ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿ.ಬಿ.ಜಯಚಂದ್ರ ಅವರಿಗೆ ಕೋವಿಡ್‌–19 ದೃಢ  

Last Updated 9 ನವೆಂಬರ್ 2020, 16:16 IST
ಅಕ್ಷರ ಗಾತ್ರ

ಶಿರಾ: ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರಿಗೆ ಸೋಮವಾರ ಕೋವಿಡ್‌–19 ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಯಚಂದ್ರ ಅವರ ಪತ್ನಿ ನಿರ್ಮಲಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಕಾರಣ, ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಟಿ.ಬಿ‌.ಜಯಚಂದ್ರ ಅವರು ಹೋಂ ಕ್ವಾರೈಂಟೆನ್‌ನಲ್ಲಿ ಇದ್ದರು. ಎರಡು ದಿನಗಳಿಂದ ಅವರಿಗೆ ಕೆಮ್ಮು ಕಾಣಿಸಿಕೊಂಡಿತ್ತು. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ಪರೀಕ್ಷೆ ನಡೆಸಿದ್ದು, ರಾತ್ರಿ ಸೋಂಕು ದೃಢಪಟ್ಟಿದೆ.

ಹಾಗಾಗಿ ತುಮಕೂರಿನಲ್ಲಿ ನಡೆಯುವ ಶಿರಾ ಉಪಚುನಾವಣೆಯ ಮತಗಳ ಎಣಿಕೆಯಲ್ಲಿ ಜಯಚಂದ್ರ ಗೈರಾಗುವ ಸಾಧ್ಯತೆ ಇದೆ. ಪ್ರಚಾರದ ಸಮಯದಲ್ಲಿ ಜನ ಗುಂಪಾಗಿ ಸೇರುತ್ತಿದ್ದರಿಂದ ಹಲವರಿಗೆ ಕೊರೊನಾ ಸೋಂಕು ತಗುಲಿದೆ.

ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕಾಂಗ್ರೆಸ್ ಮುಖಂಡ ಕಲ್ಕೆರೆ ರವಿಕುಮಾರ್ ಅವರಿಗೆ ಕೊರೊನಾ ದೃಢಪಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT