<p>ಗುಬ್ಬಿ: ತಾಲ್ಲೂಕಿನ ನಾರನಹಳ್ಳಿ ಗ್ರಾಮದ ಉದಯ್ (12) ಶನಿವಾರ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಉದಯ್, ಶಂಕರೇಗೌಡ ಎಂಬುವವರ ಪುತ್ರ.</p>.<p>ತೋಟಕ್ಕೆ ತೆರಳಿದ್ದ ಬಾಲಕ ಮನೆಗೆ ವಾಪಸ್ ಬಾರದಿದ್ದಾಗ ಪೋಷಕರು ಹುಡುಕಿಕೊಂಡು ಹೋಗಿದ್ದಾರೆ. ಆಗ ಶವ ಪೊದೆಯಲ್ಲಿ ಪತ್ತೆಯಾಗಿದೆ.</p>.<p>ಚಿರತೆದಾಳಿಯಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಗ್ರಾಮದಲ್ಲಿ ಸುದ್ದಿ ಹರಡಿದೆ. ಬಾಲಕನ ಮೈ ಮೇಲೆ ಯಾವುದೇ ಗಾಯದ ಗುರುತುಗಳು ಇಲ್ಲದಿರುವುದು ಅನುಮಾನಕ್ಕೆ ಕಾರಣವಾಗಿದೆ. ಮತ್ತಷ್ಟು ಮಂದಿ ಕೊಲೆ ಎಂದು ಶಂಕಿಸುತ್ತಿದ್ದಾರೆ.</p>.<p>ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಬ್ಬಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿ.ಎಸ್.ಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಬ್ಬಿ: ತಾಲ್ಲೂಕಿನ ನಾರನಹಳ್ಳಿ ಗ್ರಾಮದ ಉದಯ್ (12) ಶನಿವಾರ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಉದಯ್, ಶಂಕರೇಗೌಡ ಎಂಬುವವರ ಪುತ್ರ.</p>.<p>ತೋಟಕ್ಕೆ ತೆರಳಿದ್ದ ಬಾಲಕ ಮನೆಗೆ ವಾಪಸ್ ಬಾರದಿದ್ದಾಗ ಪೋಷಕರು ಹುಡುಕಿಕೊಂಡು ಹೋಗಿದ್ದಾರೆ. ಆಗ ಶವ ಪೊದೆಯಲ್ಲಿ ಪತ್ತೆಯಾಗಿದೆ.</p>.<p>ಚಿರತೆದಾಳಿಯಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಗ್ರಾಮದಲ್ಲಿ ಸುದ್ದಿ ಹರಡಿದೆ. ಬಾಲಕನ ಮೈ ಮೇಲೆ ಯಾವುದೇ ಗಾಯದ ಗುರುತುಗಳು ಇಲ್ಲದಿರುವುದು ಅನುಮಾನಕ್ಕೆ ಕಾರಣವಾಗಿದೆ. ಮತ್ತಷ್ಟು ಮಂದಿ ಕೊಲೆ ಎಂದು ಶಂಕಿಸುತ್ತಿದ್ದಾರೆ.</p>.<p>ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಬ್ಬಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿ.ಎಸ್.ಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>