ಪಟ್ಟಣದ ರಸ್ತೆಗಳೆಲ್ಲ ಗುಂಡಿ ಬಿದ್ದು, ಜನರ ಜೀವನಕ್ಕೆ ಕಂಟಕವಾಗಿ ಪರಿಣಮಿಸಿವೆ. ಕಳೆದ ಒಂದು ವರ್ಷದಿಂದ ರಸ್ತೆಗಳು ಗುಂಡಿ ಬಿದ್ದಿದ್ದರೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ವ್ಯಕ್ತಿಯೊಬ್ಬರು ಗುಂಡಿಗೆ ಬಿದ್ದು ಜೀವ ಕಳೆದುಕೊಂಡ ಮೇಲೆ ಎಚ್ಚೆತ್ತುಕೊಂಡು ಗುಂಡಿಗೆ ತಾತ್ಕಾಲಿಕ ತೇಪೆ ಹಾಕಿ ಕೈ ತೊಳೆದುಕೊಂಡಿದ್ದಾರೆ. ಪುರಸಭೆ ಮೊದಲೇ ಗುಂಡಿಯನ್ನು ಮುಚ್ಚಿದ್ದರೆ ಈ ಸಾವು ಸಂಭವಿಸುತ್ತಿರಲ್ಲಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.