬಾಲಕ ಮನೆಗೆ ವಾಪಸ್ ಬಾರದಿದ್ದಾಗ ಪೋಷಕರು ಹುಡುಕಿಕೊಂಡು ಹೋಗಿದ್ದಾರೆ. ಆಗ ಶವ ಪೊದೆಯಲ್ಲಿ ಪತ್ತೆಯಾಗಿದೆ.

ಚಿರತೆದಾಳಿಯಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಗ್ರಾಮದಲ್ಲಿ ಸುದ್ದಿ ಹರಡಿದೆ. ಬಾಲಕನ ಮೈ ಮೇಲೆ ಯಾವುದೇ ಗಾಯದ ಗುರುತುಗಳು ಇಲ್ಲದಿರುವುದು ಅನುಮಾನಕ್ಕೆ ಕಾರಣವಾಗಿದೆ. ಮತ್ತಷ್ಟು ಮಂದಿ ಕೊಲೆ ಎಂದು ಶಂಕಿಸುತ್ತಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಬ್ಬಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿ.ಎಸ್.ಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT