‘ಗ್ರಾಮೀಣ ಭಾಗದಲ್ಲಿ ಕನ್ನಡ ಶಾಲೆಗಳನ್ನು ದತ್ತುಪಡೆದು ಅಭಿವೃದ್ಧಿ ಪಡಿಸಲಾಗುವುದು. ಸಾಹಿತ್ಯ ಸಮ್ಮೇಳನಗಳನ್ನು ಅರ್ಥಪೂರ್ಣವಾಗಿ ಆಚರಿಸಿ, ಯುವ ಬರಹಗಾರರಿಗೆ ಅವಕಾಶ ನೀಡುವಂತೆ ನೋಡಿಕೊಳ್ಳುತ್ತೇನೆ. ಗ್ರಾಮ ಮಟ್ಟದಲ್ಲಿ ಸಾಹಿತ್ಯ ಮರುಓದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉಚಿತ ವಾಚನಾಲಯ, ಗ್ರಂಥಾಲಯ ಸ್ಥಾಪಿಸಿ ಓದುವ ಅಭಿರುಚಿಯನ್ನು ಬಲಪಡಿಸಲಾಗುವುದು. ಹೋಬಳಿ ಮಟ್ಟದಲ್ಲಿ ಜಾನಪದ ಕಲಾ
ಪ್ರದರ್ಶನ, ವಿದ್ಯಾರ್ಥಿಗಳಿಗೆ ಜನಪದ ಕಲಿಕಾ ಶಿಬಿರ ಹಮ್ಮಿಕೊಳ್ಳಲು ಉದ್ದೇಶಿಸಿದ್ದೇನೆ’ ಎಂದು
ವಿವರಿಸಿದರು.