<p><strong>ತುಮಕೂರು:</strong> ವ್ಯಕ್ತಿತ್ವ ಮತ್ತು ರಾಷ್ಟ್ರ ನಿರ್ಮಾಣ ಅಧ್ಯಾಪಕರ ಹೊಣೆ. ಅವರು ಕರ್ತವ್ಯದಲ್ಲಿ ಪ್ರಾಮಾಣಿಕತೆ ಮೆರೆಯದೆ ಹೋದರೆ ವಿದ್ಯಾರ್ಥಿಗಳಲ್ಲಿ ಅದನ್ನು ಅಪೇಕ್ಷಿಸಲಾಗದು ಎಂದು ಬೆಂಗಳೂರು ವಿ.ವಿ ಕುಲಪತಿ ಪ್ರೊ.ಎಂ.ಜಯಕರ ಶೆಟ್ಟಿ ಅಭಿಪ್ರಾಯಪಟ್ಟರು.</p>.<p>ವಿಶ್ವವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಅಧ್ಯಾಪಕರು ತಮ್ಮ ನಡೆ, ನುಡಿಗಳಿಂದ ವಿದ್ಯಾರ್ಥಿಗಳನ್ನು ಪ್ರಭಾವಿಸಬೇಕು. ಶಿಕ್ಷಕರು ಮೌಲ್ಯಗಳ ಸಂರಕ್ಷಕರಾಗಿ ಪ್ರಸಿದ್ಧರು. ಸಮಾಜದಲ್ಲಿ ಮೌಲ್ಯಗಳು ಉಳಿಯಬೇಕಾದರೆ ಅದು ಶಿಕ್ಷಕರ ವ್ಯಕ್ತಿತ್ವದಲ್ಲಿ ಪ್ರತಿಫಲನಗೊಳ್ಳಬೇಕು. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದರು.</p>.<p>ಎಲ್ಲ ವಿದ್ಯಾರ್ಥಿಗಳನ್ನು ಸಮಾನವಾಗಿ ನೋಡುವ ವಿಶಾಲ ದೃಷ್ಟಿಕೋನ, ಮನೋಭಾವ ಹೊಂದಿರಬೇಕು. ಆರೋಗ್ಯ, ವಿಜ್ಞಾನ, ಸಂಶೋಧನೆ ಎಲ್ಲ ರಂಗಗಳಲ್ಲೂ ಭಾರತ ಅಸಾಮಾನ್ಯ ಸಾಧನೆ ಮಾಡುತ್ತಿದೆ. ಇದಕ್ಕೆ ಪೂರಕವಾದ ಮಾನವ ಸಂಪನ್ಮೂಲ ಸಿದ್ಧಪಡಿಸುವ ಜವಾಬ್ದಾರಿ ಅಧ್ಯಾಪಕರ ಮೇಲಿದೆ ಎಂದು ಹೇಳಿದರು.</p>.<p>ವಿ.ವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಕುಲಸಚಿವರಾದ ಪ್ರೊ.ಎಂ.ಕೊಟ್ರೇಶ್, ಪ್ರೊ.ಎನ್.ಸತೀಶ್ಗೌಡ, ಕಾರ್ಯಕ್ರಮ ಸಂಯೋಜಕ ಎ.ಎಂ.ಮಂಜುನಾಥ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ವ್ಯಕ್ತಿತ್ವ ಮತ್ತು ರಾಷ್ಟ್ರ ನಿರ್ಮಾಣ ಅಧ್ಯಾಪಕರ ಹೊಣೆ. ಅವರು ಕರ್ತವ್ಯದಲ್ಲಿ ಪ್ರಾಮಾಣಿಕತೆ ಮೆರೆಯದೆ ಹೋದರೆ ವಿದ್ಯಾರ್ಥಿಗಳಲ್ಲಿ ಅದನ್ನು ಅಪೇಕ್ಷಿಸಲಾಗದು ಎಂದು ಬೆಂಗಳೂರು ವಿ.ವಿ ಕುಲಪತಿ ಪ್ರೊ.ಎಂ.ಜಯಕರ ಶೆಟ್ಟಿ ಅಭಿಪ್ರಾಯಪಟ್ಟರು.</p>.<p>ವಿಶ್ವವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಅಧ್ಯಾಪಕರು ತಮ್ಮ ನಡೆ, ನುಡಿಗಳಿಂದ ವಿದ್ಯಾರ್ಥಿಗಳನ್ನು ಪ್ರಭಾವಿಸಬೇಕು. ಶಿಕ್ಷಕರು ಮೌಲ್ಯಗಳ ಸಂರಕ್ಷಕರಾಗಿ ಪ್ರಸಿದ್ಧರು. ಸಮಾಜದಲ್ಲಿ ಮೌಲ್ಯಗಳು ಉಳಿಯಬೇಕಾದರೆ ಅದು ಶಿಕ್ಷಕರ ವ್ಯಕ್ತಿತ್ವದಲ್ಲಿ ಪ್ರತಿಫಲನಗೊಳ್ಳಬೇಕು. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದರು.</p>.<p>ಎಲ್ಲ ವಿದ್ಯಾರ್ಥಿಗಳನ್ನು ಸಮಾನವಾಗಿ ನೋಡುವ ವಿಶಾಲ ದೃಷ್ಟಿಕೋನ, ಮನೋಭಾವ ಹೊಂದಿರಬೇಕು. ಆರೋಗ್ಯ, ವಿಜ್ಞಾನ, ಸಂಶೋಧನೆ ಎಲ್ಲ ರಂಗಗಳಲ್ಲೂ ಭಾರತ ಅಸಾಮಾನ್ಯ ಸಾಧನೆ ಮಾಡುತ್ತಿದೆ. ಇದಕ್ಕೆ ಪೂರಕವಾದ ಮಾನವ ಸಂಪನ್ಮೂಲ ಸಿದ್ಧಪಡಿಸುವ ಜವಾಬ್ದಾರಿ ಅಧ್ಯಾಪಕರ ಮೇಲಿದೆ ಎಂದು ಹೇಳಿದರು.</p>.<p>ವಿ.ವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಕುಲಸಚಿವರಾದ ಪ್ರೊ.ಎಂ.ಕೊಟ್ರೇಶ್, ಪ್ರೊ.ಎನ್.ಸತೀಶ್ಗೌಡ, ಕಾರ್ಯಕ್ರಮ ಸಂಯೋಜಕ ಎ.ಎಂ.ಮಂಜುನಾಥ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>