ತುಮಕೂರು: ‘ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿ ಇದ್ದಾರೆ. ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಬೇಕು ಎಂದು ಕೆಲವರು ಹೇಳುವುದು, ಇನ್ಯಾರೊ ಮತ್ತೊಬ್ಬರು ಮುಖ್ಯಮಂತ್ರಿ ಆಗಲಿ ಎಂದು ಹೇಳಿಕೊಳ್ಳಬಹುದು. ಆದರೆ, ಅದು ಅಧಿಕೃತವಲ್ಲ. ಶಾಸಕಾಂಗ ಪಕ್ಷದಲ್ಲಿ ಶಾಸಕರು ಕೈಗೊಳ್ಳುವ ತೀರ್ಮಾನ ಮತ್ತು ಪಕ್ಷದ ವರಿಷ್ಠರ ನಿರ್ಧಾರ ಅಂತಿಮವಾದುದು’ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದರು.