<p>ಚಿಕ್ಕನಾಯಕನಹಳ್ಳಿ: ಫೆ. 6ರಿಂದ 11ರವರೆಗೆ ನಡೆಯಲಿರುವ ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರ ನಿಮಿತ್ತ ಭಾನುವಾರ ಸಂಜೆ ಪಟ್ಟಣಕ್ಕೆ ಆಗಮಿಸಿದ ರಥಯಾತ್ರೆಯನ್ನು ಸ್ಥಳೀಯ ವೀರಶೈವ ಲಿಂಗಾಯತ ಸಮುದಾಯದ ಭಕ್ತರು ಬರಮಾಡಿಕೊಂಡರು.</p>.<p><br /> ಪಟ್ಟಣದ ನೆಹರು ವೃತ್ತದಲ್ಲಿ ರಥವನ್ನು ಸ್ವಾಗತಿಸಿದ ಭಕ್ತರು, ರಥದ ಮುಂದೆ ಅಳವಡಿಸಿದ್ದ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ಪುತ್ಥಳಿಗೆ ಪೂಜೆ ಸಲ್ಲಿಸಿದರು. ಸುತ್ತೂರು ಮಠಕ್ಕೆ ಕಾಣಿಕೆ ಸಮರ್ಪಿಸಿದರು.</p>.<p>ಯಡಿಯೂರು, ತುಮಕೂರಿಗೆ ಭೇಟಿ ನೀಡಿ ಚಿಕ್ಕನಾಯಕನಹಳ್ಳಿಗೆ ಆಗಮಿಸಿದೆ. ನಂತರ ಅರಸೀಕೆರೆ ಮೂಲಕ ಹಾಸನ ಜಿಲ್ಲೆ ಪ್ರವೇಶಿಸಲಿದೆ ಎಂದು ಯಾತ್ರೆ ಜತೆ ಬಂದಿದ್ದ ರಥೋತ್ಸವದ ಸಂಚಾಲಕ ಪಂಚಾಕ್ಷರಿ ತಿಳಿಸಿದರು.</p>.<p>ಶರಣ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಬಸವರಾಜ್ ಹೊನ್ನೇಬಾಗಿ, ಮಲ್ಲಿಕಾರ್ಜುನಸ್ವಾಮಿ, ಗೋವಿಂದರಾಜು, ಶಿವಕುಮಾರಸ್ವಾಮಿ, ಸೋಮಣ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕನಾಯಕನಹಳ್ಳಿ: ಫೆ. 6ರಿಂದ 11ರವರೆಗೆ ನಡೆಯಲಿರುವ ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರ ನಿಮಿತ್ತ ಭಾನುವಾರ ಸಂಜೆ ಪಟ್ಟಣಕ್ಕೆ ಆಗಮಿಸಿದ ರಥಯಾತ್ರೆಯನ್ನು ಸ್ಥಳೀಯ ವೀರಶೈವ ಲಿಂಗಾಯತ ಸಮುದಾಯದ ಭಕ್ತರು ಬರಮಾಡಿಕೊಂಡರು.</p>.<p><br /> ಪಟ್ಟಣದ ನೆಹರು ವೃತ್ತದಲ್ಲಿ ರಥವನ್ನು ಸ್ವಾಗತಿಸಿದ ಭಕ್ತರು, ರಥದ ಮುಂದೆ ಅಳವಡಿಸಿದ್ದ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ಪುತ್ಥಳಿಗೆ ಪೂಜೆ ಸಲ್ಲಿಸಿದರು. ಸುತ್ತೂರು ಮಠಕ್ಕೆ ಕಾಣಿಕೆ ಸಮರ್ಪಿಸಿದರು.</p>.<p>ಯಡಿಯೂರು, ತುಮಕೂರಿಗೆ ಭೇಟಿ ನೀಡಿ ಚಿಕ್ಕನಾಯಕನಹಳ್ಳಿಗೆ ಆಗಮಿಸಿದೆ. ನಂತರ ಅರಸೀಕೆರೆ ಮೂಲಕ ಹಾಸನ ಜಿಲ್ಲೆ ಪ್ರವೇಶಿಸಲಿದೆ ಎಂದು ಯಾತ್ರೆ ಜತೆ ಬಂದಿದ್ದ ರಥೋತ್ಸವದ ಸಂಚಾಲಕ ಪಂಚಾಕ್ಷರಿ ತಿಳಿಸಿದರು.</p>.<p>ಶರಣ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಬಸವರಾಜ್ ಹೊನ್ನೇಬಾಗಿ, ಮಲ್ಲಿಕಾರ್ಜುನಸ್ವಾಮಿ, ಗೋವಿಂದರಾಜು, ಶಿವಕುಮಾರಸ್ವಾಮಿ, ಸೋಮಣ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>