<p><strong>ತುಮಕೂರು: </strong>ಚೆನ್ನೈನ ಡಾ.ರೇಲಾ ಇನ್ಸ್ಟಿಟ್ಯೂಟ್ ಆ್ಯಂಡ್ ಮೆಡಿಕಲ್ ಸೆಂಟರ್ನಲ್ಲಿ ಶಸ್ತ್ರಚಿಕಿತ್ಸೆಗೊಳಗಾದ ಸಿದ್ಧಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ಚೇತರಿಸಿಕೊಳ್ಳುತ್ತಿದ್ದು, ವೈದ್ಯರ ಸೂಚನೆ ಮೇರೆಗೆ ಮಂಗಳವಾರ ಅವರು ದ್ರವ ರೂಪದ ಆಹಾರ ಕೊಡಲಾಗಿದೆ.</p>.<p>ಶಸ್ತ್ರ ಚಿಕಿತ್ಸೆ ಬಳಿಕ ದಿನದಿಂದ ದಿನಕ್ಕೆ ಸಾಕಷ್ಟು ಚೇತರಿಕೆ ಕಂಡಿದೆ. ಬುಧವಾರ ಬೆಳಿಗ್ಗೆ 11 ಗಂಟೆ ತೀವ್ರ ನಿಗಾ ಘಟಕದಿಂದ ವಿಶೇಷ ವಾರ್ಡಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ.</p>.<p>‘ಸ್ವಾಮೀಜಿ ಅವರು ಎಂದಿನಂತೆಯೇ ಇಷ್ಟಲಿಂಗ ಪೂಜೆ ಮಾಡುವ ಇಂಗಿತವನ್ನು ಮಂಗಳವಾರ ಬೆಳಿಗ್ಗೆಯೂ ವ್ಯಕ್ತಪಡಿಸಿದರು’ ಎಂದು ಮಠದ ಮೂಲಗಳು ತಿಳಿಸಿವೆ.</p>.<p><strong>ಭೇಟಿ: </strong>ನಾಡಿನ ವಿವಿಧ ಕಡೆಯ ಅನೇಕ ಭಕ್ತರು ಸ್ವಾಮೀಜಿ ಅವರನ್ನು ಭೇಟಿ ಮಾಡಲು ಮಂಗಳವಾರವೂ ಆಸ್ಪತ್ರೆಗೆ ತೆರಳಿದ್ದರು. ಆದರೆ, ಭೇಟಿಗೆ ಅವಕಾಶ ಸಿಗಲಿಲ್ಲ. ತುಮಕೂರಿನ ಬಿಜೆಪಿ ಹಿರಿಯ ಮುಖಂಡ ಜಿ.ಎಸ್. ಬಸವರಾಜ್ ಅವರೊಬ್ಬರಿಗೆ ಮಾತ್ರ ಆಸ್ಪತ್ರೆಯವರು ಅವಕಾಶ ನೀಡಿದ್ದರು.</p>.<p><strong>ಆಸ್ಪತ್ರೆಗೆ ತೆರಳಿದ ಕಿರಿಯ ಶ್ರೀ: </strong>ಸೋಮವಾರ ಸಿದ್ಧಗಂಗಾಮಠಕ್ಕೆ ಬಂದಿದ್ದ ಕಿರಿಯಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ಮಂಗಳವಾರ ರೇಲಾ ಆಸ್ಪತ್ರೆಗೆ ಮರಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಚೆನ್ನೈನ ಡಾ.ರೇಲಾ ಇನ್ಸ್ಟಿಟ್ಯೂಟ್ ಆ್ಯಂಡ್ ಮೆಡಿಕಲ್ ಸೆಂಟರ್ನಲ್ಲಿ ಶಸ್ತ್ರಚಿಕಿತ್ಸೆಗೊಳಗಾದ ಸಿದ್ಧಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ಚೇತರಿಸಿಕೊಳ್ಳುತ್ತಿದ್ದು, ವೈದ್ಯರ ಸೂಚನೆ ಮೇರೆಗೆ ಮಂಗಳವಾರ ಅವರು ದ್ರವ ರೂಪದ ಆಹಾರ ಕೊಡಲಾಗಿದೆ.</p>.<p>ಶಸ್ತ್ರ ಚಿಕಿತ್ಸೆ ಬಳಿಕ ದಿನದಿಂದ ದಿನಕ್ಕೆ ಸಾಕಷ್ಟು ಚೇತರಿಕೆ ಕಂಡಿದೆ. ಬುಧವಾರ ಬೆಳಿಗ್ಗೆ 11 ಗಂಟೆ ತೀವ್ರ ನಿಗಾ ಘಟಕದಿಂದ ವಿಶೇಷ ವಾರ್ಡಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ.</p>.<p>‘ಸ್ವಾಮೀಜಿ ಅವರು ಎಂದಿನಂತೆಯೇ ಇಷ್ಟಲಿಂಗ ಪೂಜೆ ಮಾಡುವ ಇಂಗಿತವನ್ನು ಮಂಗಳವಾರ ಬೆಳಿಗ್ಗೆಯೂ ವ್ಯಕ್ತಪಡಿಸಿದರು’ ಎಂದು ಮಠದ ಮೂಲಗಳು ತಿಳಿಸಿವೆ.</p>.<p><strong>ಭೇಟಿ: </strong>ನಾಡಿನ ವಿವಿಧ ಕಡೆಯ ಅನೇಕ ಭಕ್ತರು ಸ್ವಾಮೀಜಿ ಅವರನ್ನು ಭೇಟಿ ಮಾಡಲು ಮಂಗಳವಾರವೂ ಆಸ್ಪತ್ರೆಗೆ ತೆರಳಿದ್ದರು. ಆದರೆ, ಭೇಟಿಗೆ ಅವಕಾಶ ಸಿಗಲಿಲ್ಲ. ತುಮಕೂರಿನ ಬಿಜೆಪಿ ಹಿರಿಯ ಮುಖಂಡ ಜಿ.ಎಸ್. ಬಸವರಾಜ್ ಅವರೊಬ್ಬರಿಗೆ ಮಾತ್ರ ಆಸ್ಪತ್ರೆಯವರು ಅವಕಾಶ ನೀಡಿದ್ದರು.</p>.<p><strong>ಆಸ್ಪತ್ರೆಗೆ ತೆರಳಿದ ಕಿರಿಯ ಶ್ರೀ: </strong>ಸೋಮವಾರ ಸಿದ್ಧಗಂಗಾಮಠಕ್ಕೆ ಬಂದಿದ್ದ ಕಿರಿಯಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ಮಂಗಳವಾರ ರೇಲಾ ಆಸ್ಪತ್ರೆಗೆ ಮರಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>