ಬಜೆಟ್ ಬಗ್ಗೆ ನಗರದ ಗಣ್ಯರು, ವರ್ತಕರು, ಸಂಘ ಸಂಸ್ಥೆಗಳ ಮುಖಂಡರ ಜೊತೆ ಎರಡು ಬಾರಿ ಪೂರ್ವಭಾವಿ ಸಭೆ ನಡೆಸಿದರು. ಎಲ್ಲಿಯೂ ಆಸ್ತಿ ತೆರಿಗೆ ಹೆಚ್ಚಳದ ಬಗ್ಗೆ ಅಧಿಕಾರಿಗಳು ಸುಳಿವನ್ನು ಸಹ ನೀಡಿರಲಿಲ್ಲ. ಬಜೆಟ್ ಮಂಡನೆಯನ್ನು ಸಹ ಮಾಧ್ಯಮಗಳು ಸೇರಿದಂತೆ ಯಾರ ಗಮನಕ್ಕೂ ತಾರದೆ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.