ಯಡಿಯೂರಪ್ಪ ಮನವಿ
‘ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಆಯುರ್ವೇದ ವಿಶೇಷ ಔಷಧಿ ಕೊಡುತ್ತಿದ್ದೇವೆ. ಸುಧಾರಣೆ ಆಗುತ್ತಿದೆ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ, ಭಕ್ತರು ಆತಂಕಕ್ಕೆ ಒಳಗಾಗಬಾರದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದರು.