ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ಧಗಂಗಾಶ್ರೀ ಶಸ್ತ್ರಚಿಕಿತ್ಸೆ ಗಾಯ ವಾಸಿ; ಡಾ.ರವೀಂದ್ರ

Last Updated 30 ಡಿಸೆಂಬರ್ 2018, 9:26 IST
ಅಕ್ಷರ ಗಾತ್ರ

ತುಮಕೂರು: ಸಿದ್ಧಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯವನ್ನು ಶನಿವಾರ ರಾತ್ರಿ ಬೆಂಗಳೂರು ಬಿಜಿಎಸ್ ಗ್ಲೋಬಲ್ ಆಸ್ಪತ್ರೆ ವೈದ್ಯರಾದ ಡಾ.ರವೀಂದ್ರ ತಪಾಸಣೆ ನಡೆಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಶಸ್ತ್ರಚಿಕಿತ್ಸೆ ಗಾಯ ವಾಸಿಯಾಗಿದೆ. ಸ್ವಾಮೀಜಿಯವರಿಗೆ ದ್ರವರೂಪ ಆಹಾರ ಕೊಡಲಾಗುತ್ತಿದೆ. ಸ್ವಲ್ಪ ಕೆಮ್ಮು ಮತ್ತು ಕಫ ಇತ್ತು.ಚಿಕಿತ್ಸೆ ನೀಡಲಾಗಿದೆ' ಎಂದರು.

‘ಈ ರೀತಿ ಶಸ್ತ್ರಚಿಕಿತ್ಸೆ ಆದಾಗ ಒಂದುವರೆ ತಿಂಗಳು ವಿಶ್ರಾಂತಿಯ ಅಗತ್ಯತೆ ಇದೆ. ಮಠದಲ್ಲಿಯೇ ಆಸ್ಪತ್ರೆಯ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಸೋಂಕು ತಗಲುವ ಸಾಧ್ಯತೆ ಇರುವುದರಿಂದ ಹೆಚ್ಚಿನ ನಿಗಾವಹಿಸಲಾಗಿದೆ. ಆಸ್ಪತ್ರೆಗೆ ಸ್ಥಳಾಂತರ ಮಾಡುವ ಅಗತ್ಯತೆ ಇಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT