<p><strong>ಶಿರಾ:</strong> ಮಾನವ ಕೇಂದ್ರಿತ ಅಭಿವೃದ್ಧಿ ಯೋಜನೆಗಳಿಂದ ಜೀವ ವೈವಿಧ್ಯತೆಗೆ ಧಕ್ಕೆ ಉಂಟಾಗುತ್ತಿದೆ. ಇದರಿಂದ ಜೀವ ಸಂಕುಲ ಅವನತಿಯತ್ತ ಸಾಗುತ್ತಿದೆ. ಪರಿಸರ ಸಂರಕ್ಷಣೆ ಮತ್ತು ಅಭಿವೃದ್ಧಿ ಸಮತೋಲನವಾಗಿ ನಡೆಯಬೇಕು ಎಂದು ಮುಖ್ಯ ಶಿಕ್ಷಕ ಶಿವಣ್ಣ ಹೇಳಿದರು.</p>.<p>ತಾಲ್ಲೂಕಿನ ಬ್ರಹ್ಮಸಂದ್ರ ಸರ್ಕಾರಿ ಪ್ರೌಢಶಾಲೆ ಧನ್ವಂತರಿ ಇಕೋ ಕ್ಲಬ್ ಮತ್ತು ಅಮಲಗೊಂದಿ ಚಿಗುರು ಯುವಜನ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಹವಾಗುಣ ಬದಲಾವಣೆ ಮತ್ತು ಜೀವನಶೈಲಿ’ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮನುಷ್ಯನ ಆಧುನಿಕ ಜೀವನಶೈಲಿಯು ಪರಿಸರಕ್ಕೆ ಹಾನಿಯನ್ನುಂಟು ಮಾಡುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯೂ ಪರಿಸರ ಸ್ನೇಹಿ ಜೀವನಶೈಲಿ ಅಳವಡಿಸಿಕೊಳ್ಳುವುದು ಅತ್ಯವಶ್ಯ ಎಂದರು.</p>.<p>ಚಿಗುರು ಯುವಜನ ಸಂಘದ ಅಧ್ಯಕ್ಷ ಮಂಜುನಾಥ್ ಅಮಲಗೊಂದಿ ಮಾತನಾಡಿ, ಜಾಗತಿಕ ತಾಪಮಾನ ಹೆಚ್ಚಾಗುತ್ತಿದೆ. ಇದರಿಂದ ಭೂಮಿ ಮೇಲೆ ಪರಿಣಾಮ ಬೀರುತ್ತಿದೆ. ಪರಿಸರದಲ್ಲಿ ಸಮತೋಲನ ಕಾಪಾಡಿಕೊಳ್ಳದಿದ್ದರೆ ಎಲ್ಲರಿಗೂ ಅಪಾಯ ಕಟ್ಟಿಟ್ಟ ಬುತ್ತಿ ಎಂದರು.</p>.<p>ಶಿಕ್ಷಕ ಗೋವಿಂದರಾಜು, ಧನ್ವಂತರಿ ಇಕೋಕ್ಲಬ್ ಕಾರ್ಯದರ್ಶಿ ಪ್ರತಿಭಾ, ಯಶೋಧ ಸಿ.ಜೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ಮಾನವ ಕೇಂದ್ರಿತ ಅಭಿವೃದ್ಧಿ ಯೋಜನೆಗಳಿಂದ ಜೀವ ವೈವಿಧ್ಯತೆಗೆ ಧಕ್ಕೆ ಉಂಟಾಗುತ್ತಿದೆ. ಇದರಿಂದ ಜೀವ ಸಂಕುಲ ಅವನತಿಯತ್ತ ಸಾಗುತ್ತಿದೆ. ಪರಿಸರ ಸಂರಕ್ಷಣೆ ಮತ್ತು ಅಭಿವೃದ್ಧಿ ಸಮತೋಲನವಾಗಿ ನಡೆಯಬೇಕು ಎಂದು ಮುಖ್ಯ ಶಿಕ್ಷಕ ಶಿವಣ್ಣ ಹೇಳಿದರು.</p>.<p>ತಾಲ್ಲೂಕಿನ ಬ್ರಹ್ಮಸಂದ್ರ ಸರ್ಕಾರಿ ಪ್ರೌಢಶಾಲೆ ಧನ್ವಂತರಿ ಇಕೋ ಕ್ಲಬ್ ಮತ್ತು ಅಮಲಗೊಂದಿ ಚಿಗುರು ಯುವಜನ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಹವಾಗುಣ ಬದಲಾವಣೆ ಮತ್ತು ಜೀವನಶೈಲಿ’ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮನುಷ್ಯನ ಆಧುನಿಕ ಜೀವನಶೈಲಿಯು ಪರಿಸರಕ್ಕೆ ಹಾನಿಯನ್ನುಂಟು ಮಾಡುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯೂ ಪರಿಸರ ಸ್ನೇಹಿ ಜೀವನಶೈಲಿ ಅಳವಡಿಸಿಕೊಳ್ಳುವುದು ಅತ್ಯವಶ್ಯ ಎಂದರು.</p>.<p>ಚಿಗುರು ಯುವಜನ ಸಂಘದ ಅಧ್ಯಕ್ಷ ಮಂಜುನಾಥ್ ಅಮಲಗೊಂದಿ ಮಾತನಾಡಿ, ಜಾಗತಿಕ ತಾಪಮಾನ ಹೆಚ್ಚಾಗುತ್ತಿದೆ. ಇದರಿಂದ ಭೂಮಿ ಮೇಲೆ ಪರಿಣಾಮ ಬೀರುತ್ತಿದೆ. ಪರಿಸರದಲ್ಲಿ ಸಮತೋಲನ ಕಾಪಾಡಿಕೊಳ್ಳದಿದ್ದರೆ ಎಲ್ಲರಿಗೂ ಅಪಾಯ ಕಟ್ಟಿಟ್ಟ ಬುತ್ತಿ ಎಂದರು.</p>.<p>ಶಿಕ್ಷಕ ಗೋವಿಂದರಾಜು, ಧನ್ವಂತರಿ ಇಕೋಕ್ಲಬ್ ಕಾರ್ಯದರ್ಶಿ ಪ್ರತಿಭಾ, ಯಶೋಧ ಸಿ.ಜೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>