<p>ಪಾವಗಡ: ಪಟ್ಟಣದ ಅಗಸರ ಕುಂಟೆ ಕಟ್ಟೆಯಿಂದ ನೀರು ಹೊರಬರುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.</p>.<p>ಅಗಸರ ಕುಂಟೆಗೆ ನಾಗಲಮಡಿಕೆಯಿಂದ ನೀರು ಹರಿಸುವ ಸಂದರ್ಭದಲ್ಲಿ ಕಟ್ಟೆಯನ್ನು ಸಮರ್ಪಕವಾಗಿ ದುರಸ್ತಿ ಮಾಡದೆ ನೀರು ಹರಿಸಲಾಗುತ್ತಿದೆ. ಕುಂಟೆ ಸಮೀಪದ ಮನೆಗಳು, ಶಾಲೆ, ಕಾಲೇಜು ಕಟ್ಟಡಗಳಿಗೆ ಸಮಸ್ಯೆಯಾಗಲಿದೆ ಎಂದು ಸ್ಥಳೀಯರು ದೂರಿದ್ದಾರೆ.</p>.<p>ಜನರ ಸಲಹೆ ಸ್ವೀಕರಿಸದೆ ಕೆರೆ, ಕಟ್ಟೆಯನ್ನು ಸಂಪೂರ್ಣವಾಗಿ ದುರಸ್ತಿ ಮಾಡದ ಕಾರಣ ಕಟ್ಟೆ ಬಳಿ ಗುಂಡಿ ಬಿದ್ದು ನೀರು ಹೊರಬರುತ್ತಿದೆ. ಸರ್ಕಾರಿ ಐಟಿಐ ಕಾಲೇಜು, ಮನೆಗಳಿಗೆ ನೀರು ಹರಿಯುತ್ತಿದೆ. ಮನೆ, ಶೌಚಾಲಯಗಳಲ್ಲಿ, ನೀರು ಜೌಗುತ್ತಿರುವುದರಿಂದ ಮನೆಗಳು ಬೀಳುವ ಆತಂಕದಲ್ಲಿ ಜನರಿದ್ದಾರೆ.</p>.<p>ಕುಂಟೆಯಲ್ಲಿ ನಿರ್ಮಿಸಿರುವ ಓವರ್ ಹೆಡ್ ಟ್ಯಾಂಕ್ ಬಾಗಿದೆ. ಟ್ಯಾಂಕ್ ಪಿಲ್ಲರ್ಗಳು ಶಿಥಿಲವಾಗಿದೆ. ಟ್ಯಾಂಕ್ ಕುಂಟೆಯೊಳಗೆ ಬಿದ್ದರೆ ರಭಸಕ್ಕೆ ಕಟ್ಟೆ ಒಡೆದು ಭಾರಿ ಅನಾಹುತ ಸಂಭವಿಸಲಿದೆ. ಕುಂಟೆಯ ನೀರು ರಸ್ತೆಯಲ್ಲಿ ಹರಿಯುತ್ತಿರುವುದರಿಂದ ಈ ಪ್ರದೇಶದ ಶಾಲೆ, ಕಾಲೇಜುಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ ಎನ್ನುವುದು ಜನರ ಅಳಲು.</p>.<p>ಟ್ಯಾಂಕ್ ಬಿದ್ದು ಅನಾಹುತ ಸಂಭವಿಸುವ ಮುನ್ನ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಕಟ್ಟೆಯನ್ನು ವೈಜ್ಞಾನಿಕವಾಗಿ ದುರಸ್ತಿ ಮಾಡಿಸಿ ನೀರು ಹೊರಹೋಗುವುದನ್ನು ತಡೆಯಬೇಕು. ಕೋಡಿ ನೀರು ಹರಿಯುತ್ತಿರುವ ರಸ್ತೆಯನ್ನು ಸರಿಪಡಿಸಬೇಕು ಎಂದು ಈ ಭಾಗದ ಜನರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಾವಗಡ: ಪಟ್ಟಣದ ಅಗಸರ ಕುಂಟೆ ಕಟ್ಟೆಯಿಂದ ನೀರು ಹೊರಬರುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.</p>.<p>ಅಗಸರ ಕುಂಟೆಗೆ ನಾಗಲಮಡಿಕೆಯಿಂದ ನೀರು ಹರಿಸುವ ಸಂದರ್ಭದಲ್ಲಿ ಕಟ್ಟೆಯನ್ನು ಸಮರ್ಪಕವಾಗಿ ದುರಸ್ತಿ ಮಾಡದೆ ನೀರು ಹರಿಸಲಾಗುತ್ತಿದೆ. ಕುಂಟೆ ಸಮೀಪದ ಮನೆಗಳು, ಶಾಲೆ, ಕಾಲೇಜು ಕಟ್ಟಡಗಳಿಗೆ ಸಮಸ್ಯೆಯಾಗಲಿದೆ ಎಂದು ಸ್ಥಳೀಯರು ದೂರಿದ್ದಾರೆ.</p>.<p>ಜನರ ಸಲಹೆ ಸ್ವೀಕರಿಸದೆ ಕೆರೆ, ಕಟ್ಟೆಯನ್ನು ಸಂಪೂರ್ಣವಾಗಿ ದುರಸ್ತಿ ಮಾಡದ ಕಾರಣ ಕಟ್ಟೆ ಬಳಿ ಗುಂಡಿ ಬಿದ್ದು ನೀರು ಹೊರಬರುತ್ತಿದೆ. ಸರ್ಕಾರಿ ಐಟಿಐ ಕಾಲೇಜು, ಮನೆಗಳಿಗೆ ನೀರು ಹರಿಯುತ್ತಿದೆ. ಮನೆ, ಶೌಚಾಲಯಗಳಲ್ಲಿ, ನೀರು ಜೌಗುತ್ತಿರುವುದರಿಂದ ಮನೆಗಳು ಬೀಳುವ ಆತಂಕದಲ್ಲಿ ಜನರಿದ್ದಾರೆ.</p>.<p>ಕುಂಟೆಯಲ್ಲಿ ನಿರ್ಮಿಸಿರುವ ಓವರ್ ಹೆಡ್ ಟ್ಯಾಂಕ್ ಬಾಗಿದೆ. ಟ್ಯಾಂಕ್ ಪಿಲ್ಲರ್ಗಳು ಶಿಥಿಲವಾಗಿದೆ. ಟ್ಯಾಂಕ್ ಕುಂಟೆಯೊಳಗೆ ಬಿದ್ದರೆ ರಭಸಕ್ಕೆ ಕಟ್ಟೆ ಒಡೆದು ಭಾರಿ ಅನಾಹುತ ಸಂಭವಿಸಲಿದೆ. ಕುಂಟೆಯ ನೀರು ರಸ್ತೆಯಲ್ಲಿ ಹರಿಯುತ್ತಿರುವುದರಿಂದ ಈ ಪ್ರದೇಶದ ಶಾಲೆ, ಕಾಲೇಜುಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ ಎನ್ನುವುದು ಜನರ ಅಳಲು.</p>.<p>ಟ್ಯಾಂಕ್ ಬಿದ್ದು ಅನಾಹುತ ಸಂಭವಿಸುವ ಮುನ್ನ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಕಟ್ಟೆಯನ್ನು ವೈಜ್ಞಾನಿಕವಾಗಿ ದುರಸ್ತಿ ಮಾಡಿಸಿ ನೀರು ಹೊರಹೋಗುವುದನ್ನು ತಡೆಯಬೇಕು. ಕೋಡಿ ನೀರು ಹರಿಯುತ್ತಿರುವ ರಸ್ತೆಯನ್ನು ಸರಿಪಡಿಸಬೇಕು ಎಂದು ಈ ಭಾಗದ ಜನರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>