<p><strong>ಕೊಡಿಗೇನಹಳ್ಳಿ: </strong>ಹೋಬಳಿಯ ದೊಡ್ಡಮಾಲೂರು ಗ್ರಾಮದ ಲಕ್ಷ್ಮೀದೇವಮ್ಮ ಅವರ ಮನೆ ಮೇಲೆ ಗುರುವಾರ ರಾತ್ರಿ ಹುಣಸೆ ಮರಬಿದ್ದಿದೆ.</p>.<p>ಲಕ್ಷ್ಮೀದೇವಮ್ಮ ದಂಪತಿ ನಾಲ್ಕು ಮಕ್ಕಳೊಂದಿಗೆ ಈ ಮನೆಯಲ್ಲಿ ವಾಸವಿದ್ದರು. ಕೆಲವು ದಿನಗಳಿಂದ ಲಕ್ಷ್ಮಿದೇವಮ್ಮ ಅವರ ಗಂಡ ನರಸಿಂಹಯ್ಯ ಅವರಿಗೆ ಆರೋಗ್ಯ ಸರಿಯಿಲ್ಲದಿದ್ದರಿಂದ ತಂದೆ ಜೊತೆ ಮಗ ಆಸ್ಪತ್ರೆಗೆ ಹೋಗಿದ್ದರು. ಇನ್ನೊಬ್ಬ ಮಗ ಗಾರೆ ಕೆಲಸಕ್ಕೆಂದು ಬೇರೆ ಗ್ರಾಮಕ್ಕೆ ತೆರಳಿದ್ದರು.</p>.<p>ಮೂರು ದಿನಗಳಿಂದ ಈ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಮತ್ತು ಗುರುವಾರ ರಾತ್ರಿ ಸುರಿದ ಮಳೆಗೆ ಶುಕ್ರವಾರ ಬೆಳಿಗ್ಗೆ ಹುಣಸೆ ಮರ ಆಕಸ್ಮಿಕವಾಗಿ ಮುರಿದು ಬಿದ್ದಿದೆ. ಮನೆಯ ಮುಂದಿದ್ದ ಶೀಟುಗಳು ನಾಶವಾಗಿ ಗೋಡೆಗಳು ಬಿರುಕು ಬಿಟ್ಟಿವೆ.</p>.<p>ಸ್ಥಳಕ್ಕೆ ಗ್ರಾಮ ಪಂಚಾಯಿತಿ ಪಿಡಿಒ ಶಿವಾನಂದಯ್ಯ, ವೃತ್ತ ನಿರೀಕ್ಷಕ ಸುರೇಶ್ ಮತ್ತು ಗ್ರಾಮ ಪಂಚಾಯಿತಿ ಸದಸ್ಯರಾದ ಹನುಮಂತರಾಯ, ನರಸಿಂಹಮೂರ್ತಿ, ಲಿಂಗಪ್ಪ ಹಾಗೂ ಮುಖಂಡ ಪಟೇಲ್ ಸಂಜೀವಗೌಡ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಡಿಗೇನಹಳ್ಳಿ: </strong>ಹೋಬಳಿಯ ದೊಡ್ಡಮಾಲೂರು ಗ್ರಾಮದ ಲಕ್ಷ್ಮೀದೇವಮ್ಮ ಅವರ ಮನೆ ಮೇಲೆ ಗುರುವಾರ ರಾತ್ರಿ ಹುಣಸೆ ಮರಬಿದ್ದಿದೆ.</p>.<p>ಲಕ್ಷ್ಮೀದೇವಮ್ಮ ದಂಪತಿ ನಾಲ್ಕು ಮಕ್ಕಳೊಂದಿಗೆ ಈ ಮನೆಯಲ್ಲಿ ವಾಸವಿದ್ದರು. ಕೆಲವು ದಿನಗಳಿಂದ ಲಕ್ಷ್ಮಿದೇವಮ್ಮ ಅವರ ಗಂಡ ನರಸಿಂಹಯ್ಯ ಅವರಿಗೆ ಆರೋಗ್ಯ ಸರಿಯಿಲ್ಲದಿದ್ದರಿಂದ ತಂದೆ ಜೊತೆ ಮಗ ಆಸ್ಪತ್ರೆಗೆ ಹೋಗಿದ್ದರು. ಇನ್ನೊಬ್ಬ ಮಗ ಗಾರೆ ಕೆಲಸಕ್ಕೆಂದು ಬೇರೆ ಗ್ರಾಮಕ್ಕೆ ತೆರಳಿದ್ದರು.</p>.<p>ಮೂರು ದಿನಗಳಿಂದ ಈ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಮತ್ತು ಗುರುವಾರ ರಾತ್ರಿ ಸುರಿದ ಮಳೆಗೆ ಶುಕ್ರವಾರ ಬೆಳಿಗ್ಗೆ ಹುಣಸೆ ಮರ ಆಕಸ್ಮಿಕವಾಗಿ ಮುರಿದು ಬಿದ್ದಿದೆ. ಮನೆಯ ಮುಂದಿದ್ದ ಶೀಟುಗಳು ನಾಶವಾಗಿ ಗೋಡೆಗಳು ಬಿರುಕು ಬಿಟ್ಟಿವೆ.</p>.<p>ಸ್ಥಳಕ್ಕೆ ಗ್ರಾಮ ಪಂಚಾಯಿತಿ ಪಿಡಿಒ ಶಿವಾನಂದಯ್ಯ, ವೃತ್ತ ನಿರೀಕ್ಷಕ ಸುರೇಶ್ ಮತ್ತು ಗ್ರಾಮ ಪಂಚಾಯಿತಿ ಸದಸ್ಯರಾದ ಹನುಮಂತರಾಯ, ನರಸಿಂಹಮೂರ್ತಿ, ಲಿಂಗಪ್ಪ ಹಾಗೂ ಮುಖಂಡ ಪಟೇಲ್ ಸಂಜೀವಗೌಡ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>